ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ಕೊಟ್ಟ ನಟಿ ಸರೋಜಾದೇವಿ
ಬೆಂಗಳೂರು, ಏಪ್ರಿಲ್ 2: ಹಿರಿಯ ನಟಿ ಬಿ.ಸರೋಜಾದೇವಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೈಗಾರಿಕೋದ್ಯಮಗಳು, ಕಾರ್ಪೊರೇಟ್ ಉದ್ಯಮಿಗಳು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಳಿಕೊಂಡಿದ್ದರು.
ಮುಖ್ಯಮಂತ್ರಿಗಳ ಕರೆಗೆ ಸ್ಪಂದಿಸಿರುವ ಹಿರಿಯ ಕಲಾವಿದೆ ಬಿ.ಸರೋಜಾದೇವಿ 5 ಲಕ್ಷ ರೂಪಾಯಿಯ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.

ಈ ಹಿಂದೆ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೋವಿಡ್-19 ವಿರುದ್ಧ ಹೋರಾಡಲು 50 ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದರು.
ಅಂದ್ಹಾಗೆ, ಕರ್ನಾಟಕದಲ್ಲಿ ಇಲ್ಲಿಯವರೆಗೂ 121 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 10 ಮಂದಿ ಗುಣಮುಖರಾಗಿದ್ದು, 3 ಮಂದಿ ಸಾವನ್ನಪ್ಪಿದ್ದಾರೆ.












Click it and Unblock the Notifications