ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಬೈಕ್ನ್ನೇ ಕದ್ದ ಚಾಲಾಕಿ ಕಳ್ಳ
ಬೆಂಗಳೂರು, ಫೆಬ್ರವರಿ 9: ನೀವು ನಿಮ್ಮ ವಾಹನಗಳನ್ನು ನಿಲ್ಲಿಸುವಾಗ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಮನೆಯ ಎದುರಾಗಿರಲಿ, ದೇವಸ್ಥಾನದ ಎದುರಾಗಿರಲಿ, ಪೊಲೀಸ್ ಠಾಣೆ ಎದುರೇ ಆಗಿದ್ದರೂ ಎಚ್ಚರಿಕೆಯಿಂದಿರಬೇಕು.
ಇತ್ತೀಚಿನ ದಿನಗಳಲ್ಲಿ ನಿಲ್ಲಿಸಿದ ವಾಹನಗಳನ್ನು ಕದಿಯುವ ಕಳ್ಳರು ಹೆಚ್ಚಾಗುತ್ತಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಬೈಕ್ನ್ನೇ ಕದ್ದು ಪರಾರಿಯಾಗಿದ್ದಾರೆ. ಆದರೆ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಗಡಿ ರಸ್ತೆಯ ರಂಗನಾಥಪುರದ ಬಿಜಿ ಲಿಖಿತೇಶ್ ಕುಮಾರ್ ಎಂಬುವವರು ಬೆಂಗಳೂರು ಟರ್ಫ್ ಕ್ಲಬ್ ಬಳಿ ಇರುವ ಪಾರ್ಕಿಂಗ್ ಪ್ರದೇಶದಲ್ಲಿ ಬೈಕ್ ನಿಲ್ಲಿಸಿದ್ದರು.
ಮೂರು ಗಂಟೆಯ ಬಳಿಕ ಆ ಸ್ಥಳಕ್ಕೆ ಬಂದು ನೋಡಿದರೆ ಆ ಸ್ಥಳದಲ್ಲಿ ಬೈಕ್ ಇರಲಿಲ್ಲ. ಪಾರ್ಕಿಂಗ್ ಜಾಗದಲ್ಲಿದ್ದ ಸೆಕ್ಯುರಿಟಿಯನ್ನು ಕೇಳಿದಾಗ ಅವರಿಗೆ ಏನು ತಿಳಿದಿಲ್ಲ ಎಂದು ಗೊತ್ತಾಗಿದೆ. ಬಳಿಕ ಇಡೀ ಪಾರ್ಕಿಂಗ್ ಪ್ರದೇಶವನ್ನೆಲ್ಲಾ ಜಾಲಾಡಿದರೂ ಬೈಕ್ ಕಾಣಿಸಲಿಲ್ಲ. ಬಳಿಕ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸಿಸಿಟಿವಿ ಗಮನಿಸಿದಾಗ ತಾಜ್ ವೆಸ್ಟೆಂಡ್ ಹೋಟೆಲ್ ಕಡೆಯಿಂದ ಬಂದಂತಹ ವ್ಯಕ್ತಿ ಈ ಬೈಕ್ನ್ನು ಕಳ್ಳತನ ಮಾಡಿರುವುದು ಬಹಿರಂಗಗೊಂಡಿದೆ. ಆ ಪ್ರದೇಶದಲ್ಲಿ ಹಣ ಕೊಟ್ಟು ವಾಹನವನ್ನು ಪಾರ್ಕ್ ಮಾಡಬೇಕು ಆದರೆ ಆ ಹಣಕ್ಕೆ ಯಾವುದೇ ರಶೀದಿ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications