ಬಡ್ತಿ ಮೀಸಲಾತಿ ಕಾಯ್ದೆ: ಎಸ್ಸಿ-ಎಸ್ಟಿ ನೌಕಕರ ಅಂತಿಮ ಹೋರಾಟ
ಬೆಂಗಳೂರು, ಸೆ.25: ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆಗೆ ರಾಷ್ಟ್ರಪತಿಗಳಿಂದ ಅಂಕಿತ ದೊರೆತರೂ ಕೂಡ ಸರ್ಕಾರ ಜಾರಿಗೊಳಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಹೋರಾಟಕ್ಕೆ ಎಸ್ಸಿ, ಎಸ್ಟಿ ನೌಕರರು ನಿರ್ಧರಿಸಿದ್ದಾರೆ.
ಕುಮಾರಸ್ವಾಮಿ ತವರು ಕ್ಷೇತ್ರದಿಂದಲೇ ಹೋರಾಟ ಆರಂಭಿಸಲು ನೌಕರರು ಸಿದ್ಧತೆ ನಡೆಸಿದ್ದಾರೆ, ಹಾಸನ ರಾಮನಗರದಲ್ಲಿ ಬೃಹತ್ ಹೋರಾಟಕ್ಕೆ ಮುಂದಾಗಿದ್ದಾರೆ, ಅಕ್ಟೋಬರ್ ಮೊದಲ ವಾರದಲ್ಲಿ ಹೋರಾಟವನ್ನು ಕೈಗೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಹಾಸನದಲ್ಲಿ ಸಚಿವ ರೇವಣ್ಣ ಹಾಗೂ ರಾಮನಗರದಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ಹೋರಾಟ ನಡೆಸಲಿದ್ದಾರೆ. ರಾಷ್ಟ್ರಪತಿಗಳಿಂದ ಕಾಯ್ದೆ ಅಂಗೀಕಾರವಾಗಿದ್ದರೂ ಕುಮಾರಸ್ವಾಮಿ ಅದನ್ನು ಜಾರಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಕಾಯ್ದೆ ಜಾರಿಗೆ ದಲಿತ ಸಚಿವರು ಮುಂದಾಗಿದ್ದರೂ ಸಿಎಂ ಅದರ ಕಡೆಗೆ ಗಮನಹರಿಸುತ್ತಿಲ್ಲ ಹಾಗಾಗಿ ಅವರಿಗೆ ಬಿಸಿ ಮುಟ್ಟಿಸಲು ಮುಂದಾಗಿರುವುದಾಗಿ ನೌಕರರು ತಿಳಿಸಿದ್ದಾರೆ.
ಎಸ್ಸಿ ಎಸ್ಟಿ ನೌಕರರಿಗೆ ಆಗಿರುವ ಅನ್ಯಾಯವನ್ನು ಆದಷ್ಟು ಬೇಗ ಸರಿಪಡಿಸುತ್ತೇವೆ, ಕಾಯ್ದೆಗೆ ರಾಷ್ಟ್ರಪತಿಗಳಿಂದ ಅಂಗೀಕಾರ ಸಿಕ್ಕಿದೆ ಹಾಗಾಗಿ ಇವತ್ತೇ ಇಲ್ಲವೇ ನಾಳೆಯೇ ಜಾರಿಯಾಗಬಹುದು ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಭರವಸೆ ನೀಡಿದ್ದರು.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications