ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
ಬೆಂಗಳೂರು, ಜನವರಿ 27: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವಿ.ಕೆ. ಶಶಿಕಲಾ ಅವರ ಶಿಕ್ಷೆಯ ಅವಧಿ ಬುಧವಾರ ಅಂತ್ಯಗೊಂಡಿದ್ದು, ಅವರು ಅಧಿಕೃತವಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಕೊರೊನಾ ವೈರಸ್ ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ಕೆಲವು ದಿನ ಅಲ್ಲಿಯೇ ಇರುವ ಸಾಧ್ಯತೆ ಇದೆ.
ಶಶಿಕಲಾ ಅವರ ಜೈಲು ಶಿಕ್ಷೆಯ ಅವಧಿಯು ಜ. 27ಕ್ಕೆ ಮುಕ್ತಾಯಗೊಂಡಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕರ ಕಾರ್ಯಾಲಯವು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಪತ್ರದಲ್ಲಿ ತಿಳಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರಿಗೆ 2017ರಲ್ಲಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಅವರ ಶಿಕ್ಷೆ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಅವರು ಇನ್ನು ಮುಂದೆ ಕೈದಿಯಾಗಿ ವಿಶೇಷ ಆರೈಕೆ ಹಾಗೂ ಭದ್ರತೆಯೊಂದಿಗೆ ಚಿಕಿತ್ಸೆ ಪಡೆಯದೆ ಸಾಮಾನ್ಯ ರೋಗಿಯಾಗಲಿದ್ದಾರೆ. ಮುಂದೆ ಓದಿ.

ಸಾಮಾನ್ಯ ರೋಗಿಯಾಗಿ ಚಿಕಿತ್ಸೆ
ಶಶಿಕಲಾ ಅವರನ್ನು ಜ. 27ರಂದು ಕಾರಾಗೃಹದಿಂದ ಬಿಡುಗಡೆಗೊಳಿಸಲಾಗುತ್ತಿದೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಮುಂದುವರಿಸುವ ಅವಶ್ಯಕತೆ ಇದ್ದರೆ ಸಾಮಾನ್ಯ ರೋಗಿಯಾಗಿ ಪರಿಗಣಿಸಿ ಚಿಕಿತ್ಸೆ ಮುಂದುವರಿಸಬಹುದು. ಇಲ್ಲವಾದರೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು. ಅವರನ್ನು ಪುನಃ ಜೈಲಿಗೆ ಕಳುಹಿಸುವ ಅವಶ್ಯಕತೆ ಇರುವುದಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಕ್ರಿಯೆಗಳಿಗೆ ಸಹಿ
ಪರಪ್ಪನ ಅಗ್ರಹಾರದ ಚೀಫ್ ಸುಪರಿಂಟೆಂಡ್ ಶೇಷಮೂರ್ತಿ ಮತ್ತು ಸುಪರಿಟೆಂಡೆಂಟ್ ಲತಾ ಅವರು ವಿಕ್ಟೋರಿಯಾ ಆಸ್ಪತ್ರೆಯ ಡೀನ್ ಜಯಂತಿ ಅವರನ್ನು ಭೇಟಿಯಾಗಿ, ಅವರ ನೆರವಿನಿಂದ ಶಶಿಕಲಾ ಬಿಡುಗಡೆಗೆ ಅಗತ್ಯವಾದ ಪ್ರಕ್ರಿಯೆಗಳಿಗೆ ಸಹಿ ಹಾಕಿಸಿದರು.

ಶಶಿಕಲಾ ಆರೋಗ್ಯ ಚೇತರಿಕೆ
ಶಶಿಕಲಾ ಅವರ ಆರೋಗ್ಯದ ಕುರಿತು ಬುಧವಾರ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯಕೀಯ ವರದಿ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರ ಹಾಗೂ ಸುಧಾರಣೆಯಾಗಿದೆ. ಅವರು ಚೆನ್ನಾಗಿ ಆಹಾರ ಸೇವಿಸುತ್ತಿದ್ದಾರೆ. ಬೆಂಬಲದ ಸಹಾಯದೊಂದಿಗೆ ಅವರು ನಡೆದಾಡಬಲ್ಲರು ಎಂದು ವರದಿ ತಿಳಿಸಿದೆ. ಕೋವಿಡ್-19 ಶಿಷ್ಟಾಚಾರಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಅದು ಹೇಳಿದೆ.
Recommended Video

ಇಳವರಸಿ, ಸುಧಾಕರನ್
ಶಶಿಕಲಾ ಅವರೊಂದಿಗೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಅವರ ಆಪ್ತೆ ಇಳವರಸಿ ಕೂಡ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೂ ಕೂಡ ಸಾಮಾನ್ಯ ರೋಗಿಯಾಗಿ ಚಿಕಿತ್ಸೆ ಪಡೆಯಲಿದ್ದಾರೆ. ಇದೇ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಸುಧಾಕರನ್ ಸಹ ಬಿಡುಗಡೆಯಾಗುತ್ತಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications