ಲಾಡ್ ಲಡಾಯಿ : ದೊರಸ್ವಾಮಿಯಿಂದ ಸಿಎಂಗೆ ಪತ್ರ
ಬೆಂಗಳೂರು, ನ.12 : ಕೆಲವು ದಿನಗಳಿಂದ ತಣ್ಣಗಾಗಿದ್ದ ಅಕ್ರಮ ಗಣಿಗಾರಿಕೆಯಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಸಚಿವ ಸಂತೋಷ್ ಲಾಡ್ ವಿವಾದ ಮತ್ತೆ ಭುಗಿಲೆದ್ದಿದೆ. ಬೇಲೇಕೇರಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲಾಡ್ ಪಾತ್ರ ಕುರಿತು ಸ್ಪಷ್ಟನೆ ನೀಡಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಶಾದಿ ಭಾಗ್ಯ ಯೋಜನೆ, ಮೂಢನಂಬಿಕೆ ನಿಷೇಧ ಕಾಯ್ದೆ ವಿಚಾರಳಗ ವಿವಾದದಿಂದಾಗಿ ವಾರ್ತಾ ಮತ್ತು ಮೂಲಭೂತ ಸೌಕರ್ಯ ಖಾತೆ ಸಚಿವ ಸಂತೋಷ್ ಲಾಡ್ ಅವರ ವಿರುದ್ಧದ ಆರೋಪಗಳು ತಣ್ಣಗಾಗಿತ್ತು. ಸದ್ಯ ಎಚ್.ಎಸ್.ದೊರೆಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಈಗಾಗಲೇ ಒಟ್ಟು ಮೂರು ಬಾರಿ ಸಂತೋಷ್ ಲಾಡ್ ವಿಚಾರಕ್ಕೆ ಕುರಿತಂತೆ ದೊರೆಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸೋಮವಾರ ಬರೆದ ಪತ್ರದಲ್ಲಿ ಬೇಲೆಕೇರಿ ಬಂದರಿನಲ್ಲಿ ಸಂಗ್ರಹ ಮಾಡಲಾಗಿದ್ದ ಅದಿರು ಸಂತೋಷ್ ಲಾಡ್ ಕಂಪನಿಗೆ ಸೇರಿದ್ದೋ? ಅಥವಾ ಅನಿಲ್ ಲಾಡ್ ಕಂಪನಿಯದೋ? ಎಂಬುದು ಗೊತ್ತಾಗಬೇಕಿದೆ ಎಂದು ಮಾಹಿತಿ ಕೇಳಿದ್ದಾರೆ.
ಪತ್ರದ ಸಾರಾಂಶ : ಸಂತೋಷ್ ಲಾಡ್ ಸಿ ಕೆಟಗೆರಿ ಗಣಿ ಗುತ್ತಿಗೆ ಲೈಸೆನ್ಸ್ದಾರರಾಗಿದ್ದು, ಸುಪ್ರೀಂಕೋರ್ಟ್ ಗೆ ತಮ್ಮ ಲೈಸೆನ್ಸ್ ಬಿ ಕೆಟಗೆರಿಗೆ ಸೇರ್ಪಡೆ ಮಾಡಿ ಎಂಬ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ನಿರಾಕರಿಸಿ ತೀರ್ಪು ನೀಡಿದ ನಂತರ ಅದಕ್ಕೆ ತಡೆಯಾಜ್ಞೆ ಕೋರಿ ಐವರು ನ್ಯಾಯಮೂರ್ತಿಗಳ ಸಮಿತಿ ಮುಂದೆ ಅರ್ಜಿ ಹಾಕಿಕೊಂಡಿದ್ದಾರೆ.
ಅನಿಲ್ ಲಾಡ್ ಅವರ ಕಂಪನಿಗೆ 10 ಸಾವಿರ ಟನ್ ಅದಿರು ಸಾಗಣೆಗೆ ಪರವಾನಗಿ ನೀಡಲಾಗಿತ್ತು. ಆದರೆ, ಅವರ ಕಂಪನಿ ಬೇಲೆಕೇರಿ ಬಂದರಿನಲ್ಲಿ 56,000 ಟನ್ ಅದಿರು ದಾಸ್ತಾನು ಮಾಡಿರುವುದರಿಂದ ಪ್ರಕರಣ ದಾಖಲಿಸಲಾಗಿದೆ.
ಅನಿಲ್ ಲಾಡ್ ಕಂಪನಿ ಹಾಗೂ ಸಂತೋಷ್ ಲಾಡ್ ಕಂಪನಿ ಬೇರೆ-ಬೇರೆಯೇ? ಬೇಲೆಕೇರಿ ಬಂದರಿನಲ್ಲಿ ಸಂತೋಷ್ ಲಾಡ್ ಕಂಪನಿ ಎಷ್ಟು ಅದಿರನ್ನು ದಾಸ್ತಾನು ಮಾಡಿತ್ತು?. ಎಷ್ಟು ಅದಿರು ಸಾಗಣೆಗೆ ಪರ್ಮಿಟ್ ನೀಡಲಾಗಿತ್ತು? ಒಟ್ಟಾರೆ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಸಂತೋಷ್ ಲಾಡ್ ಹಾಗೂ ಅನಿಲ್ ಲಾಡ್ ಪಾತ್ರವೇನು ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೇಳಿದ್ದಾರೆ.
ಸಂತೋಷ್ ಲಾಡ್ ವಿಚಾರಕ್ಕೆ ಸಂಬಂಧಿಸಿದಂತೆ ದೊರೆಸ್ವಾಮಿ ಮೂರು ಬಾರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲು ಬಳಿ ಲಾಡ್ ಸಮರ್ಥಿಸಿಕೊಂಡಿರುವ ಸಿಎಂ ದೊರಸ್ವಾಮಿ ಅವರ ಪತ್ರಕ್ಕೆ ಏನು ಉತ್ತರ ನೀಡುತ್ತಾರೆ? ಎಂದು ಕಾದು ನೋಡಬೇಕಾಗಿದೆ. (ಸಂತೋಷ್ ಲಾಡ್ ವಿರುದ್ಧ ಸಿಎಂಗೆ ದೊರೆಸ್ವಾಮಿ ಪತ್ರ )
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications