ಕೆಂಗೇರಿ ರೈಲು ನಿಲ್ದಾಣ ಪ್ರಯಾಣಿಕರಿಗೆ ಗುಡ್ ನ್ಯೂಸ್
ಬೆಂಗಳೂರು, ಫೆಬ್ರವರಿ 26: ಬೆಂಗಳೂರು ನಗರದ ಕೆಂಗೇರಿ ರೈಲು ನಿಲ್ದಾಣದ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದಿದೆ. ಎರಡನೇ ಪ್ರವೇಶ ದ್ವಾರದ ಕಾಮಗಾರಿ ವೇಗವಾಗಿ ಸಾಗುತ್ತಿದೆ. ಮೇ ತಿಂಗಳಿನಲ್ಲಿ ಇದು ಉದ್ಘಾಟನೆಗೊಳ್ಳುವ ನಿರೀಕ್ಷೆ ಇದ್ದು, ಪ್ರಯಾಣಿಕರು ರೈಲು ನಿಲ್ದಾಣ ಮತ್ತು ನಮ್ಮ ಮಟ್ರೋ ನಿಲ್ದಾಣಕ್ಕೆ ಸಂಚಾರ ನಡೆಸಲು ಅನುಕೂಲವಾಗಲಿದೆ. ಸುಮಾರು 20 ಕೋಟಿ ರೂ. ವೆಚ್ಚದ ಯೋಜನೆಯ ಕಾಮಗಾರಿ ಅಂತಿಮ ಹಂತವನ್ನು ತಲುಪುತ್ತಿದೆ.
ರೈಲು ಕಾಲೋನಿ ಬದಿಯಿಂದ ನಮ್ಮ ಮೆಟ್ರೋ ಮತ್ತು ರೈಲು ನಿಲ್ದಾಣಗಳ ನಡುವೆ ಸಂಚಾರ ನಡೆಸಿ ಅಪಾಯಕ್ಕೆ ಸಿಲುಕುವ ತೊಂದರೆಯನ್ನು ಈ ಹೊಸ ಪ್ರವೇಶ ದ್ವಾರ ದೂರ ಮಾಡಲಿದೆ. 1.5 ಕಿ. ಮೀ. ದೂರವನ್ನು ಈ ಪ್ರವೇಶದ್ವಾರದ ಮೂಲಕ 500 ಮೀಟರ್ನಲ್ಲಿ ತಲುಪಬಹುದಾಗಿದೆ.

ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಕೆಂಗೇರಿ ನಿಲ್ದಾಣವನ್ನು ಪುನರ್ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ಮೈಸೂರು, ಬೆಂಗಳೂರು ಪ್ರವೇಶ ಮಾಡಲು ಮಾಡಲು ವಾಪಸ್ ಹೋಗಲು ಅನುಕೂಲವಾಗುವಂತೆ 2ನೇ ಪ್ರವೇಶ ದ್ವಾರ ನಿರ್ಮಾಣ ಮಾಡಲಾಗುತ್ತಿದೆ.
58 ರೈಲುಗಳ ಸಂಚಾರ: ಕೆಂಗೇರಿ ರೈಲು ನಿಲ್ದಾಣದ ನಗರದ ಜನನಿಬಿಡ ರೈಲು ನಿಲ್ದಾಣಗಳಲ್ಲಿ ಒಂದು. ಸುಮಾರು 20,000 ಪ್ರಯಾಣಿಕರು ಪ್ರತಿದಿನ ನಿಲ್ದಾಣಕ್ಕೆ ಭೇಟಿ ನೀಡುತ್ತಾರೆ. ಅಲ್ಲದೇ 58 ರೈಲುಗಳು ಸಂಚಾರ ನಡೆಸುತ್ತವೆ ಎಂದು ಅಂದಾಜಿಸಲಾಗಿದೆ.
ಅದರಲ್ಲೂ ಬೆಂಗಳೂರು-ಮೈಸೂರು ನಗರದ ನಡುವೆ ಸಂಚಾರ ನಡೆಸುವ ರೈಲುಗಳು ಕೆಂಗೇರಿ ರೈಲು ನಿಲ್ದಾಣದಲ್ಲಿ ನಿಲುಗಡೆ ಹೊಂದಿವೆ. ಕೆಂಗೇರಿಯಲ್ಲಿ ನಮ್ಮ ಮೆಟ್ರೋ ನಿಲ್ದಾಣವೂ ಇರುವುದರಿಂದ ಜನರು ರೈಲಿನ ಮೂಲಕ ಆಗಮಿಸಿ ಮೆಟ್ರೋ ರೈಲು ಏರಲು ಸಹ ನಿಲ್ದಾಣ ಅನುಕೂಲವಾಗಿದೆ.
ಎರಡನೇ ಪ್ರವೇಶ ದ್ವಾರ ಲೋಕಾರ್ಪಣೆಗೊಂಡರೆ ನಮ್ಮ ಮೆಟ್ರೋ ಮತ್ತು ರೈಲು ನಿಲ್ದಾಣಗಳ ನಡುವೆ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಉಪ ನಗರವಲ್ಲದ ರೈಲು ನಿಲ್ದಾಣ ಎಂದು ಕೆಂಗೇರಿಯನ್ನು ಗುರುತಿಸಿದ್ದು, ಈ ಕಾಮಗಾರಿ ಕೈಗೊಳ್ಳಲಾಗಿದೆ. ನಿಲ್ದಾಣದಲ್ಲಿ ಪ್ರತಿದಿನ ಸುಮಾರು 1.44 ಲಕ್ಷ ರೂ. ಮೌಲ್ಯದ ಟಿಕೆಟ್ ವಿತರಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಮೃತ್ ಭಾರತ್ ಯೋಜನೆಯಡಿ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ರೈಲು ನಿಲ್ದಾಣದ ಕಾಮಗಾರಿಯನ್ನು ರೈಲ್ವೆ ಖಾತೆ ರಾಜ್ಯ ಸಚಿವರ ವಿ. ಸೋಮಣ್ಣ ಕೆಲವು ದಿನಗಳ ಹಿಂದೆ ಪರಿಶೀಲನೆ ಮಾಡಿದ್ದಾರೆ. ಪ್ರಯಾಣಿಕರು ರೈಲಿಗಾಗಿ ಕಾಯುವ ಸ್ಥಳ, ಬೈಕ್ ಮತ್ತು ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೆಂಗೇರಿ ರೈಲು ನಿಲ್ದಾಣದಲ್ಲಿ ಒದಗಿಸಲಾಗುತ್ತಿದೆ.
ಮೆಟ್ರೋ ಮತ್ತು ರೈಲು ನಿಲ್ದಾಣದ ನಡುವೆ ಕಿರಿದಾರ ರಸ್ತೆ ಇದೆ. ಎರಡನೇ ಪ್ರವೇಶ ದ್ವಾರ ನಿರ್ಮಾಣಗೊಂಡು ಲೋಕಾರ್ಪಣೆಯಾದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಪ್ರವೇಶ ದ್ವಾರ ಉದ್ಘಾಟನೆಗಾಗಿ ಪ್ರತಿನಿತ್ಯ ಸಂಚಾರ ನಡೆಸುವ ಜನರು, ವಿದ್ಯಾರ್ಥಿಗಳು ಕಾಯುತ್ತಿದ್ದಾರೆ ಎಂದು ಜನರು ಹೇಳಿದ್ದಾರೆ.
ಈ 2ನೇ ಪ್ರವೇಶ ದ್ವಾರ ನಿರ್ಮಾಣದಿಂದ ಹೆಚ್ಚಿನ ಲಾಭವಾಗುವುದು ಕೆಂಗೇರಿ ಉಪನಗರ ಕಡೆಯ ಪ್ರಯಾಣಿಕರಿಗೆ. ಈಗ ಮುಖ್ಯ ಪ್ರವೇಶದ ಮೂಲಕ ನಿಲ್ದಾಣವನ್ನು ತಲುಪಲು ಕೆಂಗೇರಿ ಉಪನಗರದ ಸುತ್ತು ಬಳಸಿ ಬರಬೇಕಿದೆ. ಈ ಪ್ರವೇಶ ದ್ವಾರ ಅವರ ಸಮಯ ಉಳಿತಾಯ ಮಾಡುತ್ತದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications