ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಬಳಕ್ಕಾಗಿ ಸ್ಪೀಕರ್ ಕಚೇರಿ ಎದುರು ನೌಕರರ ಧರಣಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 26: ಕೆಬಿ ಕೋಳಿವಾಡ ವಿಧಾನಸಭೆ ಸ್ಪೀಕರ್ ಆಗಿದ್ದ ಅವಧಿಯಲ್ಲಿ ನೇಮಕಗೊಂಡಿರುವ ಸರಿಸುಮಾರು 100 ಜನ ನೌಕರರಿಗೆ ಈವರೆಗೂ ವೇತನ ನೀಡಿಲ್ಲ ಎಂದು ಆರೋಪಿಸಿ ಹಲವಾರು ನೌಕರರು ಶುಕ್ರವಾರ ಹಾಲಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿ ಎದುರು ಹಠಾತ್ ಪ್ರತಿಭಟನೆ ನಡೆಸಿದರು.

ಮಾಜಿ ಸ್ಪೀಕರ್ ಕೋಳಿವಾಡಗೆ ಸಮ್ಮಿಶ್ರ ಸರ್ಕಾರದಿಂದ ಬಿಗ್ ಶಾಕ್ ಮಾಜಿ ಸ್ಪೀಕರ್ ಕೋಳಿವಾಡಗೆ ಸಮ್ಮಿಶ್ರ ಸರ್ಕಾರದಿಂದ ಬಿಗ್ ಶಾಕ್

2017-18ನೇ ಸಾಲಿನಲ್ಲಿ 100ಕ್ಕೂ ಹೆಚ್ಚು ನೌಕರರನ್ನು ವಿಧಾನಸಭೆ ಸಚಿವಾಲಯದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು, ವಿವಿಧ ಹಂತದ ಹುದ್ದೆಗಳ ನೇಮಕಾತಿ ವೇಳೆ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

ಸರ್ಕಾರ ಕೆಡವಲು ಯತ್ನ: ಬಿಜೆಪಿ ವಿರುದ್ಧ ಸಭಾಧ್ಯಕ್ಷರಿಗೆ ಜೆಡಿಎಸ್‌ ದೂರು ಸರ್ಕಾರ ಕೆಡವಲು ಯತ್ನ: ಬಿಜೆಪಿ ವಿರುದ್ಧ ಸಭಾಧ್ಯಕ್ಷರಿಗೆ ಜೆಡಿಎಸ್‌ ದೂರು

ಅಲ್ಲದೆ ಅಂದಿನ ಸ್ಪೀಕರ್ ಕೆಬಿ ಕೋಳೀವಾಡ್ ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿದ್ದಾರೆ ಹೀಗಾಗಿ ಹಣಕಾಸು ಇಲಾಖೆಯಿಂದ ವೇತನ ಬಟುವಾಡೆಗೆ ಅವಕಾಶವಿಲ್ಲ ಎಂಬ ಮಾಹಿತಿಯೂ ಹೊರಬಿದ್ದಿತ್ತು.

ಸ್ಪೀಕರ್ ರಮೇಶ್‌ ಕುಮಾರ್‌ಗೆ ರಾಜಭವನ ಪ್ರವೇಶ ನೀಡದ ಅಧಿಕಾರಿಗಳು ಸ್ಪೀಕರ್ ರಮೇಶ್‌ ಕುಮಾರ್‌ಗೆ ರಾಜಭವನ ಪ್ರವೇಶ ನೀಡದ ಅಧಿಕಾರಿಗಳು

Secretariat employees seek salary before speaker

ಈ ನಡುವೆಯೇ ಈ ಕರ್ತವ್ಯಕ್ಕೆ ಹಾಜರಾಗಿರುವ 100ಕ್ಕೂ ಹೆಚ್ಚು ಜನರ ಪರಿಸ್ಥಿತಿ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ನೌಕರರು ಶುಕ್ರವಾರ ಸ್ಪೀಕರ್ ಹಾಗೂ ರಮೇಶ್ ಕುಮಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ, ಕಳೆದ ಎಂಟು ತಿಂಗಳಿಂದ ತಾವು ಯಾವುದೇ ವೇತನವಿಲ್ಲದೆ ದುಡಿಯುತ್ತಿದ್ದು ಆದಷ್ಟು ಬೇಗ ನ್ಯಾಯ ಒದಗಿಸಿಕೊಡಬೇಕೆಂದು ಕೋರಿದರು.

English summary
Group of employees who are working in speaker secretariat of Karnataka assembly have submitted memorandum to speaker Ramesh Kumar seeking salary for last eight months since they have appointed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X