ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಂಶುಪಾಲ ಬಿಡುಗಡೆ
ವಿದ್ಯಾರ್ಥಿನಿಯರಿಗೆ, ಶಿಕ್ಷಕರಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಜನವರಿ 31ರಂದು ಬಂಧಿತನಾಗಿದ್ದ ಪ್ರಾಂಶುಪಾಲ ಕುಮಾರ್ ಠಾಕೂರ್.
ಬೆಂಗಳೂರು, ಫೆಬ್ರವರಿ 3: ಶಿಕ್ಷಕಿಯರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಜನವರಿ 31ರಂದು ಬಂಧಿತನಾಗಿದ್ದ ಪ್ರತಿಷ್ಠಿತ ಕಾಲೇಜೊಂದರ ಪ್ರಾಂಶುಪಾಲ ಕುಮಾರ್ ಠಾಕೂರ್ ಅವರನ್ನು ಫೆ. 2ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೋಕ್ಸೊ ಕಾಯ್ದೆಯಡಿ ಆತನನ್ನು ಬಂಧಿಸಲಾಗಿತ್ತು.
ಸದಾಶಿವ ನಗರದಲ್ಲಿರುವ ಈ ಕಾಲೇಜು ಕ್ಯಾಂಪಸ್ಸಿನಲ್ಲೇ ಈ ಪ್ರಾಂಶುಪಾಲ ತನ್ನ ಕಾಮತೃಷೆಯನ್ನು ಈಡೇರಿಸಿಕೊಳ್ಳಲು ಹವಣಿಸುತ್ತಿದ್ದ ಎನ್ನಲಾಗಿದೆ. ಶಿಕ್ಷಕರಿಯರಿಗೆ ಲೈಂಗಿಕ ಸಂದೇಶ ಕಳುಹಿಸುವುದು, ತನ್ನ ಮೊಬೈಲ್ ನಲ್ಲಿದ್ದ ಕೆಲವಾರು ಅಸಭ್ಯ ಚಿತ್ರಗಳನ್ನು ತೋರಿಸಿ ಅವರನ್ನು ಲೈಂಗಿಕವಾಗಿ ಪ್ರಚೋದಿಸಲು ಪ್ರೇರೇಪಿಸುವುದು ಸೇರಿದಂತೆ ಹಲವಾರು ರೀತಿಯಲ್ಲಿ ಕಾಡುತ್ತಿದ್ದ ಎನ್ನಲಾಗಿದೆ.

ಇದನ್ನು ಪ್ರತಿಭಟಿಸುತ್ತಿದ್ದ ಶಿಕ್ಷಕಿಯರ ಸಂಬಳವನ್ನು ತಡೆಹಿಡಿದು ಪೀಡಿಸುತ್ತಿದ್ದ ಎಂದೂ ಆತನ ವಿರುದ್ಧ ದೂರು ದಾಖಲಾಗಿದೆ.
ಚೈಲ್ಡ್ ಲೈನ್ ನೋಡಲ್ ಅಧಿಕಾರಿಯಾದ ವಾಸುದೇವ ಮೂರ್ತಿಯವರಿಗೆ ಜನವರಿ 14ರಂದು ಬಂದಿದ್ದ ದೂರವಾಣಿ ಕರೆಯಲ್ಲಿ ಸಂತ್ರಸ್ಥೆಯೊಬ್ಬರು ಪ್ರಾಂಶುಪಾಲರ ವಿರುದ್ಧ ದೂರು ಸಲ್ಲಿಸಿದ್ದರು. ಅದರನ್ವಯ, ಕ್ರಮ ಕೈಗೊಂಡ ನೋಡಲ್ ಅಧಿಕಾರಿ ಈ ವಿಚಾರವನ್ನು ಬೆಂಗಳೂರು ಪೊಲೀಸರ ಗಮನಕ್ಕೆ ತಂದಿದ್ದರು.
ಆನಂತರ, ಸಂತ್ರಸ್ಥ ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ ಪೊಲೀಸರು ಸುಮಾರು ಏಳು ಮಂದಿ ವಿದ್ಯಾರ್ಥಿನಿಯರ ವಿವರಣೆಯನ್ನು ದಾಖಲಿಸಿಕೊಂಡಿದ್ದರು. ಅದರ ಆಧಾರದ ಮೇಲೆ ಅವರನ್ನು ಬಂಧಿಸಲಾಗಿತ್ತು.
ಏತನ್ಮಧ್ಯೆ, ಆಪಾದಿತ ಪ್ರಾಂಶುಪಾಲರಿಗೆ ಕರ್ತವ್ಯದಿಂದ ದೂರ ಉಳಿಯುವಂತೆ ಕಾಲೇಜಿನ ಆಡಳಿತ ಮಂಡಳಿಯು ಆದೇಶಿಸಿದೆ. ಇತ್ತ, ಪೊಲೀಸರಿಂದ ತನಿಖೆ ಮುಂದುವರಿದಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications