Get Updates
Get notified of breaking news, exclusive insights, and must-see stories!

ಶಾಲೆಗಳು ಪ್ರಾರಂಭ: ಬಸ್ ಪಾಸ್‌ ಗೊಂದಲ ಬೇಡ- ಕೆಎಸ್‌ಆರ್‌ಟಿಸಿ

ಬೆಂಗಳೂರು, ಮೇ 14: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಮೇ 16ರಿಂದ ಪುನಾರಂಭವಾಗಲಿವೆ ಎಂದು ಈಗಾಗಲೇ ರಾಜ್ಯ ಸರಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್‌ ಪಾಸ್‌ ಮಾನ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ ನೀಡಿದೆ.

ಶನಿವಾರ ಪ್ರಕಟಣೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ 2022-23ರ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಇದೇ ತಿಂಗಳ 16 ರಂದು ಆರಂಭವಾಗುತ್ತಿದೆ. ಹಾಗಾಗಿ ಪ್ರಸ್ತುತ ಸಾಲಿನ ಪಾಸುಗಳನ್ನು ಪಡೆಯಲು ಸಮಯಾವಕಾಶ ಒದಗಿಸಿಕೊಡುವ ಉದ್ದೇಶವನ್ನು ಇಲಾಖೆ ಹೊಂದಿದೆ. ಆದ್ದರಿಂದ ಕಳೆದ ಸಾಲಿನಲ್ಲಿ ಪಡೆದಿರುವ ಪಾಸ್‌ಗಳು ಮಾನ್ಯತಾ ಅವಧಿ ಜೂನ್ 30ರವರೆಗೆ ಇರುವುದರಿಂದ, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ತಮ್ಮ ಹಳೆಯ ಪಾಸುಗಳನ್ನು ಬಳಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.

ಯಾವ ಬಸ್ಸುಗಳಲ್ಲಿ ಬಳಸಲು ಅವಕಾಶ
2021-22ರ ಸಾಲಿನಲ್ಲಿ ರಿಯಾಯಿತಿ ಮತ್ತು ಉಚಿತ ಪಾಸ್‌ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಹಳೆಯ ಪಾಸುಗಳನ್ನು ಕರಾರರಸಾ ನಿಗಮದ ನಗರ, ಹೊರಹೊಲಯ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಇನ್ನು ಹೊಸ ಬಸ್‌ ಪಾಸ್‌ಗಳ ವಿತರಣಾ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ. ಆ ನಂತರ ನಿಯಾಮಾನುಸಾರ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

School reopen;KSRTC clarified on Bus Pass Accreditation

ಮಾಹಿತಿ ನೀಡಲು ಸಾರಿಗೆ ಸಿಬ್ಬಂದಿಗೆ ಸೂಚನೆ
ಬಸ್‌ ಪಾಸ್‌ ಮಾನ್ಯತೆಯ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೆ ಗೊಂದಲ ಉಂಟಾಗದಂತೆ ಸೂಕ್ತಮಾಹಿತಿಯನ್ನು ಒದಗಿಸಿಕೊಡುವಂತೆ ಚಾಲನಾ ಸಿಬ್ಬಂದಿಗೆ ಇಲಾಖೆ ಸೂಚನೆ ನೀಡಿದೆ. ಈ ವಿಚಾರದಲ್ಲಿ ಯಾವುದೇ ರೀತಿಯ ದೂರುಗಳಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕೆಂದು ತಿಳಿಸಲಾಗಿದೆ.

School reopen;KSRTC clarified on Bus Pass Accreditation

ಸಾರಿಗೆ ಇಲಾಖೆಗೆ ಮಾಹಿತಿ
ಮೇ16 ಶಾಲೆಗಳು ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವರು ಸಾರಿಗೆ ಇಲಾಖೆಗೆ ಈಗಾಗಲೆ ಮಾಹಿತಿ ನೀಡಿದ್ದರು. ವಿದ್ಯಾರ್ಥಿಗಳು ಶಾಲೆಗಳಿಗೆ ಬರಲು ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು ಸಾರಿಗೆ ಇಲಾಖೆಗೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳ ಹಳೆಯ ಐಡಿ ಕಾರ್ಡ್ ಅಥವಾ ಶಾಲೆಯಿಂದ ಕೊಡುವ ಲೆಟರ್ ಅನ್ನು ಗಮನಿಸಿ ಪಾಸ್ ವಿತರಿಸಬೇಕು. ಬಿಎಂಟಿಸಿ , ಕೆಎಸ್‌ಆರ್‌ಟಿಸಿ ಸೇರಿದಂತೆ ಯಾವುದೇ ನಿಗಮದ ಸಾರಿಗೆಯಿಂದಲೂ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಸೂಚಿಸಿಲಾಗಿದೆ.

School reopen;KSRTC clarified on Bus Pass Accreditation

ಶಾಲೆ ರಿಪೇರಿ ಕೆಲಸಗಳಿದ್ದರೆ ಮುಗಿಸಲು ಸೂಚನೆ
ಶಾಲೆಗೆ ಮಕ್ಕಳು ಬರಬೇಕೆಂದರೆ ಶಾಲೆಯ ವಾತಾವರಣ ಪರಿಶುದ್ದವಾಗಿರಬೇಕು. ವಿದ್ಯಾರ್ಥಿಗಳು ಶಾಲೆಯ ಆವರಣಕ್ಕೆ ಕಾಲಿಡುತ್ತಿದ್ದಂತೆ ಉಲ್ಲಾಸಿತರಾಗಬೇಕು ಎಂಬ ಕಾರಣಕ್ಕೆ ಶಾಲೆಯನ್ನು ಸ್ವಚ್ಛಗೊಳಿಸಿ ಅಣಿಯಾಗಲು ತಿಳಿಸಲಾಗಿದೆ. ಇನ್ನು ಶಾಲೆಯ ಒಳಾಂಗಣದಲ್ಲಿ ಯಾವುದೇ ರೀತಿಯ ರಿಪೇರಿ ಕೆಲಸಗಳಿದ್ದರೇ ಹಾಗೂ ಬಣ್ಣವನ್ನು ಬಳಿಯಬೇಕಿದ್ದರೆ ಆ ಕಾರ್ಯಗಳನ್ನು ಮೇ 16ರ ಒಳಗೆ ಮುಗಿಸಿಕೊಳ್ಳುವಂತೆ ಮುಖ್ಯೋಪಾಧ್ಯಾಯರಿಗೆ ಈಗಾಗಲೇ ಶಿಕ್ಷಣ ಇಲಾಖೆ ಸೂಚಿಸಿದೆ.

Recommended Video

      ಕ್ಷಮೆ ಕೇಳದಿದ್ರೆ ಸಾಯಲು ರೆಡಿಯಾಗಿ: ಹಿಂದೂಗಳನ್ನು ಟೀಕೆ ಮಾಡಿದವರಿಗೆ ಆತಂಕ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+