ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
ನಿಯಮದ ಪ್ರಕಾರ ಕ್ರಿಕೆಟ್ ಪಂದ್ಯ ನಡೆಯುವಾಗ ಕ್ರಿಕೆಟ್ ಮೈದಾನದ ಒಳಗಡೆ ಆಟಗಾರರು ಆಂಪೈರ್ಸ್ಗಳನ್ನು ಹೊರತುಪಡಿಸಿ ಯಾರು ಬರುವಂತಿಲ್ಲ. ಆದರೂ ಈಗಾಗಲೇ ಮ್ಯಾಚ್ ನಡೆಯುವ ವೇಳೆ ಅಭಿಮಾನಿಗಳು ತಮ್ಮ ಇಷ್ಟದ ಆಟಗಾರರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ ಘಟನೆಗಳು ನಡೆದಿದ್ದು, ಈ ವೇಳೆ ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗದಂತೆ ಅಲ್ಲಿಂದ ಹೊರ ಕಳುಹಿಸಿಲಾಗಿದೆ. ಆದರೆ ಮೊನ್ನೆಯಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ ಅಭಿಮಾನಿಯನ್ನು ಸೆಕ್ಯೂರಿಟಿಗಳು ಥಳಿಸಿರುವ ಅಮಾನವೀಯ ಘಟನೆ ನಡೆದಿದೆ.
ಮೊನ್ನೆಯಷ್ಟೇ ಬೆಂಗಳೂರು ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್ ಮತ್ತು ಆರ್ಸಿಬಿ ತಂಡಗಳ ನಡುವೆ ಪಂದ್ಯ ಪಡೆಯುತ್ತಿತ್ತು. ಈ ವೇಳೆ ಅಭಿಮಾನಿಯೊಬ್ಬರು ದಿಢೀರನೇ ಮೈದಾನಕ್ಕೆ ನುಗ್ಗಿ ಅಭಿಮಾನದಿಂದ ವಿರಾಟ್ ಕೊಹ್ಲಿ ಕಾಲು ಹಿಡಿದಿದ್ದಾರೆ.

ಈ ವೇಳೆ ಸೆಕ್ಯೂರಿಟಿಗಳು ಆ ಅಭಿಮಾನಿಯನ್ನು ಸಮಾಧಾನದಿಂದ ಹೊರಗೆ ಕಳುಹಿಸಬಹುದಾಗಿತ್ತು. ಆದರೆ ಕಾಲಲ್ಲಿ ತುಳಿದು ಅಮಾನವೀಯತೆಯನ್ನು ಮೆರೆದಿದ್ಧಾರೆ. ಇನ್ನು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಇದಕ್ಕೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಮೊನ್ನೆಯ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನದಿಂದ ವಿರಾಟ್ ಕೊಹ್ಲಿ ಕಾಲು ಹಿಡಿದ ಅಭಿಮಾನಿಯೊಬ್ಬನಿಗೆ ಈ ರೀತಿ ಕಾಲಲ್ಲಿ ತುಳಿಯೋದು ಎಷ್ಟು ಸರಿ.
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) March 28, 2024
ತಪ್ಪು ಮಾಡಿದ್ರೆ ಕಾನೂನು ಕ್ರಮವಾಗಲಿ ಆದ್ರೆ ಅಲ್ಲಿನ ಸೆಕ್ಯೂರಿಟಿ ಸಿಬ್ಬಂದಿ ಆತನನ್ನು ತುಳಿದು ಹೊಡೆಯೋದು ಎಷ್ಟು ಸರಿ.@RCBTweets
ಇವರ ಮೇಲೆ ಕ್ರಮವಾಗಲಿ.@BlrCityPolice @CPBlr pic.twitter.com/4qsXZ0cYui
ಇನ್ನು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ತಮ್ಮ ಟ್ವೀಟ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಿವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. "ಮೊನ್ನೆಯ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನದಿಂದ ವಿರಾಟ್ ಕೊಹ್ಲಿ ಕಾಲು ಹಿಡಿದ ಅಭಿಮಾನಿಯೊಬ್ಬನಿಗೆ ಈ ರೀತಿ ಕಾಲಲ್ಲಿ ತುಳಿಯೋದು ಎಷ್ಟು ಸರಿ?, ತಪ್ಪು ಮಾಡಿದ್ರೆ ಕಾನೂನು ಕ್ರಮವಾಗಲಿ. ಆದರೆ ಅಲ್ಲಿನ ಸೆಕ್ಯೂರಿಟಿ ಸಿಬ್ಬಂದಿ ಆತನನ್ನು ತುಳಿದು ಹೊಡೆಯೋದು ಎಷ್ಟು ಸರಿ?," ಎಂದು ಪ್ರಶ್ನಿಸುವ ಮೂಲಕ ಕೆಂಡಕಾರಿದ್ದಾರೆ.
ಮಾರ್ಚ್ 25ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಆರ್ಸಿಬಿ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಪಂಜಾಬ್ ವಿರುದ್ಧದ ಆರ್ಸಿಬಿ ಗೆಲುವು ಸಾಧಿಸಿತು. ಈ ಮೂಲಕ ಆರ್ಸಿಟಿ ಲೀಗ್ನಲ್ಲಿ ತನ್ನ ಮೊದಲು ಗೆಲುವು ದಾಖಲಿಸಿದಂತಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 177 ರನ್ಗಳನ್ನು ಕಲೆಹಾಕಿತು. ಇತ್ತ 177 ರನ್ಗಳ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡ 19.2 ಓವರ್ಗಳಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ಗಳಿಂದ ಜಯ ಸಾಧಿಸಿತು.
ಈ ಪಂದ್ಯದಲ್ಲಿ ವಿರಾಟ್ ಕಿಂಗ್ ಕೊಹ್ಲಿ 49 ಎಸೆತಗಳಲ್ಲಿ 77 ರನ್ ಚಚ್ಚಿ ಮಿಂಚಿದ್ದರು. ಇನ್ನು ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 28 ರನ್ ಗಳಿಸಿ ತಂಡದ ಗೆಲುವಿಗೆ ಮುಖ್ಯ ಪಾತ್ರರಾದರು. ಇದಕ್ಕೂ ಮುಂಚೆ ಮಹಿಪಾಲ್ ಲೊಮ್ರೋರ್ ಕೂಡ 8 ಎಸೆತಗಳಲ್ಲಿ ಅಜೇಯ 17 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆದರೂ ಇವರ ಈ ರನ್ಗಳು ಕೂಡ ತಂಡದ ಗೆಲುವಿಗೆ ಪ್ರಮುಖ ಕೊಡುಗೆಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
ಉತ್ತಮ ಆರಂಭ ನೀಡಿದ ಕಿಂಗ್ ಕೊಹ್ಲಿ: 177 ರನ್ ಬೆನ್ನತ್ತಿದ ಆರ್ಸಿಬಿಗೆ ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಆದರೆ ನಾಯಕ ಫಾಫ್ ಡುಪ್ಲೆಸಿಸ್ ಬೇಗ ವಿಕೆಟ್ ಒಪ್ಪಿಸಿ ಆರಂಭದಲ್ಲಿಯೇ ಹೊಡೆತ ಕೊಟ್ಟರು. ಬಳಿಕ ಇದರ ಬೆನ್ನಲ್ಲೇ ಕ್ಯಾಮರೂನ್ ಗ್ರೀನ್ ವಿಕೆಟ್ ಬಿದ್ದಿದ್ದು, ಡುಪ್ಲಿಸಿಸ್ ಹಾಗೂ ಗ್ರೀನ್ ತಲಾ 3 ರನ್ ಸಿಡಿಸಿದರಷ್ಟೇ. ಬಳಿಕ ಕಣದಲ್ಲಿ ಒಬ್ಬೊಂಟಿಯಾಗಿ ಹೋರಾಡುತ್ತಿದ್ದ ಕಿಂಗ್ ಕೊಹ್ಲಿಗೆ ಗ್ಲೇನ್ ಮ್ಯಾಕ್ಸ್ವೆಲ್ ಆದ್ರೂ ಸಾಥ್ ನೀಡುತ್ತಾರೆ ಎನ್ನುವ ಭರವಸೆ ಅಭಿಮಾನಿಗಳಲ್ಲಿತ್ತು. ಆದರೆ ಇದು ಕೂಡ ವಿಫಲವಾಯಿತು.
ಮ್ಯಾಕ್ಸಿ ಕೇವಲ 3 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ನಂತರವೂ ಕೊಹ್ಲಿ ಹೋರಾಟ ಮಾತ್ರ ಅಬ್ಬರದಿಂದಲೇ ಮುಂದುವರೆದಿತ್ತು. ನಂತರ ಬಂದ ರಜತ್ ಪಾಟೀದಾರ್ ಕೂಡ ಹೆಚ್ ಸಮಯ ಮೈದಾನದಲ್ಲಿರದೇ, 18 ರನ್ ಸಿಡಿಸಿ ಔಟಾದರು. ಆಗಳು ಕೊಹ್ ಎದೆಗುಂದದೇ ತಮ್ಮ ಏಕಾಂಗಿ ಹೋರಾಟವನ್ನು ಮುಂದುವರೆಸಿ ಅರ್ಧ ಶತಕವನ್ನು ಮಾಡಿಕೊಂಡರು. ನಂತರ 77 ರನ್ ಸಿಡಿಸಿ ಔಟಾದರು. 49 ಎಸೆತದಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ ಕಿಂಗ್ ಕೊಹ್ಲಿ 77 ರನ್ ಸಿಡಿಸಿ ಔಟಾದರು.
ಬಳಿಕ ಅನೂಜ್ ರಾವತ್ 11 ರನ್ ಸಿಡಿಸಿ ಔಟಾದರು. ಆದರೆ ಮಹಿಪಾಲ್ ಲೊಮ್ರೊರ್ ಹಾಗೂ ದಿನೇಶ್ ಕಾರ್ತಿಕ್ ಆಟ ಪಂದ್ಯದ ಗತಿಯನ್ನೇ ಬೇರೆಡೆ ಕರೆದುಕೊಂಡು ಹೋಯಿತು. ಲೊಮ್ರೊರ್ ಹಾಗೂ ದಿನೇಶ್ ಕಾರ್ತಿಕ್ ಬೌಂಡರಿ, ಸಿಕ್ಸ್ಗಳ ಸುರಿಮಳೆ ಸುರಿಸುವ ಮೂಲಕ ಆರ್ಸಿಬಿ ಗೆಲುವಿಗೆ ಪ್ರಮುಖ ಪಾತ್ರ ವಹಿಸುವ ಮೂಲಕ ಅಭಿಮಾನಿಗಳ ನಿರಾಸೆಯನ್ನು ಹೋಗಾಲಾಡಿಸಿರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ












Click it and Unblock the Notifications