Get Updates
Get notified of breaking news, exclusive insights, and must-see stories!

ಬೆಂಗಳೂರಿನಲ್ಲಿ ತಡರಾತ್ರಿ ಭಯಾನಕ ಘಟನೆ: ವಿಡಿಯೋ ಫುಲ್‌ ವೈರಲ್!

ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಗಳನ್ನು ಮಾಡುತ್ತಲ್ಲೇ ಇವೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಜನ ಭಯಬೀಳುವಂತಹ ಘಟನೆಗಳು ವರದಿಯಾಗುತ್ತಲ್ಲೇ ಇದೆ. ಇದೀಗ ಐಟಿ ರಾಜಧಾನಿಯಲ್ಲಿ ನಡೆದಿರುವ ಘಟನೆಯು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಅಪಾರಧ ಸುದ್ದಿಗಳು ಹೆಚ್ಚು ಸದ್ದು ಮಾಡುತ್ತಿವೆ. ಅಲ್ಲದೇ ಗಾಡಿಗಳನ್ನು ಅಡ್ಡಗಟ್ಟಿ ಬೆದರಿಸುವುದು. ಕಾರ್‌ಗಳ ಮುಂದೆ ಬಂದು ಬೀಳುವುದು ಹಾಗೂ ಹಿಂಬಾಲಿಸುವಂತಹ ಘಟನೆಗಳು ನಡೆಯುತ್ತಲ್ಲೇ ಇವೆ. ಈ ಬೆಳವಣಿಗೆಗೆಳಿಗೆ ವಿರೋಧವೂ ವ್ಯಕ್ತವಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Scary late night incident in Bengaluru Video full viral

ಬೆಂಗಳೂರು ಐಟಿ ರಾಜಧಾನಿ ಎನ್ನುವ ಖ್ಯಾತಿ ಗಳಿಸಿರುವುದು ಗೊತ್ತಿರುವ ವಿಚಾರವೇ. ಆದರೆ, ಇತ್ತೀಚಿನ ವರ್ಷಗಳಲ್ಲಿ ಕೆಲವು ಕಿಡಿಗೇಡಿಗಳ ಕೃತ್ಯದಿಂದಾಗಿ ಬೆಂಗಳೂರಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡುತ್ತಿದೆ. ಬೆಂಗಳೂರಿನ ಬಗ್ಗೆ ವ್ಯವಸ್ಥಿತವಾಗಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆಯೇ ಎನ್ನುವ ಅನುಮಾನವೂ ಇದರಿಂದ ಮೂಡುತ್ತಿದೆ. ಆದರೆ, ಕಿಡಿಗೇಡಿಗಳ ವರ್ತನೆಗೆ ಆಕ್ರೋಶ ಹೆಚ್ಚಾಗುತ್ತಿದೆ.

ಘಟನೆಯ ಹಿನ್ನೆಲೆ ಏನು: ಭಾನುವಾರ ರಾತ್ರಿ ಸುಮಾರು 10:38ರ ವೇಳೆ ಬೆಂಗಳೂರಿನ ಕಾಡುಬೀಸನಹಳ್ಳಿ - ಪಾಣತ್ತೂರು ರಸ್ತೆಯ ಮಾರ್ಗವಾಗಿ ಕಾರ್‌ನಲ್ಲಿ ದಂಪತಿಗಳು ಹೋಗುವಾಗ ಬೈಕ್‌ನಲ್ಲಿ ಬಂದ ಕಿಡಿಗೇಡಿ, ಕಾರ್‌ಗೆ ಅಡ್ಡಗಟ್ಟಿ ಕೈಸನ್ನೆಯಲ್ಲೇ ಕಾರ್‌ ಸೈಡ್‌ಗೆ ಹಾಕುವಂತೆ ಹೇಳಿದ್ದಾನೆ. ಕಾರ್‌ ಸೈಡ್‌ಗೆ ಹಾಕಿ, ಕೆಳಗೆ ಇಳಿಯಿರಿ ಎಂದು ಬೆದರಿಸಿದ್ದಾನೆ. ಆದರೆ, ದಂಪತಿ ಕಾರು ನಿಲ್ಲಿಸದೆ. ಕಾರ್‌ ಅನ್ನು ಹಿಂದಕ್ಕೆ ತೆಗೆದಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳೀಯರು ದಂಪತಿಗಳ ನೆರವಿಗೆ ಬಂದಿದ್ದಾರೆ ಎನ್ನಲಾಗಿದೆ.

ಆದರೆ, ದುಷ್ಕರ್ಮಿ ಕಾರು ಮುಂದಕ್ಕೆ ಹೋಗದಂತೆ ತಡೆದ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಹಾಗೂ ಮಹಿಳೆ ಭಯಭೀತರಾಗಿರುವುದು. ಕಿರುಚಾಡಿರುವ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸ್ಥಳೀಯರು ಹಾಗೂ ಇದೇ ಮಾರ್ಗದಲ್ಲಿ ಬೇರೆ ವಾಹನಗಳು ಬಂದಿದ್ದರಿಂದ ಅನಾಹುತವೊಂದು ತಪ್ಪಿದೆ.

ಟ್ವೀಟ್‌ ಮಾಡಿ ವಿಜಯೇಂದ್ರ ಆಕ್ರೋಶ: ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಕಾಂಗ್ರೆಸ್‌ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ, ಕನಿಷ್ಠ ಪಕ್ಷ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿಯೂ ಸಂಪೂರ್ಣ ವಿಫಲವಾಗಿದೆ. ರಾತ್ರಿಯಾದರೆ ಪುಂಡರು, ಕಿಡಿಗೇಡಿಗಳು ನಡು ರಸ್ತೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವುದು ದಿನೇ ದಿನೇ ವರದಿಯಾಗುತ್ತಲೇ ಇವೆ ಎಂದು ಅವರು ದೂರಿದ್ದಾರೆ.

ತಡರಾತ್ರಿ ಕಾಡುಬೀಸನಹಳ್ಳಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ ಪುಂಡನೊಬ್ಬ ಬೆದರಿಸುತ್ತಿರುವ ಘಟನೆ ಉದ್ಯೋಗಿಗಳು, ಮಹಿಳೆಯರು ಹಾಗೂ ಬೆಂಗಳೂರಿನ ಸಾರ್ವಜನಿಕರು ಒಂಟಿಯಾಗಿ ಓಡಾಡಲೂ ಸಹ ಭಯಪಡುವ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕಳೆದ ಒಂದೂವರೆ ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಳಿತಪ್ಪಿರುವುದಕ್ಕೆ ಸಾಕ್ಷಿಯಾಗಿ ಸಂಭವಿಸಿರುವ ಅನೇಕ ದುರ್ಘಟನೆಗಳು ನಮ್ಮ ಮುಂದಿವೆ. ಅಭಿವೃದ್ಧಿಯತ್ತ ಒಂದೇ ಒಂದು ಹೆಜ್ಜೆ ಇಡದ ಭ್ರಷ್ಟ ಹಗರಣಗಳ ಸರಮಾಲೆ ಹೊತ್ತ

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾನೂನು ಸುವ್ಯವಸ್ಥೆಯ ವಿಷಯದಲ್ಲಾದರೂ ಜನರಿಗೆ ನೆಮ್ಮದಿ ಕೊಡುವ ಪ್ರಮಾಣಿಕ ಪ್ರಯತ್ನ ಮಾಡಲಿ ಎಂದು ಹೇಳಿದ್ದಾರೆ.

ಐಟಿ ಕಂಪನಿಗಳು ಹೆಚ್ಚಾಗಿ ಇರುವ ಪ್ರದೇಶ: ಇನ್ನು ಕಾಡುಬೀಸನಹಳ್ಳಿಯು ಬೆಂಗಳೂರಿನ ಆಗ್ನೇಯ ಭಾಗದಲ್ಲಿ ಇದೆ. ಈ ಭಾಗದಲ್ಲಿ ಐಟಿಬಿಟಿ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇವೆ. ಅಲ್ಲದೇ ಬೆಳ್ಳಂದೂರು, ವೈಟ್‌ಫೀಲ್ಡ್, ಬ್ರೂಕ್‌ಫೀಲ್ಡ್ ಮತ್ತು ಕೋರಮಂಗಲ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಿಗೆ ಈ ಮಾರ್ಗ ಸಂಪರ್ಕ ಕಲ್ಪಿಸುತ್ತದೆ. ಇಂತಹ ಪ್ರಮುಖ ರಸ್ತೆಯಲ್ಲಿ ಈ ರೀತಿಯ ಅವಘಡ ಸಂಭವಿಸಿರುವು ಆತಂಕಕ್ಕೆ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+