ಬಿಳಿ ಸೀರೆ ಉಟ್ಟು ಸಾಮಾನ್ಯ ಖೈದಿಯಾದ ಶಶಿಕಲಾ!
ಬೆಂಗಳೂರು, ಜುಲೈ 22: ಪರಪ್ಪನ ಅಗ್ರಹಾರದಲ್ಲಿ ಖೈದಿಯಾಗಿದ್ದರೂ, ಸಕಲ ಸೌಲಭ್ಯಗಳನ್ನೂ ಪಡೆಯುತ್ತಿದ್ದ ತಮಿಳುನಾಡಿನ ಶಶಿಕಲಾ ನಟರಾಜನ್ ಇದೀಗ ಸಾಮಾನ್ಯ ಖೈದಿಯಂತೆ ಬಿಳಿಸೀರೆ ಉಟ್ಟು ಕುಳಿತಿದ್ದಾರೆ! ಇದು ಕಾರಾಗೃಹ ಎಡಿಜಿಪಿ ಎನ್ ಎಸ್ ಮೇಘರಿಕ್ ಖಡಕ್ ಎಚ್ಚರಿಕೆಯ ಫಲ!
ಹೌದು, ನಿನ್ನೆ(ಜುಲೈ 21) ತಾನೇ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದ ಮೇಘರಿಕ್, 'ಜೈಲಿನಲ್ಲಿರುವ ಖೈದಿಗಳೆಲ್ಲರೂ ಒಂದೇ, ಯಾರಿಗೂ ವಿಶೇಷ ಸೌಲಭ್ಯ ನೀಡುವಂತಿಲ್ಲ, ನೀಡಿದಲ್ಲಿ ಅಂಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಪೂರೈಕೆಯಾಗುತ್ತಿದ್ದ ಎಣ್ಣೆ, ಬೀಡಿ, ಸಿಗರೇಟ್, ಗಾಂಜಾ ಎಲ್ಲ ವಸ್ತುಗಳಿಗೂ ಬ್ರೇಕ್ ಬಿದ್ದಿದೆ.

ಖೈದಿಗಳಿಗೆಂದೇ ಇರುವ ಅಡುಗೆ ಮನೆಯಲ್ಲಿಯೇ ಎಲ್ಲರಿಗೂ ಅಡುಗೆ ತಯಾರಾಗಬೇಕು, ಯಾರೂ ಪ್ರತ್ಯೇಕ ಅಡುಗೆಯವರನ್ನಾಗಲೀ, ಅಡುಗೆ ಮನೆಯನ್ನಾಗಲೀ ಹೊಂದುವಂತಿಲ್ಲ ಎಂದು ಮೇಘರಿಕ್ ಹೇಳಿದ್ದರು.
ಖೈದಿಗಳಲ್ಲಿ ಸಾಮಾನ್ಯ, ವಿಐಪಿ ಎಂಬ ಭೇದವಿಲ್ಲ ಎಂಬ ಅವರ ಮಾತಿನ ಪರಿಣಾಮವಾಗಿ, ಇಷ್ಟು ನೈಟಿ ತೊಟ್ಟು ಹಾಯಾಗಿರುತ್ತಿದ್ದ ಶಶಿಕಲಾ, ಬಿಳಿ ಸೀರೆ ಉಟ್ಟು ಕೂತಿದ್ದಾರೆ! ಒಟ್ಟಿನಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ನಡೆಯುತ್ತಿದೆ, ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಮಾಜಿ ಡಿಐಜಿ (ಕಾರಾಗೃಹ) ರೂಪಾ ಅವರ ವರದಿಯಿಂದಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿರುವುದಂತೂ ಸುಳ್ಳಲ್ಲ. ಆದರೆ ಇವೆಲ್ಲ ಎಷ್ಟು ದಿನ ಎಂಬುದನ್ನು ಮಾತ್ರ ಕಾದುನೋಡಬೇಕಷ್ಟೆ!
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications