Get Updates
Get notified of breaking news, exclusive insights, and must-see stories!

Second Airport: ಏರ್‌ಪೋರ್ಟ್ ಸ್ಥಾಪನೆಗೆ ಅಧಿಕಾರಿಗಳ ಮುಂದಿನ ಸವಾಲುಗಳು

ಬೆಂಗಳೂರು, ಜುಲೈ 24: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಿಸಲಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲಿ ಕಾಡತೊಡಗಿದೆ. ಈಗಾಗಲೇ ಬೆಂಗಳೂರಿನಿಂದ 50ರಿಂದ 60 ಕಿಲೋ ಮೀಟರ್ ದೂರದಲ್ಲೇ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ. ಸದ್ಯ ಅಧಿಕಾರಿಗಳಿಗೆ ಇದೆಲ್ಲವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದೇ ಸವಾಲಾಗಿದೆ.

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸವಾಲುಗಳನ್ನು ಸ್ವೀಕರಿಸಿರುವ ಅಧಿಕಾರಿಗಳು ಮತ್ತು ಉದ್ಯಮಿಗಳು ಅಗತ್ಯ ಸಲಹೆಗಳನ್ನು ಕೇಳುತ್ತಿದ್ದಾರೆ. ಈ ಸಂಬಂಧ ಬುಧವಾರ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬೃಹತ್ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ವಿಸ್ತೃತ ಸಭೆ ನಡೆಯಿತು.

Second Airport MB Patil Held Another Round of Discussion about The Challenges Ahead

ಹೌದು, ರಾಜಧಾನಿಯ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧಸಚಿವ ಎಂ.ಬಿ.ಪಾಟೀಲ ಅವರು ವಿಮಾನಯಾನ ವಲಯದ ಪ್ರಮುಖರ ಜತೆ ವಿಸ್ತೃತ ಚರ್ಚಿಸಿದ್ದಾರೆ.

ತಾಂತ್ರಿಕ ಅಂಶಗಳ ಕಡೆಗೆ ಹೆಚ್ಚು ಗಮನ: ಸಚಿವ

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಸೇರಿದಂತೆ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ' ಎಂದು ಹೇಳಿದರು.

Second Airport MB Patil Held Another Round of Discussion about The Challenges Ahead

ಮುಂದಿನ ದಿನಗಳಲ್ಲಿ ಮತ್ತಷ್ಟು ಸಭೆ

ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದರು

ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಟ್ಟಿ ಪಾಲ್ಗೊಂಡಿದ್ದರು.

ಒಂದು ವಿಮಾನ ನಿಲ್ದಾಣ ನಿರ್ಮಿಸಬೇಕಾದರೆ ಸುತ್ತಲೂ ಗುಡ್ಡ ಗಾಡು ಪ್ರದೇಶ, ಅಡತಡೆ ಇರಬಾರದು, ನಗರಕ್ಕೆ, ಮೆಟ್ರೋ, ಬಸ್‌ ಸಂಚಾರ, ಹೆದ್ದಾರಿಗೆ ಆ ನಿಲ್ದಾಣ ಹತ್ತಿರವಿರಬೇಕು. ಅಂತಹ ಪ್ರದೇಶಗಳ ಹುಡುಕಾಟ ನಡೆಯುತ್ತಿದೆ. ಈಗಾಗಲೇ ಐದಾರು ಕಡೆ ಜಾಗ ಗುರುತಿಸಲಾಗಿದೆ. ಸುಮಾರು ಐದು ಸಾವಿರಕ್ಕೂ ಅಧಿಕ ಎಕರೆ ಜಾಗ ಬೇಕಾಗಬಹುದು ಎನ್ನಲಾಗಿದೆ. ನಿರ್ಮಾಣದ ಪ್ರಾಥಮಿಕ ಹಂತದ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+