ಸಂಬಳಕ್ಕಾಗಿ ಸ್ಪೀಕರ್ ಕಚೇರಿ ಎದುರು ನೌಕರರ ಧರಣಿ
ಬೆಂಗಳೂರು, ಅಕ್ಟೋಬರ್ 26: ಕೆಬಿ ಕೋಳಿವಾಡ ವಿಧಾನಸಭೆ ಸ್ಪೀಕರ್ ಆಗಿದ್ದ ಅವಧಿಯಲ್ಲಿ ನೇಮಕಗೊಂಡಿರುವ ಸರಿಸುಮಾರು 100 ಜನ ನೌಕರರಿಗೆ ಈವರೆಗೂ ವೇತನ ನೀಡಿಲ್ಲ ಎಂದು ಆರೋಪಿಸಿ ಹಲವಾರು ನೌಕರರು ಶುಕ್ರವಾರ ಹಾಲಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿ ಎದುರು ಹಠಾತ್ ಪ್ರತಿಭಟನೆ ನಡೆಸಿದರು.
2017-18ನೇ ಸಾಲಿನಲ್ಲಿ 100ಕ್ಕೂ ಹೆಚ್ಚು ನೌಕರರನ್ನು ವಿಧಾನಸಭೆ ಸಚಿವಾಲಯದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು, ವಿವಿಧ ಹಂತದ ಹುದ್ದೆಗಳ ನೇಮಕಾತಿ ವೇಳೆ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವೂ ಕೇಳಿ ಬಂದಿತ್ತು.
ಅಲ್ಲದೆ ಅಂದಿನ ಸ್ಪೀಕರ್ ಕೆಬಿ ಕೋಳೀವಾಡ್ ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿದ್ದಾರೆ ಹೀಗಾಗಿ ಹಣಕಾಸು ಇಲಾಖೆಯಿಂದ ವೇತನ ಬಟುವಾಡೆಗೆ ಅವಕಾಶವಿಲ್ಲ ಎಂಬ ಮಾಹಿತಿಯೂ ಹೊರಬಿದ್ದಿತ್ತು.

ಈ ನಡುವೆಯೇ ಈ ಕರ್ತವ್ಯಕ್ಕೆ ಹಾಜರಾಗಿರುವ 100ಕ್ಕೂ ಹೆಚ್ಚು ಜನರ ಪರಿಸ್ಥಿತಿ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ನೌಕರರು ಶುಕ್ರವಾರ ಸ್ಪೀಕರ್ ಹಾಗೂ ರಮೇಶ್ ಕುಮಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ, ಕಳೆದ ಎಂಟು ತಿಂಗಳಿಂದ ತಾವು ಯಾವುದೇ ವೇತನವಿಲ್ಲದೆ ದುಡಿಯುತ್ತಿದ್ದು ಆದಷ್ಟು ಬೇಗ ನ್ಯಾಯ ಒದಗಿಸಿಕೊಡಬೇಕೆಂದು ಕೋರಿದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಶಾಸಕರ ಪ್ರಶ್ನೆಗೆ ಉತ್ತರ ಕೊಡಲು ಸಚಿವರ ನಿರಾಸಕ್ತಿ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ | Karnataka Assembly Speaker -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ











Click it and Unblock the Notifications