ಬೆಂಗಳೂರಿಗರಿಗೆ 'ವಿದ್ಯುತ್ ಉಳಿಸಿ ಲಕ್ಷಾಧೀಶರಾಗಿ' ಸ್ಪರ್ಧೆ
ಬೆಂಗಳೂರು, ನ. 24: ವಿದ್ಯುತ್ ಬಳಕೆ ಮಿತಿಗೊಳಿಸುವ ಪ್ರವೃತ್ತಿಯನ್ನು ಪ್ರೋತ್ಸಾಹಿಸಲು ನಗರದ ಗ್ರೀನ್ ಎನರ್ಜಿ ಫೌಂಡೇಶನ್ ಹಾಗೂ ರಾಕೋಲ್ಡ್ ಥರ್ಮಲ್ ಸಂಸ್ಥೆ ವತಿಯಿಂದ ಸ್ವಿಚ್ ಟು ಗ್ರೀನ್ ಯೋಜನೆಯಡಿ 'ವಿದ್ಯುತ್ ಉಳಿಸಿ ಲಕ್ಷಾಧಿಪತಿಗಳಾಗಿ' ಸ್ಪರ್ಧೆ ಆಯೋಜಿಸಲಾಗಿದೆ. [ವಿದ್ಯುತ್ ತಯಾರಿಸಿ ಸರ್ಕಾರಕ್ಕೆ ಮಾರಿ]
ಗೃಹ ನಿರ್ಮಾಣ ಸಂಸ್ಥೆ, ಕನಿಷ್ಠ 100 ಫ್ಲಾಟ್ಗಳನ್ನು ಹೊಂದಿರುವ ವಸತಿ ಸಮುಚ್ಛಯಗಳು ಹಾಗೂ ನಾಗರಿಕ ಅಭಿವೃದ್ಧಿ ಸಂಘದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಇದಕ್ಕಾಗಿ ಗೃಹ ನಿರ್ಮಾಣ ಸಂಸ್ಥೆ ಅಥವಾ ಫ್ಲಾಟ್ ಮಾಲೀಕರು ತಮ್ಮದೇ ವಿದ್ಯುತ್ ನಿರ್ವಹಣಾ ಸಮಿತಿ (ಇಎಂಸಿ) ಸ್ಥಾಪಿಸಿಕೊಳ್ಳಬೇಕು. ನಂತರ ಆಯ್ಕೆ ಸಮಿತಿಯಿಂದ ನೇಮಿಸಲಾದ ಸ್ವಯಂ ಸೇವಕರು ನಾಮ ನಿರ್ದೇಶನಗೊಂಡ ಗೃಹ ನಿರ್ಮಾಣ ಸಂಸ್ಥೆಯ ಕಾರ್ಯಶೀಲತೆ ಪರಿಶೀಲಿಸಿ ವರದಿ ಸಲ್ಲಿಸುವರು. [ಶಿವನಸಮುದ್ರ ಬಳಿ ಸೌರ ವಿದ್ಯುತ್ ಘಟಕ]
ವಿದ್ಯುತ್ ಉಳಿಕೆಯಲ್ಲಿ ಎಷ್ಟರ ಮಟ್ಟಿಗೆ ಯೋಜನೆ ಫಲಪ್ರದವಾಗಿದೆ ಎಂಬ ವರದಿ ಆಧಾರದ ಮೇಲೆ ವಿಜೇತರನ್ನು ಗುರುತಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಯಂತ್ ಮೊ. 9886102219, ಇ ಮೇಲ್ [email protected] ಸಂಪರ್ಕಿಸಬಹುದು. [ಕರ್ನಾಟಕದಲ್ಲಿ ಹರ್ಬಜನ್ ಸೌರ ಘಟಕ]

ಸ್ಪರ್ಧೆ ಉದ್ದೇಶವೇನು?
ಮನೆಗಳಲ್ಲಿ ವಿದ್ಯುತ್ ಬಳಕೆ ಮಿತಿಗೊಳಿಸುವುದನ್ನು ಪ್ರೋತ್ಸಾಹಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ. ಯೋಜನೆಯ ಲಾಭವನ್ನು ಬೆಂಗಳೂರಿನ 10ರಿಂದ 12 ಸಾವಿರ ನಿವಾಸಿಗಳಿಗೆ ಒದಗಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ಹಿಂದೆ ಪುಣೆಯಲ್ಲಿ ಇಂತಹ ಪರಿವರ್ತನಾ ಕಾರ್ಯಕ್ರಮದಲ್ಲಿ ಸುಮಾರು 8000 ಜನರು ಭಾಗವಹಿಸಿದ್ದರು. ಇದರಿಂದ 48 ಸಾವಿರ ಯೂನಿಟ್ ವಿದ್ಯುತ್ ಉಳಿತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಗ್ರೀನ್ ಎನರ್ಜಿ ಫೌಂಡೇಶನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. [ಕರ್ನಾಟಕದಲ್ಲಿ 5 ಸೌರ ವಿದ್ಯುತ್ ಘಟಕ]
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.











Click it and Unblock the Notifications