ಸಂಚಾರ ಮುಕ್ತಗೊಳಿಸುವ ಸಾಧ್ಯತೆ: ಬಿಎಂಆರ್ಸಿಎಲ್ ಗೆ ಇಲ್ಲ ಸ್ಪಷ್ಟತೆ
ಬೆಂಗಳೂರು, ಫೆಬ್ರವರಿ 3 : 2018-19 ನೇ ಸಾಲಿನಲ್ಲಿ ನಮ್ಮ ಮೆಟ್ರೋದ 12.80 ಕಿ,ಮೀ ಉದ್ದದ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಕೇಂದ್ರ ಬಜೆಟ್ ನಲ್ಲಿ ಉಲ್ಲೇಖಿಸಲಾಗಿದ್ದರೂ ಅದು ಈ ವರ್ಷ ಪೂರ್ಣಗೊಳ್ಳುವುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೇಂದ್ರ ಬಜೆಟ್ ನಲ್ಲಿ ದೇಶದಲ್ಲಿ ಒಟ್ಟು 190 ಕಿ.ಮೀ ಉದ್ದದ ನಮ್ಮ ಮೆಟ್ರೋ ಮಾರ್ಗಗಳು ರೈಲು ಸೇವೆಗೆ ಸಿಗಲಿದೆಎಂದು ಉಲ್ಲೇಖಿಸಲಾಗಿದೆ. ಇದರಲ್ಲಿ ಬೆಂಗಳೂರು ಮೆಟ್ರೋ ಎರಡನೇ ಹಂತದ ಯೋಜನೆಯ ೧೨.೮೦ ಕಿ.ಮೀ ಉದ್ದದ ಮಾರ್ಗವೂ ಸೇರಿದೆ. ಆದರೆ, ಈ ಅವಧಿಯಲ್ಲಿ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳಲಿವೆಯೇ ಹೊರತು ವಾಣಿಜ್ಯ ಸಂಚಾರಕ್ಕೆ ದೊರೆಯುವ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಯಲಚೇನಹಳ್ಳಿಯಿಂದ ಅಂಜನಾಪುರ ಟೌನ್ ಶಿಪ್ ವರೆಗಿನ 6.5 ಕಿ.ಮೀಮಾರ್ಗ, ಹಾಗೂ ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ 6.45 ಕಿ.ಮೀ ಮಾರ್ಗವನ್ನು 2018ರ ಅಂತ್ಯ ಅಥವಾ ಆರ್ಥಿಕ ವರ್ಷವಾದ ೨೦೧೯ರ ಮಾರ್ಚ್ ಅಂತ್ಯಕ್ಕೆ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಅಂದಾಜಿಸಲಾಗಿದೆ.

ಈ ಅಂದಾಜಿನ ಮೇಲೆ ಬಜೆಟ್ ನಲ್ಲಿ12 ಕಿ.ಮೀ ಮಾರ್ಗವನ್ನು ಸಂಚಾರ ಮುಕ್ತ ಗೊಳಿಸುವ ಕುರಿತು ಉಲ್ಲೇಖಿಸಲಾಗಿದೆ. ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಯಲಚೇನಹಳ್ಳಿ-ಅಂಜನಾಪುರ ಮಾರ್ಗದ ಕಾಮಗಾರಿ ಪರಿಶೀಲನೆ ನಡೆಸಿದ್ದಾಗ 2018ರ ಅಂತ್ಯಕ್ಕೆ ಈ ಮಾರ್ಗದಲ್ಲಿ ಸೇವೆ ಆರಂಭಿಸಲಾಗುವುದು ಎಂದು ಹೇಳಿದ್ದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications