ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ಕೊಟ್ಟ ನಟಿ ಸರೋಜಾದೇವಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 2: ಹಿರಿಯ ನಟಿ ಬಿ.ಸರೋಜಾದೇವಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೈಗಾರಿಕೋದ್ಯಮಗಳು, ಕಾರ್ಪೊರೇಟ್ ಉದ್ಯಮಿಗಳು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಳಿಕೊಂಡಿದ್ದರು.

ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ಕೊಟ್ಟ ಸುಮಲತಾ ಅಂಬರೀಶ್ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ಕೊಟ್ಟ ಸುಮಲತಾ ಅಂಬರೀಶ್

ಮುಖ್ಯಮಂತ್ರಿಗಳ ಕರೆಗೆ ಸ್ಪಂದಿಸಿರುವ ಹಿರಿಯ ಕಲಾವಿದೆ ಬಿ.ಸರೋಜಾದೇವಿ 5 ಲಕ್ಷ ರೂಪಾಯಿಯ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.

Saroja Devi Donates 5 Lakh Rupees To CM Relief Fund

ಕೊವಿಡ್19 ವಿರುದ್ಧ ಹೋರಾಡಲು ದೇಣಿಗೆ ನೀಡಿ: ಸಿಎಂ ಬಿಎಸ್ವೈ ಕೊವಿಡ್19 ವಿರುದ್ಧ ಹೋರಾಡಲು ದೇಣಿಗೆ ನೀಡಿ: ಸಿಎಂ ಬಿಎಸ್ವೈ

ಈ ಹಿಂದೆ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೋವಿಡ್-19 ವಿರುದ್ಧ ಹೋರಾಡಲು 50 ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದರು.

ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್

ಅಂದ್ಹಾಗೆ, ಕರ್ನಾಟಕದಲ್ಲಿ ಇಲ್ಲಿಯವರೆಗೂ 121 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 10 ಮಂದಿ ಗುಣಮುಖರಾಗಿದ್ದು, 3 ಮಂದಿ ಸಾವನ್ನಪ್ಪಿದ್ದಾರೆ.

English summary
Saroja Devi Donates 5 Lakh Rupees To CM Relief Fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X