ಶಿವರಾಮ ಕಾರಂತ ಬಡಾವಣೆಯ 98 ಕಟ್ಟಡಗಳು ಸಕ್ರಮ: SC ಸಮಿತಿ
ಬೆಂಗಳೂರು, ಅಕ್ಟೋಬರ್ 29: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯ 98 ಕಟ್ಟಡಗಳನ್ನು ಸಕ್ರಮಗೊಳಿಸಿ ಸವೋಚ್ಛ ನ್ಯಾಯಾಲಯ 11-10-2022 ರಂದು ಆದೇಶ ಹೊರಡಿಸಿದೆ ಎಂದು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ತಿಳಿಸಿದೆ.
ಡಾ. ಶಿವರಾಮ ಕಾರಂತ್ ಬಡಾವಣೆ ಕುರಿತು ಭಾರತ ಸರ್ವೋಚ್ಛ ನ್ಯಾಯಾಲಯ ರಚಿಸಿರುವ ಸಮಿತಿ ಈವರೆಗೆ 23 ವರದಿಗಳನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಒಟ್ಟು 4832 ಕಟ್ಟಡಗಳನ್ನು ಮಾನ್ಯ ಮಾಡಿರುವ ನ್ಯಾಯಪೀಠ ನಾಲ್ಕು ವಾರದೊಳಗಾಗಿ ಸಂಬಂಧಿಸಿದವರಿಗೆ ಹಕ್ಕುಪತ್ರ ವಿತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿ ಆದೇಶಿಸಿದೆ ಎಂದು ಸಮಿತಿ ಹೇಳಿದೆ.
ಡಾ.ಶಿವರಾಮ ಕಾರಂತ ಬಡಾವಣೆಯ 17 ಗ್ರಾಮಗಳ ಪೈಕಿ ಏಳು ಗ್ರಾಮಗಳಲ್ಲಿ ಒಟ್ಟು 150 ಎಕರೆ ಪ್ರದೇಶವನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್) ಮನೆಗಳ ನಿರ್ಮಾಣಕ್ಕಾಗಿ ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿ ಗುರುತಿಸಿದೆ. ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ 30 ಚದರ ಮೀಟರ್ ಅಳತೆಯಲ್ಲಿ 15,000 1BHK ಮನೆಗಳನ್ನು ನಿರ್ಮಿಸುತ್ತದೆ.

ನ್ಯಾಯಾಲಯದ ಆದೇಶದ ಮೂಲಕ ಲೇಔಟ್ ರಚನೆಯ ಮೇಲ್ವಿಚಾರಣೆಗೆ ಸಮಿತಿಯನ್ನು ಇತ್ತೀಚೆಗೆ ನೇಮಿಸಲಾಗಿದೆ. ಶುಕ್ರವಾರ ಬಿಡಿಎ ಉನ್ನತಾಧಿಕಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಸಮಿತಿ ಸದಸ್ಯರು ಪರಿಶೀಲನೆ ನಡೆಸಿದರು.
ಉತ್ತರ ಬೆಂಗಳೂರಿನ ರಾಮಗೌಡನಹಳ್ಳಿ, ಶ್ಯಾಮರಾಜಪುರ, ದೊಡ್ಡಬೆಟ್ಟಹಳ್ಳಿ, ಮೇಡಿ ಅಗ್ರಹಾರ, ಬೈಲಕೆ, ಲಕ್ಷ್ಮೀಪುರ ಮತ್ತು ಗಾಣಿಗೆರೆಹಳ್ಳಿ ಗ್ರಾಮಗಳಲ್ಲಿ ಮನೆಗಳು ಬರಲಿವೆ.
ಸಮಿತಿಯ ಸದಸ್ಯ, ನಿವೃತ್ತ ಡಿಜಿಪಿ ಎಸ್ ಟಿ ರಮೇಶ್, 'ಗ್ರೌಂಡ್ ಪ್ಲಸ್ ಮೂರು ಅಂತಸ್ತಿನ ಬ್ಲಾಕ್ಗಳಲ್ಲಿ ನಿರ್ಮಿಸಲಾಗುವ ಈ ಮನೆಗಳು ಉತ್ತಮ ರಸ್ತೆಗಳು, ಕುಡಿಯುವ ನೀರು ಮತ್ತು ಹಲವಾರು ಇತರ ಸೌಕರ್ಯಗಳನ್ನು ಹೊಂದಿರುವ ಲೇಔಟ್ನಲ್ಲಿ ಬರಲಿವೆ' ಎಂದು ಇಂಡಿಯನ್ ಎಕ್ಸ್ ಪ್ರೆಸ್ಗೆ ತಿಳಿಸಿದರು. ಕಾರ್ಪೊರೇಷನ್ ಎಂಡಿ ಎಸ್ ಬಸವರಾಜು ಮಾತನಾಡಿ "ಈ ಸಬ್ಸಿಡಿ ಫ್ಲಾಟ್ಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಇತರ ರಾಜ್ಯ ಸರ್ಕಾರದ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ'' ಎಂದರು.

ನಾವು ಯೋಜನೆಯಲ್ಲಿ ಕೆಲಸ ಪ್ರಾರಂಭಿಸಿದ ನಂತರ ಸಂಪೂರ್ಣ ಪಾರದರ್ಶಕ ರೀತಿಯಲ್ಲಿ ಆನ್ಲೈನ್ನಲ್ಲಿ ಹಂಚಿಕೆ ಮಾಡಲಾಗುತ್ತದೆ. ಯೋಜನೆಯು ಪೂರ್ಣಗೊಳ್ಳಲು 18 ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ. ಇದೇ ವೇಳೆ ಲೇಔಟ್ಗೆ ಕರೆದಿರುವ ಅಲ್ಪಾವಧಿ ಟೆಂಡರ್ಗೆ 19 ಬಿಡ್ಗಳು ಬಂದಿವೆ. ಉನ್ನತ ಬಿಡಿಎ ಅಧಿಕಾರಿಯೊಬ್ಬರು, "ಒಟ್ಟು ಒಂಬತ್ತು ಬಿಡ್ದಾರರು ಯೋಜನೆಗಳಿಗೆ 19 ಬಿಡ್ಗಳನ್ನು ಹಾಕಿದ್ದಾರೆ ಮತ್ತು ಕೆಲವರು ಎರಡಕ್ಕಿಂತ ಹೆಚ್ಚು ಬಿಡ್ಗಳನ್ನು ಹಾಕಿದ್ದಾರೆ. ತಾಂತ್ರಿಕ ಸುತ್ತನ್ನು ಪ್ರಸ್ತುತ ಮೌಲ್ಯಮಾಪನ ಮಾಡಲಾಗುತ್ತಿದೆ.
2018ಕ್ಕೆ ಮುನ್ನವೇ ಸ್ಥಳೀಯ ಪ್ರಾಧಿಕಾರಗಳ ಅನುಮತಿಯನ್ನು ಪಡೆದುಕೊಂಡು ಕಟ್ಟಲಾಗಿರುವ ಕಟ್ಟಡಗಳನ್ನು ಮಾಹಿತಿಯನ್ನು ಮಾಲೀಕರು ಬಿಡಿಎಗೆ ಸಲ್ಲಿಸಿದ್ದರು. ಈ ಮಾಹಿತಿಯನ್ನು ಆಧರಿಸಿ ನ್ಯಾಯಮೂರ್ತಿ ಎವಿ ಚಂದ್ರಶೇಖರ್ ಸಮಿತಿ ಸರ್ವೋಚ್ಚ ನ್ಯಾಯಾಲಯಕ್ಕೆ 14ನೇ ವರದಿಯನ್ನು ನೀಡಿತ್ತು. ಈ ವರದಿಯನ್ನು ಗಮನಿಸಿ ನ್ಯಾಯಾಲಯ 480 ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ. ಇದರಿಂದಾಗಿ ಕಾನೂನು ಹೋರಾಟವನ್ನು ಮಾಡುತ್ತಿದ್ದ ಸ್ಥಳೀಯ ನಿವಾಸಿಗಳು ಹರ್ಷಗೊಂಡಿದ್ದಾರೆ.

ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಹಂತ ಹಂತವಾಗಿ ಆರು ಬ್ಲಾಕ್ನಲ್ಲಿ ತಲಾ 25 ಎಕರೆಯಂತೆ 150 ಎಕರೆ ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಮಂಜೂರು ಮಾಡುವಂತೆ ಸುಪ್ರೀಂಕೋರ್ಟ್ ಮಾ. 31 ರಂದು ನೀಡಿದ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು ಬಿಡಿಎ ಆಯುಕ್ತರಿಗೆ ನ್ಯಾಯಾಲಯ ಸೂಚನೆ ನೀಡಿದೆ.
ಈ ಜಾಗಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮವು ಆರ್ಥಿಕವಾಗಿ ಹಿಂದುಳಿದವರಿಗೆ ಪ್ಲಾಟ್ ನಿರ್ಮಿಸಿ ಕೊಡಲಿದೆ. ಇಡಬ್ಲೂಎಸ್ ಯೋಜನೆ ಅಡಿ ಬಹುಮಹಡಿಗಳ ಕಟ್ಟಡ ನಿರ್ಮಾಣ ಮಾಡಬೇಕೆಂದು ನ್ಯಾಯಾಲಯ ತಿಳಿಸಿದ್ದು, ಚಂದ್ರಶೇಖರ್ ಸಮಿತಿ ಮೇಲ್ವಿಚಾರಣೆ ಮೇಲೆ ಈ ಅಪಾರ್ಟ್ಮೆಂಟ್ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದರು.












Click it and Unblock the Notifications