Sankey flyover: ಮರ ಕಡಿಯುವ ಕಡತಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರಿಂದ ತಡೆ
ಮಲ್ಲೇಶ್ವರಂ, ಸದಾಶಿವನಗರ ಮತ್ತು ವೈಯಾಲಿಕಾವಲ್ ನಿವಾಸಿಗಳ ಸಾಮೂಹಿಕ ಸಿಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯರು ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ್ದರು.
ಬೆಂಗಳೂರು, ಮಾರ್ಚ್ 02: ನಾಗರಿಕರ ಭಾರೀ ವಿರೋಧದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಯಾಂಕಿ ಟ್ಯಾಂಕ್ ಉದ್ದಕ್ಕೂ ಮೇಲ್ಸೇತುವೆ ನಿರ್ಮಿಸುವ ವಿವಾದಾತ್ಮಕ ಯೋಜನೆಗೆ ವಿರಾಮ ನೀಡಿದೆ. ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ (ಬಿಎಂಎಲ್ಟಿಎ) ಅನುಮೋದನೆ ಪಡೆಯುವವರೆಗೆ ಮೇಲ್ಸೇತುವೆ ನಿರ್ಮಾಣ ತಡೆಹಿಡಿಯುವುದಾಗಿ ಭರವಸೆ ನೀಡಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಬುಧವಾರ ಭೇಟಿ ಮಾಡಿದ ಸಿಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯರಿಗೆ ಈ ಭರವಸೆ ನೀಡಲಾಗಿದೆ. ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕಚೇರಿಯಲ್ಲಿ ಮರಗಳ ತೆರವಿಗೆ ಅನುಮೋದನೆ ಕೋರುವ ಕಡತ ಬಾಕಿ ಉಳಿದಿದ್ದು, ಅದನ್ನು ಮುಂದುವರಿಸದಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

"30 ಮರಗಳನ್ನು ತೆರವು ಮಾಡುವ ಪ್ರಸ್ತಾವನೆ ಇದೆ. ನಾವು ಇನ್ನೂ ವಿಸ್ತರಣೆ ಮಾಡುವುದನ್ನು ಪರಿಶೀಲಿಸಿ, ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದ್ದೇವೆ. ಆದರೆ, ಅದನ್ನು ತಡೆಹಿಡಿಯುವಂತೆ ಮುಖ್ಯ ಆಯುಕ್ತರು ಆದೇಶ ನೀಡಿದ್ದಾರೆ" ಎಂದು ರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಸರೀನಾ ಸಿಕ್ಕಲಿಗಾರ್ ಮಾಹಿತಿ ನೀಡಿದ್ದಾರೆ.
ಬುಧವಾರ ಗಿರಿನಾಥ್ ಅವರನ್ನು ಭೇಟಿ ಮಾಡಿದ ಮಲ್ಲೇಶ್ವರಂ, ಸದಾಶಿವನಗರ ಮತ್ತು ವೈಯಾಲಿಕಾವಲ್ ನಿವಾಸಿಗಳ ಸಾಮೂಹಿಕ ಸಿಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯರು ವೃಕ್ಷ ಫೌಂಡೇಶನ್ ಮತ್ತು ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ಸಿದ್ಧಪಡಿಸಿದ ಪರಿಸರ ಪ್ರಭಾವದ ಮೌಲ್ಯಮಾಪನ (ಇಐಎ) ವರದಿಯನ್ನೂ ಸಲ್ಲಿಸಿದರು. ಸ್ಯಾಂಕಿ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
"ನಗರದ ಹಸಿರನ್ನು ಕಾಪಾಡಲು ನಾಗರಿಕರು ಮತ್ತು ಸರ್ಕಾರಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕೆಂಬುದು ನಮ್ಮ ಅಭೀಪ್ರಾಯ. ಈ ಮೇಲ್ಸೇತುವೆ ಮತ್ತು ರಸ್ತೆ ಅಗಲೀಕರಣ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸುವವರೆಗೆ ಮತ್ತು ಸ್ಯಾಂಕಿ ಟ್ಯಾಂಕ್ ಸರೋವರವನ್ನು ಅವೈಜ್ಞಾನಿಕ ಯೋಜನೆ ಮತ್ತು ನಿರ್ಮಾಣದಿಂದ ರಕ್ಷಿಸುವವರೆಗೆ ನಾವು ನಮ್ಮ ಪ್ರಯತ್ನಗಳನ್ನು ನಿಲ್ಲಿಸುವುದಿಲ್ಲ" ಎಂದು ಸಿಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯರಾದ ಕಿಮ್ಸುಕಾ ಹೇಳಿದ್ದಾರೆ.

ಇನ್ನು, ಬಿಎಂಎಲ್ಟಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಸಭೆಯನ್ನು ಕೂಡ ಕರೆದಿಲ್ಲ. ಅದಕ್ಕಿಂತ ಮುಖ್ಯವಾಗಿ, ಸರ್ಕಾರವು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರಕ್ಕೆ ಸದಸ್ಯರನ್ನು ನೇಮಿಸಿಲ್ಲ. ಹೀಗಾಗಿ ಈ ಅರ್ಜಿಗಳ ಬಗ್ಗೆ ಹೇಗೆ ನಿರ್ಧಾರ ತೆಗೆದುಕೊಲ್ಳಬೇಕು ಎಂಬ ಬಗ್ಗೆ ಇನ್ನು ಸ್ಪಷ್ಟತೆ ಸಿಕ್ಕಿಲ್ಲ.
ವಿಧಾನಸಭಾ ಚುನಾವಣೆ ಹತ್ತಿರವಿರುವ ಕಾರಣ ಹೊಸ ಸರ್ಕಾರ ರಚನೆಯಾದ ನಂತರವೇ ಬಿಎಂಎಲ್ಟಿಎ ಪೂರ್ಣ ಸ್ವರೂಪ ಪಡೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಅನಗತ್ಯ ವಿವಾದಗಳಿಗೆ ಕಾರಣವಾಗುವ ಹಿನ್ನೆಲೆ ಸದ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಬಿಎಂಎಲ್ಟಿಎಗೆ ಸದಸ್ಯರನ್ನು ನೇಮಿಸುವ ಸಾಧ್ಯತೆಯಿಲ್ಲ. ಹೀಗಾಗಿ ಸ್ಯಾಂಕಿ ಮೇಲ್ಸೇತುವೆ ಯೋಜನೆ ಈಗಲೇ ಆರಂಭವಾಗುವ ಆತಂಕ ಸಿಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯರಿಗಿಲ್ಲ.
ಮಾಹಿತಿ ಕೃಪೆ- ಡೆಕ್ಕನ್ ಹೆರಾಲ್ಡ್
-
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ










Click it and Unblock the Notifications