ವಿಮಾನ ನಿಲ್ದಾಣಕ್ಕೆ ಮೆಟ್ರೋ: ಭಾರಿ ಮೊತ್ತದ ಕಾಮಗಾರಿಗೆ ಸಂಪುಟ ಅಸ್ತು
ಬೆಂಗಳೂರು, ಜನವರಿ 10: ಎರಡನೇ ಬಿ ಹಂತದ ಮೆಟ್ರೋ ಕಾಮಗಾರಿಗೆ ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ನೀಡಿತ್ತು. ಕಾಮಗಾರಿಗಳು ಪ್ರಾರಂಭವಾಗಲಿವೆ.
ಎರಡನೇ ಬಿ ಹಂತದ ಮೆಟ್ರೋ ಹಳಿ ನಿರ್ಮಾಣ ಕಾಮಗಾರಿಗೆ 23,093 ಕೋಟಿ ರೂಪಾಯಿ ವೆಚ್ಚದ ಅಂದಾಜು ಮಾಡಲಾಗಿದೆ. ಎರಡನೇ ಬಿ ಹಂತದಲ್ಲಿ ಮೆಟ್ರೋ ಹಳಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ.
ದೀರ್ಘ ಮಾರ್ಗವಾದ ಇದು ಹಿಲಲಿಗೆ-ಬೈಯಪ್ಪನಹಳ್ಳಿ-ಯಲಹಂಕ-ದೇವನಹಳ್ಳಿ ಗಳನ್ನು ಮೆಟ್ರೋ ಸಂಪರ್ಕಿಸಲಿದೆ. ಇದೇ ಮಾರ್ಗವು ವಿಮಾನ ನಿಲ್ದಾಣಕ್ಕೂ ಪ್ರಯಾಣಿಕರನ್ನು ಹೊತ್ತೊಯ್ಯಲಿದೆ. ಇದು ಕಾರಿಡಾರ್ 4 ಆಗಿದ್ದು ಇದರ ಹಳಿಯ ಉದ್ದ 36 ಕಿ.ಮೀ ಇರಲಿದೆ. ಇದರಲ್ಲಿ 29 ನಿಲ್ದಾಣಗಳು ಇರಲಿವೆ.

35.75 ಕಿ.ಮೀ ಉದ್ದದ ಮೊದಲನೇ ಕಾರಿಡಾರ್
ಎರಡನೇ ಬಿ ಹಂತದ ಕಾರಿಡಾರ್ 1 ರಲ್ಲಿ ಕೆಂಗೇರಿ-ಕೆಎಸ್ಆರ್ ಬೆಂಗಳೂರು- ಬೆಂಗಳೂರು ಕಂಟೋನ್ಮೆಂಟ್-ಬೈಯಪ್ಪನಹಳ್ಳಿ-ಕೆ.ಆರ್.ಪುರಂ-ವೈಟ್ಫೀಲ್ಡ್ ಮಾರ್ಗದಲ್ಲಿ ಸಂಚರಿಸಲಿದೆ. ಇದರ ಒಟ್ಟು ಉದ್ದ 35.75 ಕಿ.ಮೀ ಇರಲಿದೆ. ಈ ಮಾರ್ಗದಲ್ಲಿ 11 ನಿಲ್ದಾಣಗಳು ಇರಲಿವೆ.

24 ಕಿ.ಮೀಯ ಎರಡನೇ ಕಾರಿಡಾರ್
ಎರಡನೇ ಕಾರಿಡಾರ್ ಕೆಎಸ್ಆರ್ ಬೆಂಗಳೂರು-ಯಶವಂತಪುರ-ಲೊಟ್ಟೆಗೊಲ್ಲಹಳ್ಳಿ-ಕೊಡಿಗೇಹಳ್ಳಿ-ಯಲಹಂಕ-ರಾಜನಕುಂಟೆ ಮಾರ್ಗಗಳಲ್ಲಿ ಮೆಟ್ರೋ ನಿರ್ಮಾಣವಾಗಲಿದೆ. ಈ ಮಾರ್ಗವು 24.88 ಕಿ.ಮೀ ಇರಲಿದೆ. ಈ ಮಾರ್ಗದಲ್ಲಿ 9 ನಿಲ್ದಾಣಗಳು ಇರಲಿವೆ.

ಮೂರನೇ ಕಾರಿಡಾರ್ ಎಲ್ಲೆಲ್ಲಿ
ಮೂರನೇ ಕಾರಿಡಾರ್ನಲ್ಲಿ ನೆಲಮಂಗಲ-ಚಿಕ್ಕಬಾಣಾವಾರ-ಯಶವಂತಪುರ-ಮತ್ತಿಕೆರೆ-ಲೊಟ್ಟೆಗೊಲ್ಲಹಳ್ಳಿ-ಹೆಬ್ಬಾಳ-ಬಾಣಸವಾಡಿ-ಬೈಯಪ್ಪನಹಳ್ಳಿ ಮಾರ್ಗಗಗಳಲ್ಲಿ ಮೆಟ್ರೊ ಹಳಿ ನಿರ್ಮಾಣವಾಗಲಿದೆ. ಇದರ ಒಟ್ಟು ಉದ್ದ 38.94 ಕಿ.ಮೀ ಇರಲಿದೆ. ಈ ಮಾರ್ಗದಲ್ಲಿ 24 ನಿಲ್ದಾಣಗಳು ಇರಲಿವೆ.

ಭೂ ಒತ್ತುವರಿ ಆರಂಭ
ಇದು ಬಹು ಭಾರಿ ಗಾತ್ರದ ಮೆಟ್ರೋ ಕಾಮಗಾರಿ ಆಗಿರಲಿದ್ದು, ವೈಟ್ಫೀಲ್ಡ್ ಹೊರತಾಗಿ ಇನ್ನಾವ ಮಾರ್ಗಗಳಲ್ಲಿಯೂ ಸಹ ಮೆಟ್ರೋ ಕಾಮಗಾರಿ ಪ್ರಾರಂಭವಾಗಿಲ್ಲ. ಎರಡನೇ ಬಿ ಹಂತದ ಕಾಮಗಾರಿ ದೀರ್ಘವಾಗಿರಲಿದ್ದು, ಭೂ ಒತ್ತುವರಿ ಕಾರ್ಯ ಮಾತ್ರವೇ ಈಗ ಆರಂಭವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications