ಆಂಗ್ಲ ಮಾಧ್ಯಮಕ್ಕಾಗಿ ಕನ್ನಡ ಶಾಲೆಗಳಿಂದ ಅರ್ಜಿ
ಬೆಂಗಳೂರು, ಜ. 2: ಕಿರಿಯ ಪ್ರಾಥಮಿಕ ತರಗತಿಗಳಲ್ಲಿ (1ರಿಂದ 4) ವಿದ್ಯಾರ್ಜನೆ ಕನ್ನಡ ಮಾಧ್ಯಮದಲ್ಲಿಯೇ ಆಗಬೇಕೆಂದು ಸಾಹಿತಿಗಳು, ಕನ್ನಡ ಪರ ಹೋರಾಟಗಾರರು ಎಷ್ಟೇ ಆಗ್ರಹ ವ್ಯಕ್ತವಾಗಿದ್ದರೂ ಆಂಗ್ಲ ಮಾಧ್ಯಮ ಪ್ರೇಮಿಗಳು ಹೆಚ್ಚುತ್ತಲೇ ಇದ್ದಾರೆ.
ಮುಂದಿನ ಶೈಕ್ಷಣಿಕ ವರ್ಷ (2015-16)ದಿಂದ ಕಿರಿಯ ಪ್ರಾಥಮಿಕ ತರಗತಿಗಳಲ್ಲಿಯೇ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ನೀಡಬೇಕೆಂದು ಹಲವು ಶಾಲೆಗಳು ಅರ್ಜಿ ಸಲ್ಲಿಸಿವೆ. ಇದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಅನಿವಾರ್ಯವಾಗಿ ಒಪ್ಪಿಗೆ ಸೂಚಿಸಿದೆ. ಆದರೆ, ಭಾಷಾ ನೀತಿ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳದ ಕಾರಣ ರಾಜ್ಯ ಸರ್ಕಾರ ಇನ್ನೂ ಅಂತಿಮ ಸೂಚನೆ ನೀಡಿಲ್ಲ. [ಅನಧಿಕೃತ ಶಾಲೆ ಪಟ್ಟಿ : ಆಕ್ಷೇಪಣೆ ಇದ್ದರೆ ಸಲ್ಲಿಸಿ]

ಬೆಂಗಳೂರಿನ 1,096 ಶಿಕ್ಷಣ ಸಂಸ್ಥೆಗಳಿಂದ ಅರ್ಜಿ
ಬೆಂಗಳೂರು ನಗರದಲ್ಲಿಯೇ 1,096 ಶಿಕ್ಷಣ ಸಂಸ್ಥೆಗಳು ಕಿರಿಯ ಪ್ರಾಥಮಿಕ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಕಲಿಕೆ ಆರಂಭಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. ಅಚ್ಚರಿಯ ವಿಷಯವೆಂದರೆ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಟ್ಟಕ್ಕಿಂತ ಕಿರಿಯ ಪ್ರಾಥಮಿಕ ಶಾಲೆ ಮಟ್ಟದಲ್ಲಿ ಇಂಗ್ಲಿಷ್ ಮಾಧ್ಯಮ ಕಲಿಕೆಗೆ ಹೆಚ್ಚು ಬೇಡಿಕೆ ಬಂದಿದೆ.
ಅನೇಕ ಶಿಕ್ಷಣ ಸಂಸ್ಥೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅನುಮತಿ ಪಡೆದಿದ್ದರೂ ಇಂಗ್ಲಿಷ್ ಮಾಧ್ಯಮದಲ್ಲಿಯೇ ಶಿಕ್ಷಣ ನೀಡುತ್ತಿವೆ. ಇಂತಹ ಶಾಲೆಗಳಿಂದಲೇ ಹೆಚ್ಚು ಅರ್ಜಿ ಬಂದಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ. [ಬೆಂಗಳೂರಿನಲ್ಲಿವೆ 1,266 ಅನಧಿಕೃತ ಶಾಲೆಗಳು]
ಪೂರ್ವ ಪ್ರಾಥಮಿಕಕ್ಕೆ ಮಾಧ್ಯಮ ಕಡ್ಡಾಯವಿಲ್ಲ
"ಪೂರ್ವ ಪ್ರಾಥಮಿಕ ಶಾಲೆಗಳಿಗೆ ಯಾವುದೇ ನಿಗದಿತ ಪಠ್ಯ ಇಲ್ಲ. ಆದ್ದರಿಂದ ಈ ಕುರಿತು ಯಾವುದೇ ಮಾಧ್ಯಮವನ್ನು ಕಡ್ಡಾಯಗೊಳಿಸಿಲ್ಲ" ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಯ್ಸಿನ್ ತಿಳಿಸಿದ್ದಾರೆ.
ಅನಧಿಕೃತ ಶಾಲೆಗಳಿಂದ ಮಾನ್ಯತೆಗೆ ಅರ್ಜಿ
ಬೆಂಗಳೂರು ದಕ್ಷಿಣ ಮತ್ತು ಉತ್ತರದಲ್ಲಿ ಅನಧಿಕೃತ ಎಂದು ಗುರುತಿಸಿದ್ದ 1,266 ಶಾಲೆಗಳಲ್ಲಿ ಹೆಚ್ಚಿನ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭಿಸಲು ಅರ್ಜಿ ಸಲ್ಲಿಸಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲು ಮೇಲಧಿಕಾರಿಗಳಿಂದ ಇನ್ನೂ ಸೂಚನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications