Bengaluru: ವಿಧಾನಸೌಧಕ್ಕೆ ಬಂದಿದ್ದ ಮಹಿಳೆ ಬ್ಯಾಗ್ನಲ್ಲಿ ಚಾಕು ಪತ್ತೆ
ಬೆಂಗಳೂರು, ಜುಲೈ 10: ವಿಧಾನಮಂಡಲ ಜಂಟಿ ಅಧಿವೇಶನದೊಳಕ್ಕೆ ಬಜೆಟ್ ಮಂಡನೆ ದಿನವೇ (ಜುಲೈ 07) ಅನುಮಾನಾಸ್ಪದ ವ್ಯಕ್ತಿ ಆಗಮಿಸಿದ್ದ ಬೆನ್ನಲ್ಲೆ ಇಂದು ಮಹಿಳೆಯೊಬ್ಬಳು ವಿಧಾನಸೌಧಕ್ಕೆ ಚಾಕು ಇಟ್ಟುಕೊಂಡು ಬಂದಿದ್ದ ಘಟನೆ ನಡೆದಿದೆ. ಈ ಮೂಲಕ ಒಂದೇ ವಾರದಲ್ಲಿ ಎರಡು ಭಾರಿ ಭದ್ರತಾ ಲೋಪ ಉಂಟಾಗಿರುವುದು ಬೆಳಕಿಗೆ ಬಂದಿದೆ.
ಸೋಮವಾರ ಎಂದಿನಂತೆ ವಿಧಾನಸೌಧ ಕಾರ್ಯಕಲಾಪಗಳು ಆರಂಭವಾಗಿವೆ. ಈ ವೇಳೆ ವಿಧಾನನೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಆಕೆಯನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿಗಳು ವಾಪಸ್ ಕಳುಹಿಸಿದ್ದಾರೆ.

ಮಹಿಳೆ ವಿಧಾನಸೌಧ ಆಗಮಿಸುತ್ತಿದ್ದ ಬ್ಯಾಗ್ ಸ್ಕಾನ್ಗೆ ಸಿಬ್ಬಂದಿ ಸೂಚಿಸಿದ್ದಾರೆ. ಅವರು ಸ್ಕಾನಿಂಗ್ ಮಷಿನ್ನಲ್ಲಿ ಬ್ಯಾಗ್ ಇಡುತ್ತಿದ್ದಂತೆ ಚಾಕು ಇರುವುದು ಗೊತ್ತಾಗಿದೆ. ಕೆಲ ಕಾಲ ಸಿಬ್ಬಂದಿಯಲ್ಲಿ ಆತಂಕ ಉಂಟಾಗಿತ್ತು ಎನ್ನಲಾಗಿದೆ. ಚಾಕು ತಂದಿದ್ದ ಮಹಿಳೆ ಯಾರು?, ಯಾವ ಉದ್ದೇಶದಿಂದ ಹೀಗೆ ನಿಯಮ ಮೀರಿ ವಿಧಾನಸೌಧಕ್ಕೆ ಪ್ರವೇಶ ಬಯಸಿದ್ದಳು ಎಂಬ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
ಇತ್ತೀಚೆಗಷ್ಟೇ ಅಧಿವೇಶನದಲ್ಲಿ ನಡೆಯುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆ ದಿನವೇ ಅನಾಮಿಕ ವ್ಯಕ್ತಿಯೊಬ್ಬರು ಶಾಸಕರ ಆಸನದಲ್ಲಿ ಕುಳಿತು ಎದ್ದು ಹೋಗಿದ್ದರು. ಅವರು 15 ನಿಮಿಷ ಸದನ ಒಳಗಿದ್ದರು. ಅ ಪರಿಚಿತ ವ್ಯಕ್ತಿ ಡಿಕೆ ಶಿವಕುಮಾರ್ ಅವರಿಗೆ ಬಜೆಟ್ ಬಗ್ಗೆ ಶುಭ ಕೋರಿದ್ದರು ಎನ್ನಲಾಗಿದೆ. ಅಂದು ಸಹ ಉಂಟಾಗಿದ್ದ ಭದ್ರತಾ ಲೋಪವಾಗಿದ ಸೋಮವಾರ ಮತ್ತೆ ಮರುಕಳಿಸಿದೆ.
ವಿಧಾನಸೌಧದೊಳಕ್ಕೆ ರಾಜಕಾರಣಿಗಳು, ಪೊಲೀಸರ ಓಡಾಟ ಸಾಮಾನ್ಯವಾಗಿರುತ್ತದೆ. ಸಾರ್ವಜನಿಕರಿಗೆ ಐಡಿ ಕಾರ್ಡ್, ಸಂಘ ಸಂಸ್ಥೆಗಳ ನಿಯೋಗಕ್ಕೆ ಮೊದಲೇ ನೀಡಿದ್ದ ಅನುಮತಿ, ಅಗತ್ಯ ದಾಖಲೆ ಆಧಾರದಲ್ಲಿ ಒಳಬಿಡಲಾಗುತ್ತದೆ. ಪತ್ರರ್ಕತರಿಗೆ ವಿಧಾನಸೌಧ ಪ್ರವೇಶಕ್ಕೆ ವಿಶೇಷ ಪ್ರವೇಶ ಕಾರ್ಡ್ ನೀಡಲಾಗುತ್ತದೆ. ಇಷ್ಟೆಲ್ಲ ಭದ್ರತೆ ಇದ್ದರೂ ಅನಾಮಧೇಯ ವ್ಯಕ್ತಿ ಒಳಬಂದು ಹೋಗಿದ್ದ. ಈ ಘಟನೆ ಸಾಕಷ್ಟು ಚರ್ಚೆ ಆಯಿತು.
ಈ ಘಟನೆ ಬೆನ್ನಲ್ಲೆ ವಿಧಾನಸೌಧದ ಬಿಗಿ ಭದ್ರತೆ ಒದಗಿಸಲಾಯಿತು. ಅದರ ಬೆನ್ನಲ್ಲೆ ಮಹಿಳೆಯ ಚಾಕು ಹಿಡಿದು ಒಳಬರಲು ಯತ್ನಿಸಿದ ಘಟನೆ ನಡೆದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications