ಆನೇಕಲ್ ಫಾರ್ಮ್ ಹೌಸ್ ಬದಲಿಗೆ ದೇವನಹಳ್ಳಿ ರೆಸಾರ್ಟಿಗೆ ಶಶಿಕಲಾ
ಬೆಂಗಳೂರು, ಜನವರಿ 31: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಶಶಿಕಲಾ ನಟರಾಜನ್ ಅವರು ಜೈಲು ಹಾಗೂ ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಎಲ್ಲಿಗೆ ತೆರಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಕೊವಿಡ್ 19 ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಶಶಿಕಲಾ ಅವರು ಇನ್ನಷ್ಟು ಕಾಲ ಬೆಂಗಳೂರಿನಲ್ಲೇ ನೆಲೆಸಲಿದ್ದಾರೆ. ಆದರೆ, ಆನೇಕಲ್ ಸಮೀಪದ ಫಾರ್ಮ್ ಹೌಸ್ ಬದಲಿಗೆ ದೇವನಹಳ್ಳಿಯ ರೆಸಾರ್ಟಿಗೆ ಶಶಿಕಲಾ ಹಾಗೂ ಪರಿವಾರ ತೆರಳಿದೆ.
ವಿಕ್ಟೋರಿಯಾ ಅಸ್ಪತ್ರೆಯಿಂದ ಡಿಸ್ಚಾರ್ಜ್ ಅಗರುವ ವಿ ಕೆ ಶಶಿಕಲಾ ಅವರು ಡಿಸ್ಚಾರ್ಜ್ ಆದ ಬಳಿಕ ಕೆಲ ದಿನಗಳ ಕಾಲ ಬೆಂಗಳೂರಿನಲ್ಲೆ ವಿಶ್ರಾಂತಿ ಪಡೆಯಲಿದ್ದಾರೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ - ಆನೇಕಲ್ ಸಮೀಪದ ಫಾರ್ಮ್ ಹೌಸ್ನಲ್ಲಿ ಶಶಿಕಲಾ ಹಾಗೂ ಆಪ್ತರು ತಂಗಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ, ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟಿಗೆ ಶಶಿಕಲಾ ಆಗಮಿಸಿದ್ದಾರೆ.
''ವೈದ್ಯರ ಸಲಹೆ ಮೇರೆಗೆ ಶಶಿಕಲಾ ಅವರು ಇನ್ನೂ 7 ದಿನಗಳ ಕಾಲ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ, ಇದಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ, ತಮಿಳುನಾಡಿನ ರಾಜಕೀಯಕ್ಕೆ ಸದ್ಯಕ್ಕೆ ಏನು ಪ್ರತಿಕ್ರಿಯಿಸಲಾರೆ'' ಎಂದು ಅಳಿಯ ಟಿಟಿವಿ ದಿನಕರನ್ ಹೇಳಿದ್ದಾರೆ.

ಫೆಬ್ರವರಿ 3ರವರೆಗೆ ವಿಶ್ರಾಂತಿ ಪಡೆಯಲಿರುವ ನಂತರ ಜ್ಯೋತಿಷಿಗಳ ಸಲಹೆ ಮೇರೆಗೆ ಶುಭ ದಿನಾಂಕ ಪಡೆದು ಚೆನ್ನೈ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿಯಿದೆ. ಈ ನಡುವೆ ಚೆನ್ನೈಗೆ ತೆರಳುವ ಮಾರ್ಗದಲ್ಲಿ ಅದ್ದೂರಿ ಸ್ವಾಗತಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೃಷ್ಣಗಿರಿ ಜಿಲ್ಲೆಯ ಹೊಸೂರು ಭಾಗದ ಬೆಂಬಲಿಗ ಸಾಂಬಶಿವನ್ ಅವರು ಪಿಟಿಐ ಜೊತೆ ಮಾತನಾಡಿ, ನಮಗೆಲ್ಲ ಹಬ್ಬದ ವಾತಾವರಣ ಉಂಟಾಗಿದೆ. ಚಿನ್ನಮ್ಮ ಬರುವುದನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎಐಎಡಿಎಂಕೆಗೆ ಶಶಿಕಲಾ ವಾಪಸ್ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ. ದಿನಕರನ್ ಎಎಂಎಂಕೆ ಪಕ್ಷಕ್ಕೆ ಬೆಂಬಲವಾಗಿ ಶಶಿಕಲಾ ನಿಲ್ಲುವ ಸಾಧ್ಯತೆಯಿದೆ.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications