ಮುನ್ನೋಟದಿಂದ 'ಇಗೋ ವಿಜ್ಞಾನ' ಬರಹದ ಸ್ಪರ್ಧೆ
ಬೆಂಗಳೂರು, ಫೆಬ್ರವರಿ 10: ಮುನ್ನೋಟವು 'ಇಗೋ ವಿಜ್ಞಾನ' ಎಂಬ ಶೀರ್ಷಿಕೆಯಲ್ಲಿ ವಿಜ್ಞಾನ ಬರಹದ ಸ್ಪರ್ಧೆಯನ್ನು ಆಯೋಜಿಸಿದೆ.
ತಾಯ್ನುಡಿಯಲ್ಲಿ ಕಲಿಕೆಗೆ ಒತ್ತು ಕೊಡುತ್ತ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನ ಸೃಷ್ಟಿಯತ್ತ ಕೆಲಸ ಮಾಡುತ್ತಿರುವ ಮುನ್ನೋಟ ಟ್ರಸ್ಟ್ ಈ ಬಾರಿಯ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ "ಇಗೋ ವಿಜ್ಞಾನ" ಎನ್ನುವ ವಿಜ್ಞಾನ-ತಂತ್ರಜ್ಞಾನ ಬರಹದ ಸ್ಪರ್ಧೆಯನ್ನು ಏರ್ಪಡಿಸಿದೆ.
ಇದರ ಅನ್ವಯ ಪ್ರಪಂಚದ ಯಾವುದೇ ಮೂಲೆಯಲ್ಲಿರುವ, ಯಾವುದೇ ವಯಸ್ಸಿನ ಕನ್ನಡಿಗರಾದರೂ ಸರಿ ಈ ಹೊತ್ತಿನ ವಿಜ್ಞಾನ ಪ್ರಪಂಚದ ಎಂಟು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು, ಅದರ ಮೇಲೆ ಸಾವಿರ ಪದಗಳ ಒಂದು ಬರಹವನ್ನು ಬರೆದು [email protected] ಮಿಂಚೆ ವಿಳಾಸಕ್ಕೆ ಕಳಿಸಬೇಕು.

ಆಯ್ಕೆಯಾದ ಮೊದಲೆರಡು ಬರಹಗಳಿಗೆ ಹತ್ತು ಸಾವಿರ ಹಾಗೂ ಐದು ಸಾವಿರ ರೂಪಾಯಿಗಳ ಬಹುಮಾನವಿದೆ.
ಬರಹ ಮಾಡಬೇಕಾದ ಎಂಟು ವಿಷಯಗಳು:
1- ಮೂಲ ವಿಜ್ಞಾನದ ಮುಂದಿನ ದಿನಗಳು ಹೇಗಿರಲಿವೆ?
2- ಸಾರಿಗೆ ವ್ಯವಸ್ಥೆಯಲ್ಲಿ ಆಗಲಿರುವ ಬದಲಾವಣೆಗಳೇನು?
3- ಅರಿವಿನ ಜಗತ್ತಿಗೆ ಗಣಿತದ ಹೊಸ ಕೊಡುಗೆಗಳು ಹೇಗಿರಲಿವೆ?
4- ವೈದ್ಯಕೀಯ ಕ್ಷೇತ್ರದಲ್ಲಿ ಆಗಲಿರುವ ಮುಂದಿನ ಬದಲಾವಣೆಗಳೇನು?
5-ಸಂಪರ್ಕ ವ್ಯವಸ್ಥೆ ಮುಂದೆ ಹೇಗೆ ಬದಲಾಗಲಿದೆ?
6-ಬೇಸಾಯದಲ್ಲಿ ಆಗಬೇಕಿರುವ ಸುಧಾರಣೆಗಳೇನು?
7- ಬಾನಂಗಳದ ಮುಂದಿನ ದಿನಗಳು ಹೇಗಿರಲಿವೆ?
8-ಯಾವ ತಂತ್ರಜ್ಞಾನಗಳು ಕ್ರಾಂತಿ ಹುಟ್ಟಿಸಲಿವೆ?. ಬರಹವನ್ನು ಕಳುಹಿಸಲು 22 ಫೆಬ್ರವರಿ 2020 ಕೊನೆಯ ದಿನಾಂಕವಾಗಿರಲಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications