ವೃಕ್ಷಮಾತೆ ಸಾಲುಮರದ ತಿಮ್ಮಕ್ಕರೊಂದಿಗೆ ಪರಿಸರ ದಿನಾಚರಣೆ
ಬೆಂಗಳೂರು, ಜೂನ್ 05: ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ಶ್ರೀವಾಣಿ ವಿದ್ಯಾಕೇಂದ್ರದ ಅಂಗಸಂಸ್ಥೆಯಾದ ಮಾಚೋಹಳ್ಳಿಯಲ್ಲಿರುವ ಹನುಮವನ ಶಾಖೆಯಲ್ಲಿ ಪರಿಸರದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಾಡೋಜ ಶ್ರೀಮತಿ ಸಾಲುಮರದ ತಿಮ್ಮಕ್ಕನವರು ಮುಖ್ಯ ಅತಿಥಿಗಳಾಗಿದ್ದರು.
ತಮ್ಮ ಇಳಿವಯಸ್ಸಿನಲ್ಲಿಯೂ ಚೈತನ್ಯಶೀಲರಾಗಿ ಪರಿಸರ ಕಳಕಳಿ, ಕಾಳಜಿ ತೋರುತ್ತಿರುವ ಸಾಲುಮರದ ತಿಮ್ಮಕ್ಕನವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಾವು ಮಕ್ಕಳಿಲ್ಲದ ಕೊರತೆಯನ್ನು ಗಿಡಗಳನ್ನು ಬೆಳೆಸಿ ನೀಗಿಕೊಂಡಿರುವುದಾಗಿ ತಿಳಿಸಿದರು. ತಾವು ನೆಟ್ಟು ಬೆಳೆಸಿದ ಮರಗಳ ಸಂಖ್ಯೆಯನ್ನು ತಾವು ಲೆಕ್ಕ ಹಾಕಿಲ್ಲವೆಂದೂ, ಜನರೇ ಲೆಕ್ಕಹಾಕಿ ಹೇಳುತ್ತಾರೆಂದು ಮುಗ್ಧತೆಯಿಂದ, ನಿಗರ್ವಿಗಳಾಗಿ ನುಡಿದರು. [ನಮ್ಮ ವೃಕ್ಷ ಮಹಿಳೆ, ನಮ್ಮ ಹೆಮ್ಮೆ]

ಈ ಶಾಲೆಯಲ್ಲಿ ಇತರೆಡೆಗಳಂತೆ ಬರಿಯ ಆಂಗ್ಲಸಂಸ್ಕೃತಿಯ ಅನುಕರಣೆ ಮಾಡದೇ ಪರಿಸರ, ದೇಶ, ಸಂಸ್ಕೃತಿಗಳ ಬಗ್ಗೆ ಕಾಳಜಿಯನ್ನು ಮಕ್ಕಳಲ್ಲಿ ಬೆಳೆಸುತ್ತಿರುವುದು ತುಂಬಾ ಶ್ಲಾಘ್ಯವಾದ ಕಾರ್ಯವೆಂದು ನುಡಿದರು. ಶಾಲೆಯ ಆವರಣದಲ್ಲಿ ಗಿಡನೆಟ್ಟು, ಜೀವ ಉಳಿಸಿ ಎನ್ನುತ್ತಾ ಪರಿಸರ ದಿನಾಚರಣೆಗೆ ಶುಭಕೋರಿದರು.[ಸಾಲುಮರದ ನೆರಳಿನಲ್ಲೇ ಇರಬಯಸುವ ತಿಮ್ಮಕ್ಕ]
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚಿತ್ರನಟಿ ಮಾನ್ವಿತಾ ಅವರು ಶಾಲೆಯ ಪರಿಸರ ಕಾಳಜಿಯನ್ನು ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು. ಮಾನ್ವಿತಾ ಅವರು ನೀಡಿರುವ ಸಂದೇಶವಿರುವ ವಿಡಿಯೋ ಲಿಂಕ್ ಇಲ್ಲಿದೆ:
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಳ್ಳಿಯ ಪರಿಸರ ಮತ್ತು ದೇಸೀ ಆರ್ಥಿಕತೆಯ ಪರಿಚಯ ಮಾಡಿಸುವುದಕ್ಕಾಗಿ ಸಂತೆಯನ್ನು ಆಯೋಜಿಸಲಾಗಿತ್ತು.
ಶಾಲೆಯ ಮಕ್ಕಳಿಂದ ಚಿತ್ರ ಸಂಯೋಜನೆ, ಭಿತ್ತಿಪತ್ರಗಳು, ತ್ಯಾಜ್ಯವಸ್ತುಗಳಿಂದ ಮಾಡಲಾದ ಅನೇಕ ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಲಾಯಿತು. ಶಾಲೆಯ ಎನ್.ಸಿ.ಸಿ. ವಿಭಾಗದ ಮಕ್ಕಳು ಗಿಡಗಳನ್ನು ನೆಡುವುದರೊಂದಿಗೆ, 'ಪರಿಸರ ಉಳಿಸಿ, ಪರಿಸರ ಬೆಳೆಸಿ ನಿಮಗಾಗಿ' ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.
ಶಾಲೆಯ ಅಧ್ಯಕ್ಷರಾದ ಶ್ರೀಮತಿ ಆರ್. ಎಚ್. ಉಷಾರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಾಂಶುಪಾಲರಾದ ಶ್ರೀಮತಿ ಆರ್. ಎಚ್. ವಾಣೀಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications