ಸಿಡಿ ಕೇಸ್ ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ: ಸತೀಶ್ ಜಾರಕಿಹೊಳಿ ಏನಂದ್ರು?
ಬೆಂಗಳೂರು, ಮಾರ್ಚ್ 8: ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೊಲೀಸ್ ದೂರು ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ ಸಹೋದರ, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ನನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ""ದಿನೇಶ್ ಕಲ್ಲಹಳ್ಳಿ ಅವರು ಯಾಕೆ ಕೇಸ್ ದಾಖಲಿಸಿದ್ರು? ಮತ್ತೆ ಯಾಕೆ ವಾಪಸ್ ತೆಗೆದುಕೊಂಡರು ಎಂಬ ವಿಚಾರ ನನಗೆ ಸಂಬಂಧವಿಲ್ಲದ್ದು'' ಎಂದು ಹೇಳಿದರು.

"ಬರೀ ರಮೇಶ್ ಜಾರಕೊಹೊಳಿ ಅಲ್ಲ, ಬೇರೆ ಯಾರೇ ಆಗಿದ್ದರೂ ಹೊರಗೆ ಬರಬೇಕು, ಈ ಎಲ್ಲ ವಿಷಯವನ್ನು ಹೇಳಿಕೊಳ್ಳಬೇಕು. ಪ್ರಕರಣದ ಬಗ್ಗೆ ಸಮರ್ಥನೆ ಮಾಡಿಕೊಳ್ಳಬೇಕು, ಏಕೆಂದರೆ ಅವರು ಸಾರ್ವಜನಿಕ ಜೀವನದಲ್ಲಿರುವವರು. ಕಾನೂನು ಹೋರಾಟ ಮಾಡಲೇಬೇಕಾಗುತ್ತದೆ'' ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.












Click it and Unblock the Notifications