ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್
ಬೆಂಗಳೂರು,ಜನವರಿ 21: ಶಶಿಕಲಾ ನಟರಾಜನ್ ಅವರಿಗೆ ತೀವ್ರ ಉಸಿರಾಟದ ಕಾಯಿಲೆ(SARI)ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೂಲಗಳ ಪ್ರಕಾರ ಶಶಿಕಲಾ ಆಸ್ಪತ್ರೆಗೆ ದಾಖಲಾಗುತ್ತಲೇ ಅವರಿಗೆ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲಾಗಿದ್ದು, ಎಕ್ ರೇ ವರದಿಯಲ್ಲಿ ಅವರ ಶ್ವಾಸಕೋಶಗಳಲ್ಲಿ ಅಲ್ಪ ಪ್ರಮಾಣದ ಸೋಂಕು ಕಂಡುಬಂದಿದೆ.
ಮುಂಜಾಗ್ರತಾ ಕ್ರಮವಾಗಿ ವೈದ್ಯರು ಶಶಿಕಲಾ ಅವರನ್ನು ಆರ್ ಟಿಪಿಸಿಆರ್ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಈ ವೇಳೆ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಅವರನ್ನು ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಕೆ ಶಶಿಕಲಾಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಸ್ತುತ ಶಶಿಕಲಾ ಅವರಿಗೆ ಐಸಿಯುನಲ್ಲಿ ಆಮ್ಲಜನಕದ ವ್ಯವಸ್ಥೆ ಅಳವಡಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ಜನವರಿ 27ರಂದು ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕೆಲವೇ ತಿಂಗಳಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡಿನ ರಾಜಕೀಯದಲ್ಲಿ ಶಶಿಕಲಾ ಬಿಡುಗಡೆ ಸಂಚಲನ ಸೃಷ್ಟಿ ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೌರಿಂಗ್ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಮನೋಜ್ ಕುಮಾರ್ ಅವರು, ಶಶಿಕಲಾ ಅವರಿಗೆ ತೀವ್ರವಾದ ಉಸಿರಾಟದ ಸೋಂಕು (SARI) ಗೆ ನಾವು ಚಿಕಿತ್ಸೆ ನೀಡುತ್ತಿದ್ದೇವೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರು ಸೆರೆವಾಸ ಮುಗಿಸಿ ಜನವರಿ 27ಕ್ಕೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಆದರೆ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications