ಆಂಗ್ಲ ಮಾಧ್ಯಮಕ್ಕಾಗಿ ಕನ್ನಡ ಶಾಲೆಗಳಿಂದ ಅರ್ಜಿ
ಬೆಂಗಳೂರು, ಜ. 2: ಕಿರಿಯ ಪ್ರಾಥಮಿಕ ತರಗತಿಗಳಲ್ಲಿ (1ರಿಂದ 4) ವಿದ್ಯಾರ್ಜನೆ ಕನ್ನಡ ಮಾಧ್ಯಮದಲ್ಲಿಯೇ ಆಗಬೇಕೆಂದು ಸಾಹಿತಿಗಳು, ಕನ್ನಡ ಪರ ಹೋರಾಟಗಾರರು ಎಷ್ಟೇ ಆಗ್ರಹ ವ್ಯಕ್ತವಾಗಿದ್ದರೂ ಆಂಗ್ಲ ಮಾಧ್ಯಮ ಪ್ರೇಮಿಗಳು ಹೆಚ್ಚುತ್ತಲೇ ಇದ್ದಾರೆ.
ಮುಂದಿನ ಶೈಕ್ಷಣಿಕ ವರ್ಷ (2015-16)ದಿಂದ ಕಿರಿಯ ಪ್ರಾಥಮಿಕ ತರಗತಿಗಳಲ್ಲಿಯೇ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ನೀಡಬೇಕೆಂದು ಹಲವು ಶಾಲೆಗಳು ಅರ್ಜಿ ಸಲ್ಲಿಸಿವೆ. ಇದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಅನಿವಾರ್ಯವಾಗಿ ಒಪ್ಪಿಗೆ ಸೂಚಿಸಿದೆ. ಆದರೆ, ಭಾಷಾ ನೀತಿ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳದ ಕಾರಣ ರಾಜ್ಯ ಸರ್ಕಾರ ಇನ್ನೂ ಅಂತಿಮ ಸೂಚನೆ ನೀಡಿಲ್ಲ. [ಅನಧಿಕೃತ ಶಾಲೆ ಪಟ್ಟಿ : ಆಕ್ಷೇಪಣೆ ಇದ್ದರೆ ಸಲ್ಲಿಸಿ]

ಬೆಂಗಳೂರಿನ 1,096 ಶಿಕ್ಷಣ ಸಂಸ್ಥೆಗಳಿಂದ ಅರ್ಜಿ
ಬೆಂಗಳೂರು ನಗರದಲ್ಲಿಯೇ 1,096 ಶಿಕ್ಷಣ ಸಂಸ್ಥೆಗಳು ಕಿರಿಯ ಪ್ರಾಥಮಿಕ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಕಲಿಕೆ ಆರಂಭಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. ಅಚ್ಚರಿಯ ವಿಷಯವೆಂದರೆ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಟ್ಟಕ್ಕಿಂತ ಕಿರಿಯ ಪ್ರಾಥಮಿಕ ಶಾಲೆ ಮಟ್ಟದಲ್ಲಿ ಇಂಗ್ಲಿಷ್ ಮಾಧ್ಯಮ ಕಲಿಕೆಗೆ ಹೆಚ್ಚು ಬೇಡಿಕೆ ಬಂದಿದೆ.
ಅನೇಕ ಶಿಕ್ಷಣ ಸಂಸ್ಥೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅನುಮತಿ ಪಡೆದಿದ್ದರೂ ಇಂಗ್ಲಿಷ್ ಮಾಧ್ಯಮದಲ್ಲಿಯೇ ಶಿಕ್ಷಣ ನೀಡುತ್ತಿವೆ. ಇಂತಹ ಶಾಲೆಗಳಿಂದಲೇ ಹೆಚ್ಚು ಅರ್ಜಿ ಬಂದಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ. [ಬೆಂಗಳೂರಿನಲ್ಲಿವೆ 1,266 ಅನಧಿಕೃತ ಶಾಲೆಗಳು]
ಪೂರ್ವ ಪ್ರಾಥಮಿಕಕ್ಕೆ ಮಾಧ್ಯಮ ಕಡ್ಡಾಯವಿಲ್ಲ
"ಪೂರ್ವ ಪ್ರಾಥಮಿಕ ಶಾಲೆಗಳಿಗೆ ಯಾವುದೇ ನಿಗದಿತ ಪಠ್ಯ ಇಲ್ಲ. ಆದ್ದರಿಂದ ಈ ಕುರಿತು ಯಾವುದೇ ಮಾಧ್ಯಮವನ್ನು ಕಡ್ಡಾಯಗೊಳಿಸಿಲ್ಲ" ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಯ್ಸಿನ್ ತಿಳಿಸಿದ್ದಾರೆ.
ಅನಧಿಕೃತ ಶಾಲೆಗಳಿಂದ ಮಾನ್ಯತೆಗೆ ಅರ್ಜಿ
ಬೆಂಗಳೂರು ದಕ್ಷಿಣ ಮತ್ತು ಉತ್ತರದಲ್ಲಿ ಅನಧಿಕೃತ ಎಂದು ಗುರುತಿಸಿದ್ದ 1,266 ಶಾಲೆಗಳಲ್ಲಿ ಹೆಚ್ಚಿನ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭಿಸಲು ಅರ್ಜಿ ಸಲ್ಲಿಸಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲು ಮೇಲಧಿಕಾರಿಗಳಿಂದ ಇನ್ನೂ ಸೂಚನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications