ಸಾರಕ್ಕಿ ಕೆರೆ ತೆರವು: ದಿಢೀರ್ ಕುಸಿದು ಬಿದ್ದ ಕಟ್ಟಡ
ಬೆಂಗಳೂರು, ಏ. 17: ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದಿದೆ. ಡಿಸಿ ಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು 800 ಸಿಬ್ಬಂದಿ ಭಾಗಿಯಾಗಿದ್ದಾರೆ. ಮೂರು ತಂಡಗಳಾಗಿ ಕೆಲಸ ನಡೆಯುತ್ತಿದೆ.
ಶುಕ್ರವಾರ ಬೆಳಗ್ಗೆ 7.30 ಕ್ಕೆ ತರವು ಕೆಲಸ ಆರಂಭ ಮಾಡಲಾಗಿದ್ದು ಸಂಜೆಯವರೆಗೂ ನಡೆಯಲಿದೆ. ಶುಕ್ರವಾರ ಬೆಳಗ್ಗೆ 7 ಅಡಿ ಕಟ್ಟಡವೊಂದನ್ನು ಕೆಡವುತ್ತಿದ್ದಾಗ ಸಂಭವಿಸಬಹುದಾಗಿದ್ದ ಅಪಘಾತ ಕೊಂಚದರಲ್ಲಿ ತಪ್ಪಿದೆ. ಹಿಟಾಚಿ ಮೂಲಕ ಕಾರ್ಯಾಚರಣೆ ಮಾಡುತ್ತಿದ್ದಾಗ ಏಳು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿಮ ಯಾರಿಗೂ ಅಪಾಯವಾಗಿಲ್ಲ.[ಡಿಸಿ ಶಂಕರ್ ದಿಟ್ಟ ನಡೆ: ಸಾರಕ್ಕಿ ಕೆರೆ ತೆರವು ಸರ್ಕಾರಕ್ಕೆಷ್ಟು ಲಾಭ?]

ಕಟ್ಟಡ ಕುಸಿದು ಬಿದ್ದ ಪರಿಣಾಮ ಹಿಟಾಚಿ ಯಂತ್ರದ ಮೇಲೆ ಅವಶೇಷಗಳು ಬಿದ್ದವು. ಚಾಲಕ ಕೊಂಚದರಲ್ಲಿ ಪಾರಾಗಿದ್ದು ಯಂತ್ರವನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ.
ಈ ರೀತಿಯ ಮೂರ್ನಾಲ್ಕು ಅಪಾರ್ಟ್ ಮೆಂಟ್ ಗಳನ್ನು ತೆರವು ಮಾಡಬೇಕಿದೆ. 8 ಜೆಸಿಬಿಗಳು ಕೆಲಸದಲ್ಲಿ ತೊಡಗಿಕೊಂಡಿದ್ದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗದೆ. ಪೂರ್ವಾಂಕರ ಅಪಾರ್ಟ್ ಮೆಂಟ್ ನಿಂದಲೂ ಜಾಗ ಒತ್ತುವರಿಯಾಗಿದೆ ಎಂದು ಹೇಳಲಾಗಿದೆ.[ಸಾರಕ್ಕಿ ಕೆರೆ ತೆರವು: 2 ಸಾವಿರ ಕೋಟಿ ಮೌಲ್ಯದ ಜಾಗ ವಶ]
ಕಟ್ಟಡ ದೀಢಿರ್ ಎಂದು ಕುಸಿದುಬಿದ್ದ ಪರಿಣಾಮ ಕಾರ್ಯಾಚರಣೆಗೆ ಅರ್ಧ ಗಂಟೆ ಅಡ್ಡಿ ಉಂಟಾಗಿತ್ತು. 82 ಎಕರೆ ವಿಸ್ತಾರದ ಸಾರಕ್ಕಿ ಕೆರೆಯಲ್ಲಿ ಸುಮಾರು 32 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿತ್ತು. ಹೈ ಕೋರ್ಟ್ ಆದೇಶದಂತೆ ಜಿಲ್ಲಾರಧಿಕಾರಿ ಶಂಕರ್ ತೆರವು ಕಾರ್ಯಾಚರಣೆಯನ್ನು ಗುರುವಾರ ಆರಂಭಿಸಿದ್ದರು. ನಾಳೆ ಬಂದ್ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತ ಮಾಡುವ ಸಂಭವವಿದ್ದು ಮತ್ತೆ ಭಾನುವಾರ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications