ಜಾವಗಲ್ ಶ್ರೀನಾಥ್ ರಿಂದ ಸಂಸ್ಕೃತ ಸಂಭಾಷಣೆ ಕೇಳಿ, ಇದು ಸಂಸ್ಕೃತ ಭಾರತೀ ಸಮ್ಮೇಳನ
ಬೆಂಗಳೂರು, ಜನವರಿ 4: ನಾನು ಶಾಲೆಯಲ್ಲಿ ಸಂಸ್ಕೃತ ಕಲಿತಿದ್ದೀನಿ. ಶ್ರೀಲಂಕಾ ಪ್ರವಾಸಕ್ಕೆ ಹೋಗಿದ್ದಾಗ ಅಲ್ಲಿನ ಸಿಂಹಳೀಯ ಭಾಷೆಯ ಹಲವು ಪದಗಳು ಸುಲಭವಾಗಿ ಅರ್ಥವಾದವು. ಅದು ನನ್ನ ಶಾಲಾ ದಿನಗಳ ನೆನಪಿನ ಕಾರಣಕ್ಕೆ. ಏಕೆಂದರೆ ಸಿಂಹಳೀಯ ಭಾಷೆಯಲ್ಲಿ ಸಂಸ್ಕೃತ ಒಳಗೊಂಡಿದೆ ಎಂದು ಕ್ರಿಕೆಟರ್ ಜಾವಗಲ್ ಶ್ರೀನಾಥ್ ಶುಕ್ರವಾರ ಹೇಳುವ ಮೂಲಕ ಹಲವರ ಹುಬ್ಬೇರುವಂತೆ ಮಾಡಿದರು.
ರಾಜರಾಜೇಶ್ವರಿ ನಗರದಲ್ಲಿ ಸಂಸ್ಕೃತ ಭಾರತೀ ಆಯೋಜಿಸಿರುವ ಮೂರು ದಿನಗಳ ಪ್ರಾಂತ ಸಮ್ಮೇಳನ ಕಾರ್ಯಕ್ರಮದ ಪೈಕಿ ಶುಕ್ರವಾರ ವಸ್ತುಪ್ರದರ್ಶನ ಉದ್ಘಾಟಿಸಿ, ಅವರು ಮಾತನಾಡಿದರು. ಸಂಸ್ಕೃತ ನಮ್ಮ ಜೀವನದ ಭಾಗ. ಎಲ್ಲರೂ ಅದನ್ನು ಕಲಿಯಲಿ ಎಂದು ನಾನು ಆಶಿಸುತ್ತೇನೆ ಎಂದರು.
ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ ವೇಣುಗೋಪಾಲ ಮಾತನಾಡಿ, ಸಂಸ್ಕೃತಕ್ಕೆ ಬಹಳ ದೊಡ್ಡ ಪರಂಪರೆ ಇದೆ. ಈ ಭಾಷೆಯು ಒಳಗೊಂಡಿರುವ ಹಲವು ವಿಷಯಗಳ ಬಗ್ಗೆ ಸಂಶೋಧನೆಗಳಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಂಸ್ಕೃತ ಭಾರತೀಯ ದತ್ತಾತ್ರೇಯ ವಜ್ರಳ್ಳಿ ಮಾತನಾಡಿ, ಮೂವತ್ತು ವರ್ಷಗಳಿಂದ ಸಂಸ್ಕೃತ ಭಾರತೀ ಪ್ರಪಂಚದಾದ್ಯಂತ ಸಂಸ್ಕೃತ ಭಾಷೆಯನ್ನು ತಲುಪಿಸುತ್ತಿದೆ. ಹತ್ತು ದಿನಗಳ ಸಂಭಾಷಣಾ ಶಿಬಿರದ ಮೂಲಕವೇ ಎಲ್ಲರಿಗೂ ಭಾಷೆಯ ಬಗ್ಗೆ ಆಸಕ್ತಿ-ಜ್ಞಾನ ಮೂಡಿಸುತ್ತಿದೆ ಎಂದರು.
ಪ್ರತಿಯೊಬ್ಬರ ಜೀವನದಲ್ಲೂ ಸಂಸ್ಕೃತದ ಪ್ರಭಾವ ಇದೆ. ನಮ್ಮ ದಿನ ಬಳಕೆಯ ಭಾಷಾ ಪ್ರಯೋಗವನ್ನೇ ಸರಿಯಾಗಿ ಗಮನಿಸಿಕೊಂಡರೆ ಅದು ತಿಳಿಯುತ್ತದೆ ಎಂದು ತಿರುಚ್ಚಿ ಸಂಸ್ಥಾನ ಜಯೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.
-
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications