ಗೌರಿ ಲಂಕೇಶ್ ಹತ್ಯೆ ತನಿಖೆಗೆ ಸ್ಕಾಟ್ಲೆಂಡ್ ಪೊಲೀಸರ ನೆರವು
ಬೆಂಗಳೂರು, ಸೆಪ್ಟೆಂಬರ್ 15: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ), ಈವರೆಗೆ ಯಾವುದೇ ವಿಶೇಷ ಸುಳಿವು ಲಭ್ಯವಾಗದ ಹಿನ್ನೆಲೆಯಲ್ಲಿ ಸ್ಕಾಟ್ಲೆಂಡ್ ಪೊಲೀಸರ ನೆರವು ಕೋರಿದ್ದಾರೆ.
ಎಸ್ಐಟಿಯಿಂದ ಮನವಿ ಬಂದ ಹಿನ್ನೆಲೆಯಲ್ಲಿ, ಸ್ಕಾಟ್ಲೆಂಡ್ ನಿಂದ ನಾಲ್ವರು ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಗೌರಿ ಲಂಕೇಶ್ ಹತ್ಯೆಯಾಗಿ ಎರಡು ವಾರ ಕಳೆದಿದ್ದರೂ ಕೊಲೆಗಾರರ ಸುಳಿವನ್ನು ನಿಖರವಾಗಿ ಕೊಡುವಂಥ ಯಾವುದೇ ಸಾಕ್ಷಿಯು ಈವರೆಗೆ ಎಸ್ಐಟಿಗೆ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಇರುವ ಸಾಕ್ಷ್ಯಾಧಾರಗಳನ್ನು ಇನ್ನಷ್ಟು, ಮತ್ತಷ್ಟು ಪರಿಶೀಲನೆಗೊಳಿಸುವ ಅವಶ್ಯಕತೆ ಎಸ್ಐಟಿಗೆ ಕಂಡುಬಂದಿದೆ.
ಹಾಗಾಗಿ, ಇಂಥ ಸೀಮಿತ ಸಾಕ್ಷ್ಯಾಧಾರಗಳಲ್ಲೇ ಏನಾದರೊಂದು ಹೊಸ ಮಾಹಿತಿ ಕಲೆಹಾಕುವಲ್ಲಿ ನಿಷ್ಣಾತರಾಗಿರುವ ಸ್ಕಾಟ್ಲೆಂಡ್ ಪೊಲೀಸರ ಸಹಾಯ ಪಡೆಯಲು ಎಸ್ಐಟಿ ಮುಂದಾಗಿದೆ.
ಪಿಸ್ತೂಲಿನಿಂದ ಹಾರಿರುವ ಗುಂಡಿನ ಮಾದರಿ, ಅದು ದೇಹದ ಮೇಲೆ ಗಾಯ ಸೇರಿದಂತೆ ಇಂಡ್ಯುವಿಷ್ಯುಯಲ್ ಕ್ಯಾರೆಕ್ಟರ್ ಚೆಕ್, ಚೇಂಬರ್ ಮಾರ್ಕ್ ಮುಂತಾದ ಕೆಲವಾರು ವಿಶೇಷ ಪರೀಕ್ಷೆಗಳ ಮೂಲಕ ಸ್ಕಾಟ್ಲೆಂಡ್ ಪೊಲೀಸರು ಗುಂಡು ಹಾರಿದ ಪಿಸ್ತೂಲಿನ ನಿಖರವಾದ ಮಾಹಿತಿ, ಕೊಲೆಗಾರರ ಸಂಚಿನ ಬಗ್ಗೆ ನಿಖರವಾದ ವಿವರಗಳನ್ನು ನೀಡಬಲ್ಲವರಾಗಿದ್ದಾರೆಂದು ಮೂಲಗಳು ತಿಳಿಸಿವೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್











Click it and Unblock the Notifications