'ಕೆರೆ ಸಂರಕ್ಷಣೆ ಬಗ್ಗೆ ಸಿದ್ದುಗೆ ಎಳ್ಳಷ್ಟೂ ಕಾಳಜಿಯಿಲ್ಲ'!
ಬೆಂಗಳೂರು, ಜೂನ್ 24 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಿಯಲ್ ಎಸ್ಟೇಟ್ ಕುಳಗಳನ್ನು ರಕ್ಷಿಸಲು ಏನು ಬೇಕೆಲ್ಲಾ ಮಾಡುತ್ತಾರೆ. ಆದರೆ, ಇಂಥವರಿಂದಲೇ ಸರ್ವನಾಶವಾಗುತ್ತಿರುವ ಕೆರೆಗಳ ಸಂರಕ್ಷಣೆಯ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ಕೆರೆಗಳನ್ನು ಉಳಿಸಲು ಹೋರಾಡುತ್ತಿರುವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕೆರೆಗಳ ಸಂರಕ್ಷಣೆಗೆಂದು ಸಾಕಷ್ಟು ಪ್ರಯತ್ನ ನಡೆಸಿರುವ ಯುನೈಟೆಡ್ ಬೆಂಗಳೂರು ಸಂಸ್ಥೆಯ ಆಶ್ರಯದಲ್ಲಿ ಶನಿವಾರ ಅಬ್ಬಿಗೆರೆ ಕೆರೆಯಂಗಳದಲ್ಲಿ, ಮಕ್ಕಳು, ಹೆಂಗಸರು ಸೇರಿದಂತೆ ಹಲವಾರು ಪರಿಸರ ಪ್ರೇಮಿಗಳು ಭಾಗವಹಿಸಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

2018ರ ಏಪ್ರಿಲ್ 10ರಂದು ನೂರನೇ ಹುಟ್ಟುಹಬ್ಬ ಆಚರಿಸಲಿರುವ ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿಯವರು ಈ ಅಭಿಯಾನದಲ್ಲಿ ಭಾಗವಹಿಸಿ, ಸಾವಿನಂಚಿನಲ್ಲಿರುವ ಕೆರೆಗಳನ್ನು ಉಳಿಸಲು ನಡೆಯುತ್ತಿರುವ ಹೋರಾಟದಲ್ಲಿ ಧುಮುಕಿದ್ದು ಹಲವರಲ್ಲಿ ಉತ್ಸಾಹ ಇಮ್ಮಡಿಯಾಗುವಂತೆ ಮಾಡಿತು.
ಈ ಸಂದರ್ಭದಲ್ಲಿ, ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಕೆರೆಗಳನ್ನು ಆಕ್ರಮಿಸಿಕೊಂಡು ಬಡಾವಣೆ ನಿರ್ಮಿಸುತ್ತ, ಕೆರೆಯನ್ನು ಕೊಲ್ಲುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಬೇಕು, 5 ಲಕ್ಷ ರುಪಾಯಿ ದಂಡ ವಿಧಿಸಬೇಕು ಎಂದು ಭಾಗವಹಿಸಿದವರು ಆಕ್ರೋಶ ವ್ಯಕ್ತಪಡಿಸಿದರು.
105 ಎಕರೆಯಷ್ಟಿರುವ ಚಿಕ್ಕಬಾಣಾವರ ಕೆರೆ, ಭೂಗಳ್ಳರಿಂದಾಗಿ ಸರ್ವನಾಶವಾಗುತ್ತಿದೆ, ಕಸಕಡ್ಡಿ ತಂದು ಹಾಕಲಾಗುತ್ತಿದೆ, ಹೊಲಸು ನೀರು ಬಂದು ಕೆರೆಯನ್ನು ಸೇರಿ ವಿಷಕಾರಿಯನ್ನಾಗಿ ಮಾಡುತ್ತಿದೆ, ಹತ್ತಿರದ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಬಂದು ಕೆರೆಯನ್ನು ಸೇರುತ್ತಿದೆ ಎಂದು ಆರೋಪಿಸಲಾಯಿತು.
ಶೆಟ್ಟಿಹಳ್ಳಿ ಕಾರ್ಪೊರೇಟರ್ ಆಗಿರುವ ನಾಗಭೂಷಣ್ ಅವರು ಸ್ಥಳಕ್ಕೆ ಆಗಮಿಸಿ, ಅಬ್ಬಿಗೆರೆ ಕೆರೆಯ ಸರ್ವಾಂಗೀಣ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು, ಭೂಒತ್ತುವರಿಯನ್ನು ತಡೆಗಟ್ಟಲಾಗುವುದು ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.
ಇನ್ನು, 70 ಎಕರೆಯಷ್ಟಿರುವ ಸಿಂಗಾಪುರ ಕೆರೆಗೆ ಹಾಳುಮೂಳು ಕಸಕಡ್ಡಿಯನ್ನು ತಂದು ತುಂಬಲಾಗುತ್ತಿದೆ. ಯುನೈಟೆಡ್ ಬೆಂಗಳೂರು ಸಂಸ್ಥೆ ನೇತೃತ್ವದಲ್ಲಿ ಎಲ್ಲರೂ ಹೋರಾಟ ನಡೆಸಿದರೆ ಮೊದಲಿನ ಕೆರೆಯ ಸೌಂದರ್ಯವನ್ನು ಮರಳಿ ತರಬಹುದು ಎಂದು ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications