ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿ ಕೇಸ್ ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ: ಸತೀಶ್ ಜಾರಕಿಹೊಳಿ ಏನಂದ್ರು?

|
Google Oneindia Kannada News

ಬೆಂಗಳೂರು, ಮಾರ್ಚ್ 8: ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೊಲೀಸ್ ದೂರು ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ ಸಹೋದರ, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ನನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?

ಬೆಂಗಳೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ""ದಿನೇಶ್ ಕಲ್ಲಹಳ್ಳಿ ಅವರು ಯಾಕೆ ಕೇಸ್ ದಾಖಲಿಸಿದ್ರು? ಮತ್ತೆ ಯಾಕೆ ವಾಪಸ್ ತೆಗೆದುಕೊಂಡರು ಎಂಬ ವಿಚಾರ ನನಗೆ ಸಂಬಂಧವಿಲ್ಲದ್ದು'' ಎಂದು ಹೇಳಿದರು.

Satish Jarkiholi Reaction on Dinesh Kallahalli Withdraws Complaint Against Ramesh Jarkiholi

Recommended Video

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು'-'ಸಿಡಿ 100 ಪರ್ಸೆಂಟ್ ನಕಲಿ, ನನ್ನ ವಿರುದ್ಧ ನಡೆದ ಷಡ್ಯಂತ್ರ' | Oneindia Kannada

"ಬರೀ ರಮೇಶ್ ಜಾರಕೊಹೊಳಿ ಅಲ್ಲ, ಬೇರೆ ಯಾರೇ ಆಗಿದ್ದರೂ ಹೊರಗೆ ಬರಬೇಕು, ಈ ಎಲ್ಲ ವಿಷಯವನ್ನು ಹೇಳಿಕೊಳ್ಳಬೇಕು. ಪ್ರಕರಣದ ಬಗ್ಗೆ ಸಮರ್ಥನೆ ಮಾಡಿಕೊಳ್ಳಬೇಕು, ಏಕೆಂದರೆ ಅವರು ಸಾರ್ವಜನಿಕ ಜೀವನದಲ್ಲಿರುವವರು. ಕಾನೂನು ಹೋರಾಟ ಮಾಡಲೇಬೇಕಾಗುತ್ತದೆ'' ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

English summary
Satish Jarkiholi Reaction on Dinesh Kallahalli, a social activist who filed a complaint against Ramesh Jarkiholi, has withdrawn his complaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X