ವೃಕ್ಷಮಾತೆ ಸಾಲುಮರದ ತಿಮ್ಮಕ್ಕರೊಂದಿಗೆ ಪರಿಸರ ದಿನಾಚರಣೆ
ಬೆಂಗಳೂರು, ಜೂನ್ 05: ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ಶ್ರೀವಾಣಿ ವಿದ್ಯಾಕೇಂದ್ರದ ಅಂಗಸಂಸ್ಥೆಯಾದ ಮಾಚೋಹಳ್ಳಿಯಲ್ಲಿರುವ ಹನುಮವನ ಶಾಖೆಯಲ್ಲಿ ಪರಿಸರದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಾಡೋಜ ಶ್ರೀಮತಿ ಸಾಲುಮರದ ತಿಮ್ಮಕ್ಕನವರು ಮುಖ್ಯ ಅತಿಥಿಗಳಾಗಿದ್ದರು.
ತಮ್ಮ ಇಳಿವಯಸ್ಸಿನಲ್ಲಿಯೂ ಚೈತನ್ಯಶೀಲರಾಗಿ ಪರಿಸರ ಕಳಕಳಿ, ಕಾಳಜಿ ತೋರುತ್ತಿರುವ ಸಾಲುಮರದ ತಿಮ್ಮಕ್ಕನವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಾವು ಮಕ್ಕಳಿಲ್ಲದ ಕೊರತೆಯನ್ನು ಗಿಡಗಳನ್ನು ಬೆಳೆಸಿ ನೀಗಿಕೊಂಡಿರುವುದಾಗಿ ತಿಳಿಸಿದರು. ತಾವು ನೆಟ್ಟು ಬೆಳೆಸಿದ ಮರಗಳ ಸಂಖ್ಯೆಯನ್ನು ತಾವು ಲೆಕ್ಕ ಹಾಕಿಲ್ಲವೆಂದೂ, ಜನರೇ ಲೆಕ್ಕಹಾಕಿ ಹೇಳುತ್ತಾರೆಂದು ಮುಗ್ಧತೆಯಿಂದ, ನಿಗರ್ವಿಗಳಾಗಿ ನುಡಿದರು. [ನಮ್ಮ ವೃಕ್ಷ ಮಹಿಳೆ, ನಮ್ಮ ಹೆಮ್ಮೆ]

ಈ ಶಾಲೆಯಲ್ಲಿ ಇತರೆಡೆಗಳಂತೆ ಬರಿಯ ಆಂಗ್ಲಸಂಸ್ಕೃತಿಯ ಅನುಕರಣೆ ಮಾಡದೇ ಪರಿಸರ, ದೇಶ, ಸಂಸ್ಕೃತಿಗಳ ಬಗ್ಗೆ ಕಾಳಜಿಯನ್ನು ಮಕ್ಕಳಲ್ಲಿ ಬೆಳೆಸುತ್ತಿರುವುದು ತುಂಬಾ ಶ್ಲಾಘ್ಯವಾದ ಕಾರ್ಯವೆಂದು ನುಡಿದರು. ಶಾಲೆಯ ಆವರಣದಲ್ಲಿ ಗಿಡನೆಟ್ಟು, ಜೀವ ಉಳಿಸಿ ಎನ್ನುತ್ತಾ ಪರಿಸರ ದಿನಾಚರಣೆಗೆ ಶುಭಕೋರಿದರು.[ಸಾಲುಮರದ ನೆರಳಿನಲ್ಲೇ ಇರಬಯಸುವ ತಿಮ್ಮಕ್ಕ]
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚಿತ್ರನಟಿ ಮಾನ್ವಿತಾ ಅವರು ಶಾಲೆಯ ಪರಿಸರ ಕಾಳಜಿಯನ್ನು ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು. ಮಾನ್ವಿತಾ ಅವರು ನೀಡಿರುವ ಸಂದೇಶವಿರುವ ವಿಡಿಯೋ ಲಿಂಕ್ ಇಲ್ಲಿದೆ:
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಳ್ಳಿಯ ಪರಿಸರ ಮತ್ತು ದೇಸೀ ಆರ್ಥಿಕತೆಯ ಪರಿಚಯ ಮಾಡಿಸುವುದಕ್ಕಾಗಿ ಸಂತೆಯನ್ನು ಆಯೋಜಿಸಲಾಗಿತ್ತು.
ಶಾಲೆಯ ಮಕ್ಕಳಿಂದ ಚಿತ್ರ ಸಂಯೋಜನೆ, ಭಿತ್ತಿಪತ್ರಗಳು, ತ್ಯಾಜ್ಯವಸ್ತುಗಳಿಂದ ಮಾಡಲಾದ ಅನೇಕ ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಲಾಯಿತು. ಶಾಲೆಯ ಎನ್.ಸಿ.ಸಿ. ವಿಭಾಗದ ಮಕ್ಕಳು ಗಿಡಗಳನ್ನು ನೆಡುವುದರೊಂದಿಗೆ, 'ಪರಿಸರ ಉಳಿಸಿ, ಪರಿಸರ ಬೆಳೆಸಿ ನಿಮಗಾಗಿ' ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.
ಶಾಲೆಯ ಅಧ್ಯಕ್ಷರಾದ ಶ್ರೀಮತಿ ಆರ್. ಎಚ್. ಉಷಾರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಾಂಶುಪಾಲರಾದ ಶ್ರೀಮತಿ ಆರ್. ಎಚ್. ವಾಣೀಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications