'ಕೆರೆ ಸಂರಕ್ಷಣೆ ಬಗ್ಗೆ ಸಿದ್ದುಗೆ ಎಳ್ಳಷ್ಟೂ ಕಾಳಜಿಯಿಲ್ಲ'!
ಬೆಂಗಳೂರು, ಜೂನ್ 24 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಿಯಲ್ ಎಸ್ಟೇಟ್ ಕುಳಗಳನ್ನು ರಕ್ಷಿಸಲು ಏನು ಬೇಕೆಲ್ಲಾ ಮಾಡುತ್ತಾರೆ. ಆದರೆ, ಇಂಥವರಿಂದಲೇ ಸರ್ವನಾಶವಾಗುತ್ತಿರುವ ಕೆರೆಗಳ ಸಂರಕ್ಷಣೆಯ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ಕೆರೆಗಳನ್ನು ಉಳಿಸಲು ಹೋರಾಡುತ್ತಿರುವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕೆರೆಗಳ ಸಂರಕ್ಷಣೆಗೆಂದು ಸಾಕಷ್ಟು ಪ್ರಯತ್ನ ನಡೆಸಿರುವ ಯುನೈಟೆಡ್ ಬೆಂಗಳೂರು ಸಂಸ್ಥೆಯ ಆಶ್ರಯದಲ್ಲಿ ಶನಿವಾರ ಅಬ್ಬಿಗೆರೆ ಕೆರೆಯಂಗಳದಲ್ಲಿ, ಮಕ್ಕಳು, ಹೆಂಗಸರು ಸೇರಿದಂತೆ ಹಲವಾರು ಪರಿಸರ ಪ್ರೇಮಿಗಳು ಭಾಗವಹಿಸಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

2018ರ ಏಪ್ರಿಲ್ 10ರಂದು ನೂರನೇ ಹುಟ್ಟುಹಬ್ಬ ಆಚರಿಸಲಿರುವ ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿಯವರು ಈ ಅಭಿಯಾನದಲ್ಲಿ ಭಾಗವಹಿಸಿ, ಸಾವಿನಂಚಿನಲ್ಲಿರುವ ಕೆರೆಗಳನ್ನು ಉಳಿಸಲು ನಡೆಯುತ್ತಿರುವ ಹೋರಾಟದಲ್ಲಿ ಧುಮುಕಿದ್ದು ಹಲವರಲ್ಲಿ ಉತ್ಸಾಹ ಇಮ್ಮಡಿಯಾಗುವಂತೆ ಮಾಡಿತು.
ಈ ಸಂದರ್ಭದಲ್ಲಿ, ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಕೆರೆಗಳನ್ನು ಆಕ್ರಮಿಸಿಕೊಂಡು ಬಡಾವಣೆ ನಿರ್ಮಿಸುತ್ತ, ಕೆರೆಯನ್ನು ಕೊಲ್ಲುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಬೇಕು, 5 ಲಕ್ಷ ರುಪಾಯಿ ದಂಡ ವಿಧಿಸಬೇಕು ಎಂದು ಭಾಗವಹಿಸಿದವರು ಆಕ್ರೋಶ ವ್ಯಕ್ತಪಡಿಸಿದರು.
105 ಎಕರೆಯಷ್ಟಿರುವ ಚಿಕ್ಕಬಾಣಾವರ ಕೆರೆ, ಭೂಗಳ್ಳರಿಂದಾಗಿ ಸರ್ವನಾಶವಾಗುತ್ತಿದೆ, ಕಸಕಡ್ಡಿ ತಂದು ಹಾಕಲಾಗುತ್ತಿದೆ, ಹೊಲಸು ನೀರು ಬಂದು ಕೆರೆಯನ್ನು ಸೇರಿ ವಿಷಕಾರಿಯನ್ನಾಗಿ ಮಾಡುತ್ತಿದೆ, ಹತ್ತಿರದ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಬಂದು ಕೆರೆಯನ್ನು ಸೇರುತ್ತಿದೆ ಎಂದು ಆರೋಪಿಸಲಾಯಿತು.
ಶೆಟ್ಟಿಹಳ್ಳಿ ಕಾರ್ಪೊರೇಟರ್ ಆಗಿರುವ ನಾಗಭೂಷಣ್ ಅವರು ಸ್ಥಳಕ್ಕೆ ಆಗಮಿಸಿ, ಅಬ್ಬಿಗೆರೆ ಕೆರೆಯ ಸರ್ವಾಂಗೀಣ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು, ಭೂಒತ್ತುವರಿಯನ್ನು ತಡೆಗಟ್ಟಲಾಗುವುದು ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.
ಇನ್ನು, 70 ಎಕರೆಯಷ್ಟಿರುವ ಸಿಂಗಾಪುರ ಕೆರೆಗೆ ಹಾಳುಮೂಳು ಕಸಕಡ್ಡಿಯನ್ನು ತಂದು ತುಂಬಲಾಗುತ್ತಿದೆ. ಯುನೈಟೆಡ್ ಬೆಂಗಳೂರು ಸಂಸ್ಥೆ ನೇತೃತ್ವದಲ್ಲಿ ಎಲ್ಲರೂ ಹೋರಾಟ ನಡೆಸಿದರೆ ಮೊದಲಿನ ಕೆರೆಯ ಸೌಂದರ್ಯವನ್ನು ಮರಳಿ ತರಬಹುದು ಎಂದು ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications