ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗಲಭೆ; ಆಗಸ್ಟ್ 18ರ ತನಕ ನಿಷೇಧಾಜ್ಞೆ ವಿಸ್ತರಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 16 : ಬೆಂಗಳೂರು ಪೊಲೀಸರು ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 18ರ ತನಕ ನಿಷೇಧಾಜ್ಞೆಯನ್ನು ಮುಂದುವರೆಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರ ರಾತ್ರಿ ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

Recommended Video

TATA Group ಹೊಸ ವರ್ಷದ ವೇಳೆಗೆ Air India ನಿಯಂತ್ರಣವನ್ನು ತೆಗೆದುಕೊಳ್ಳಬಹುದು.! | Oneindia Kannada

ಬೆಂಗಳೂರು ನಗರ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಜಂಟಿಯಾಗಿ ನಿಷೇಧಾಜ್ಞೆ ವಿಸ್ತರಣೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಸೆಕ್ಷನ್ 144 ಅನ್ವಯ ಆಗಸ್ಟ್ 18ರ ಬೆಳಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು ಗಲಭೆ; ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ ಬೆಂಗಳೂರು ಗಲಭೆ; ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ

ಆಗಸ್ಟ್ 14ರಂದು ಭಾನುವಾರ ಬೆಳಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇಂದು ನಿಷೇಧಾಜ್ಞೆ ಅವಧಿ ಪೂರ್ಣಗೊಂಡ ಕಾರಣ ಅದನ್ನು ಪುನಃ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಗಲಭೆ ಪೀಡಿತ ಪ್ರದೇಶಕ್ಕೆ ಭಾನುವಾರ ಬಿಜೆಪಿ ತಂಡ ಭೇಟಿಬೆಂಗಳೂರು: ಗಲಭೆ ಪೀಡಿತ ಪ್ರದೇಶಕ್ಕೆ ಭಾನುವಾರ ಬಿಜೆಪಿ ತಂಡ ಭೇಟಿ

ಮಂಗಳವಾರ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 340 ಜನರನ್ನು ಬಂಧಿಸಲಾಗಿದೆ. ಗಲಭೆ ಪ್ರಕರಣದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಗಡೆ ನಗರದಲ್ಲಿರುವ ಎಸ್‌ಡಿಪಿಐ ಕಚೇರಿ ಮೇಲೆಯೂ ದಾಳಿ ನಡೆಸಿದ್ದಾರೆ.

ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ಗಲಭೆ ಹಿನ್ನಲೆಯಲ್ಲಿ ನಿಷೇಧಾಜ್ಞೆ

ಗಲಭೆ ಹಿನ್ನಲೆಯಲ್ಲಿ ನಿಷೇಧಾಜ್ಞೆ

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿತ್ತು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು, ಕಲ್ಲು ತೂರಾಟ ನಡೆದಿತ್ತು. ಆದ್ದರಿಂದ, ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

340 ಜನರ ಬಂಧನ

340 ಜನರ ಬಂಧನ

ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪ್ರದೇಶಗಳಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 340 ಆರೋಪಿಗಳನ್ನು ಬಂಧಿಸಲಾಗಿದೆ. 80 ಜನರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿದೆ. ಎಲ್ಲಾ ಆರೋಪಿಗಳಿಗೂ ಕೋವಿಡ್ ಪರೀಕ್ಷೆ ಮಾಡಿದ ಬಳಿಕ ಜೈಲಿಗೆ ಕಳಿಸಲಾಗುತ್ತಿದೆ.

ಎಸ್‌ಡಿಪಿಐ ಕಚೇರಿ ಮೇಲೆ ದಾಳಿ

ಎಸ್‌ಡಿಪಿಐ ಕಚೇರಿ ಮೇಲೆ ದಾಳಿ

ಮಂಗಳವಾರ ರಾತ್ರಿ ನಡೆ ಗಲಭೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ರಾಡ್, ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪ್ರದೇಶಗಳಿಗೆ ಇಂದು ಬಿಜೆಪಿಯ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದೆ. ಗಲಭೆ ಕುರಿತು ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗಿದೆ.

English summary
Under Code of Criminal Procedure (CrPC) section 144 has been imposed in areas under DJ Halli and KG Halli police station limits, Bengaluru till 6 am on 18th August, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X