10 ಕೋಟಿ ದಂಡ ಪಾವತಿಸಿ, ಬಿಡುಗಡೆಯ ಹೊಸ್ತಿಲಲ್ಲಿ ಶಶಿಕಲಾ
ಬೆಂಗಳೂರು, ನ. 18: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಅವರು ಇಂದು 10 ಕೋಟಿ ರು ಭಾರಿ ದಂಡವನ್ನು ಕೋರ್ಟಿನಲ್ಲಿ ಕಟ್ಟಿದ್ದಾರೆ. ಈ ಮೂಲಕ ಜೈಲಿನಿಂದ ಬಿಡುಗಡೆಗೊಳ್ಳುವ ಹೊಸ್ತಿಲಲ್ಲಿ ನಿಂತಿದ್ದಾರೆ. ಒಂದು ವೇಳೆ ಈ ಭಾರಿ ಮೊತ್ತದ ದಂಡ ಪಾವತಿಸದಿದ್ದರೆ, ಇನ್ನೊಂದು ವರ್ಷ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು.
ಈ ಪ್ರಕರಣದಲ್ಲಿ ಶಶಿಕಲಾಗೆ ನಾಲ್ಕು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದ್ದು, 10 ಕೊಟಿ ರೂ ದಂಡವನ್ನು ಆಕೆ ನ್ಯಾಯಾಲಯಕ್ಕೆ ಕಟ್ಟಬೇಕಿತ್ತು. ಒಂದೊಮ್ಮೆ ದಂಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಒಂದು ವರ್ಷಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಾಗಿತ್ತು.
ಶಶಿಕಲಾ ಅವರು 1997 ಹಾಗೂ 2014ರಲ್ಲಿ 35 ದಿನಗಳು, 2017ರಲ್ಲಿ 17 ದಿನಗಳ ಪೆರೋಲ್ ಪಡೆದುಕೊಂಡಿದ್ದರು. ಫೆಬ್ರವರಿ 15, 2017ರಲ್ಲಿ ಬಂದ ಕೋರ್ಟ್ ಆದೇಶದಂತೆ ಶಶಿಕಲಾ ಹಾಗೂ ಇತರರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದರು. ಶಶಿಕಲಾ ಅವರು ತಮ್ಮ ಪತಿ ಎಂ.ನಟರಾಜನ್ ನಿಧನರಾದಾಗ ಪೆರೋಲ್ ಮೇಲೆ 15 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು. ತಂಜಾವೂರಿನಲ್ಲಿ ಪತಿಯ ಅಂತ್ಯಸಂಸ್ಕಾರ ವಿಧಿ ಮುಗಿಸಿಕೊಂಡು ಜೈಲಿಗೆ ಮರಳಿದ್ದರು.

ಡಿಮ್ಯಾಂಡ್ ಡ್ರಾಫ್ಟ್ ಮೂಲಕ ದಂಡ ಪಾವತಿಸಿದ ಶಶಿಕಲಾ
ಜಯಲಲಿತಾಗೆ 100 ಕೋಟಿ ರೂ., ಶಶಿಕಲಾ, ಇಳವರಸಿ, ಸುಧಾಕರನ್ಗೆ ತಲಾ 10 ಕೋಟಿ ರೂ. ದಂಡ ವಿಧಿಸಿದ್ದರು. ಒಂದೊಮ್ಮೆ ದಂಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಇನ್ನೂ ಒಂದು ವರ್ಷಗಳ ಕಾಲ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿತ್ತು. ಅದರಂತೆ, ಬುಧವಾರ(ನ.18) 34ನೇ ಸಿಟಿ ಸಿವಿಎಲ್ ನ್ಯಾಯಾಲಯಕ್ಕೆ 10,00,10,000 ರುಗಳನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಲಾಗಿದೆ, ಜೊತೆಗೆ ಆದಾಯ ತೆರಿಗೆ ಇಲಾಖೆಯಿಂದ ನೋ ಆಬ್ಜೆಕ್ಷನ್ ಸರ್ಟಿಫಿಕೇಟ್ ಸಲ್ಲಿಸಲಾಗಿದೆ ಎಂದು ಶಶಿಕಲಾ ಪರ ವಕೀಲ ಎನ್ ರಾಜ ಸೆಂತೂರ್ ಪಾಂಡಿಯನ್ ತಿಳಿಸಿದ್ದಾರೆ.

ಜನವರಿ 27, 2020ರಂದು ಬಿಡುಗಡೆ ಸಾಧ್ಯತೆ
ಶಶಿಕಲಾ ದತ್ತು ಪುತ್ರ ವಿಎನ್ ಸುಧಾಕರನ್, ಜೆ ಇಳವರಸಿ ಹಾಗೂ ಶಿಶಿಕಲಾ ಅವರಿಗೆ 2017ರ ಫೆಬ್ರವರಿ 15ರಂದು ಜೈಲುಶಿಕ್ಷೆ ಪ್ರಕಟವಾಗಿತ್ತು. 2014ರ ಸೆಪ್ಟೆಂಬರ್ ನಲ್ಲಿ ಸ್ಪೆಷಲ್ ಟ್ರಯಲ್ ಕೋರ್ಟ್ ನ್ಯಾ. ಜಾನ್ ಮೈಕೇಲ್ ಕನ್ಹಾ ಐಪಿಸಿ ಸೆಕ್ಷನ್ 109ರಡಿ ಜೆ ಜಯಲಲಿತಾ, ಶಶಿಕಲಾ, ಸುಧಾಕರನ್, ಇಳವರಸಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು. ಈಗ ದಂಡ ಪಾವತಿಸಿರುವುದರಿಂದ ನಿಗದಿಯಂತೆ ಜನವರಿ 27, 2021ರಂದು ಬಿಡುಗಡೆಯಾಗಬಹುದು. ದಂಡ ಪಾವತಿಸಿದ ಬಗ್ಗೆ ನ್ಯಾಯಾಲಯದಿಂದ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಿಗೆ ಪತ್ರ ತಲುಪಿದ ಬಳಿಕ ಬಿಡುಗಡೆ ಕುರಿತ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಧಿಕೃತವಾಗಿ ಮಾಹಿತಿ ಬಂದಿದೆ.

ಶಶಿಕಲಾ ಕುಟುಂಬಸ್ಥರ ಕತೆಯೇನು?
ಶಶಿಕಲಾ ಪರ ವಕೀಲ ಎನ್ ರಾಜ ಸೆಂತೂರ್ ಪಾಂಡಿಯನ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಶಶಿಕಲಾ, ವಿಎನ್ ಸುಧಾಕರನ್, ಜೆ ಇಳವರಸಿ ಅವರಿಗೂ 10ಕೋಟಿ ಪ್ಲಸ್ 10 ಸಾವಿರ ರು ದಂಡ ವಿಧಿಸಲಾಗಿದ್ದು, ಅವರು ಕೂಡಾ ದಂಡ ವಿಧಿಸಿದ ಬಳಿಕ ಬಿಡುಗಡೆಗೆ ಅರ್ಹರಾಗುತ್ತದೆ. ಅವರು ದಂಡ ವಿಧಿಸಲು ಸಿದ್ಧವಾಗಿದ್ದು, ಈಗಾಗಲೆ ನ್ಯಾಯಾಲಯಕ್ಕೆ ತಿಳಿಸಲಾಗಿದ್ದು, ಆದಾಯ ತೆರಿಗೆ ಇಲಾಖೆಯಿಂದ ನೋ ಆಬ್ಜೆಕ್ಷನ್ ಸರ್ಟಿಫಿಕೇಟ್ ಪಡೆದು, ಡಿಮ್ಯಾಂಡ್ ಡ್ರಾಫ್ಟ್ ಮೂಲಕ ದಂಡ ಪಾವತಿಸಲಾಗುತ್ತದೆ ಎಂದರು.

ತಮಿಳುನಾಡಿನ ಮುಖ್ಯಮಂತ್ರಿ ಪ್ರತಿಕ್ರಿಯೆ
ತಮಿಳುನಾಡಿನ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಶಶಿಕಲಾ ನಟರಾಜನ್ ಅವರ ಬಿಡುಗಡೆ ಬಗ್ಗೆ ಬಂದಿರುವ ಸುದ್ದಿಗೆ ಪ್ರತಿಕ್ರಿಯಿಸಿ, ಶಶಿಕಲಾ ಅವರು ಬಿಡುಗಡೆಯಾದ ಮಾತ್ರಕ್ಕೆ ಅವರ ಬಗ್ಗೆ ಎಐಎಡಿಎಂಕೆ ನಿಲುವು ಬದಲಾಗುವುದಿಲ್ಲ. ಶಶಿಕಲಾ ಹಾಗೂ ಅವರ ಕುಟುಂಬಸ್ಥರನ್ನು ಪಕ್ಷ ಹಾಗೂ ಸರ್ಕಾರದಿಂದ ದೂರ ಇರಿಸಲು ಎಂದೋ ನಿರ್ಧರಿಸಿ ಆಗಿದೆ. ಈ ಬಗ್ಗೆ ಮತ್ತೆ ಚರ್ಚೆಗೆ ಆಸ್ಪದವಿಲ್ಲ. ಈ ಬಗ್ಗೆ ನಮ್ಮ ನಿಲುವು ಬದಲಾಗುವುದಿಲ್ಲ ಎಂದು ಕೊಯಮತ್ತೂರಿನಲ್ಲಿ ಇಂದು ಪ್ರತಿಕ್ರಿಯಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷದ ಅಧಿಕೃತ ಸಿಎಂ ಅಭ್ಯರ್ಥಿಯಾಗಿ ಪಳನಿಸ್ವಾಮಿ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್











Click it and Unblock the Notifications