ಸಂತೋಷ್ ಲಾಡ್ ವಿರುದ್ಧ ಸಿಎಂಗೆ ದೊರೆಸ್ವಾಮಿ ಪತ್ರ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವಾಗಲೇ ಸಂಪುಟದಲ್ಲಿ ಕಳಂಕಿತರಿಗೆ ಸಚಿವ ಸ್ಥಾನ ನೀಡಬೇಡಿ ಎಂದು ಎಚ್.ಎಸ್.ದೊರೆಸ್ವಾಮಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು. ಸದ್ಯ ಸಂತೋಷ್ ಲಾಡ್ ಮೇಲೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಪತ್ರ ಬರೆದಿದ್ದಾರೆ.
ಮೂಲ ಸೌಕರ್ಯ ಮತ್ತು ವಾರ್ತ ಸಚಿವ ಸಂತೋಷ್ ಲಾಡ್ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವರು ಅಪರಾಧಿ ಸ್ಥಾನದಲ್ಲಿರುವುದರಿಂದ ಸಂಪುಟದಲ್ಲಿ ಅವರನ್ನು ಮುಂದುವರೆಸಬೇಕೆ? ಎಂದು ದೊರೆಸ್ವಾಮಿ ಪ್ರಶ್ನಿಸಿದ್ದಾರೆ.
ಲಾಡ್ ಒಡೆತನದ ವಿ.ಎಸ್. ಲಾಡ್ ಅಂಡ್ ಸನ್ಸ್ ಕಂಪನಿ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದರಿಂದಲೇ ಅವರ ಕಂಪನಿ ಲೈಸೆನ್ಸ್ ನವೀಕರಿಸಬಾರದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದು ಭಾವಿಸುತ್ತೇನೆ.
ಅವರ ಮೇಲಿನ ಅಪಾದನೆಗಳಿಂದ ಮುಕ್ತವಾಗುವ ತನಕ ಸಂಪುಟದಿಂದ ದೂರವಿಡುವುದು ಒಳಿತು ಎಂದು ದೊರೆಸ್ವಾಮಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಪ್ರಾರಂಭಾಗಿದೆ.
ಈಗಾಗಲೇ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್, ಪ್ರತಿಪಕ್ಷ ಬಿಜೆಪಿ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸುತ್ತಿವೆ. ಈ ಕುರಿತು ಬಿಜೆಪಿ ಬೆಂಗಳೂರಿನಲ್ಲಿ ಸೆ.30ರ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿ ಮನವಿ ಮಾಡಿದೆ. ಸಂತೋಷ್ ಲಾಡ್ ರಾಜೀನಾಮೆಗೆ ಎಲ್ಲರೂ ಪಟ್ಟು ಹಿಡಿದಿದ್ದರೂ, ಸಿದ್ದರಾಮಯ್ಯ ಅವರ ವಿರುದ್ಧ ದಾಖಲೆಗಳು ಇಲ್ಲ ಎಂದು ಹೇಳುತ್ತಿದ್ದಾರೆ. (ಸಂತೋಷ್ ಲಾಡ್ ವಿರುದ್ಧ ಅಖಾಡಕ್ಕಿಳಿದ ಬಿಜೆಪಿ)
ಸದ್ಯ ಸಂತೋಷ್ ಲಾಡ್ ವಿರುದ್ಧದ ಹೋರಾಟಕ್ಕೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಧುಮುಕಿರುವುದು ಸಿಎಂಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಲಾಡ್ ರನ್ನು ಸಂಪುಟದಿಂದ ಕೈ ಬಿಡುವುದಿಲ್ಲ ಎಂದಿದ್ದ ಮುಖ್ಯಮಂತ್ರಿಗಳ ಮುಂದಿನ ನಿಲುವು ಇನ್ನೂ ನಿಗೂಢ. (ಸಂತೋಷ್ ಲಾಡ್ ರಾಜೀನಾಮೆಗೆ ಹಿರೇಮಠ್ ಆಗ್ರಹ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications