ಭದ್ರತಾ ಸಿಬ್ಬಂದಿ ನೇಮಿಸಿ, ಇಲ್ಲ ಎಟಿಎಂ ಮುಚ್ಚಿ

ಜ್ಯೋತಿ ಉದಯ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣದ ನಂತರ ಎಟಿಎಂಗಳಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಚರ್ಚಿಸಲು ಗೃಹ ಸಚಿವ ಕೆ.ಜೆ.ಜಾರ್ಜ್, ಬುಧವಾರ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, ಎಟಿಎಂ ಕೇಂದ್ರಗಳಿಗೆ ಭದ್ರತಾ ಸಿಬ್ಬಂದಿ ನಿಯೋಜನೆ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.
ಎಲ್ಲಾ ಬ್ಯಾಂಕ್ ಗಳು ಎಟಿಎಂ ಕೇಂದ್ರಗಳಿಗೆ ಸೆಕ್ಯೂರಿಟಿ ಗಾರ್ಡ್ ನೇಮಕ ಮಾಡಬೇಕು. ಅದಕ್ಕಾಗಿ ಅವರಿಗೆ 3 ದಿನಗಳ ಗಡುವು ನೀಡಲಾಗುವುದು. ನಂತರ ಭದ್ರತಾ ಸಿಬ್ಬಂದಿ ಇಲ್ಲದ ಎಟಿಎಂ ಕೇಂದ್ರಗಳನ್ನು ಮುಚ್ಚಲು ಸೂಚನೆ ನೀಡಲಾಗುವುದು ಎಂದು ಜಾರ್ಜ್ ಹೇಳಿದರು. ಬೆಂಗಳೂರು ನಗರದಲ್ಲಿ 2500 ಎಟಿಎಂ ಕೇಂದ್ರಗಳಿದ್ದು, 600 ಎಟಿಎಂಗಳಿಗೆ ಭದ್ರತಾ ಸಿಬ್ಬಂದಿ ಇಲ್ಲ ಎಂದು ಅವರು ಮಾಹಿತಿ ನೀಡಿದರು.
ಎಟಿಎಂ ಕೇಂದ್ರಗಳಿಗೆ ತರಬೇತಿ ಪಡೆದ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಬೇಕು. ಬ್ಯಾಂಕ್ ಗಳು ಎಟಿಎಂ ಸ್ಥಾಪನೆ ಮಾಡುವ ಮುನ್ನ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಕಾಲ-ಕಾಲಕ್ಕೆ ಎಟಿಎಂ ಕೇಂದ್ರಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುವಂತೆ ಸಮೀಪದ ಪೊಲೀಸ್ ಠಾಣೆಗಳಿಗೆ ಸೂಚಿಸಲಾಗುವುದು. ಎಟಿಎಂ ಕೇಂದ್ರಗಳಿಗೆ ಹೊಸ ನಿಯಮ ಜಾರಿಗೆ ತರಲು ವಿಶೇಷ ನಿಯಮ ಪೊಲೀಸ್ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ( ಜ್ಯೋತಿ ಉದಯ್ ಆರೋಗ್ಯದಲ್ಲಿ ಚೇತರಿಕೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications