ಗಣರಾಜ್ಯೋತ್ಸವ : ಬೆಂಗಳೂರಿನಲ್ಲಿ ಭದ್ರತೆ ಹೇಗಿದೆ?
ಬೆಂಗಳೂರು, ಜ.24 : ಮಾಣಿಕ್ ಷಾ ಮೈದಾನದ ಸುತ್ತ 36 ಸಿಸಿ ಕ್ಯಾಮೆರಾ, 9 ಡಿಸಿಪಿ, 22 ಎಸಿಪಿ, 96 ಇನ್ಸ್ಪೆಕ್ಟರ್ಗಳ ನಿಯೋಜನೆ, 150 ಮಂದಿ ಮಫ್ತಿ ಪೊಲೀಸರ ಕಾವಲು ಮುಂತಾದವು ಗಣರಾಜ್ಯೋತ್ಸವ ಭದ್ರತೆಗಾಗಿ ಬೆಂಗಳೂರಿನಲ್ಲಿ ಪೊಲೀಸರು ತೆಗೆದುಕೊಂಡಿರುವ ಕ್ರಮಗಳು.
ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ನಗರದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದರು. ಗಣರಾಜ್ಯೋತ್ಸವದ ಸಮಾರಂಭ ನಡೆಯುವ ಮಾಣಿಕ್ ಷಾ ಪರೇಡ್ ಮೈದಾನದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದರು. [ಮಾಣಿಕ್ ಷಾ ಬಗ್ಗೆ ಓದಿ]

ಮೈದಾನದ ಸುತ್ತ 36 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ವೀಕ್ಷಣಾ ಗೋಪುರಗಳನ್ನು ನಿರ್ಮಿಸಲಾಗಿದೆ. 15 ದಿನಗಳಿಂದ ಮೈದಾನ ಬಳಿ ಶಸ್ತ್ರ ಸಜ್ಜಿತ ಪೊಲೀಸರು ಕಾವಲಿದ್ದು, ಅಗತ್ಯ ಮೆನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ. ಗೇಟ್ ಸಂಖ್ಯೆ-4ರಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ಹೇಳಿದರು. [ಗಣರಾಜ್ಯೋತ್ಸವಕ್ಕೆ ಒಬಾಮಾ ಬರ್ತಾರೆ]
ಇವುಗಳನ್ನು ತರಬೇಡಿ : ಗಣರಾಜ್ಯೋತ್ಸವ ಸಮಾರಂಭ ನೋಡಲು ಆಗಮಿಸುವ ಸಾರ್ವಜನಿಕರು ಸಿಗರೇಟ್, ಬೆಂಕಿ ಪೊಟ್ಟಣ, ಪಟಾಕಿ, ಕ್ಯಾಮೆರಾ, ಮೊಬೈಲ್, ಹೆಲ್ಮೆಟ್, ನೀರಿನ ಬಾಟಲ್, ತಿಂಡಿ-ತಿನಿಸು, ಬಣ್ಣದ ದ್ರಾವಣಗಳು, ಕರಪತ್ರ, ಬಾವುಟ ತರುವುದನ್ನು ನಿಷೇಧಿಸಲಾಗಿದೆ ಎಂದರು. [ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ]
9 ಡಿಸಿಪಿ, 22 ಎಸಿಪಿ, 96 ಇನ್ಸ್ಪೆಕ್ಟರ್, 7 ಸಿಎಆರ್ ತುಕಡಿ, 2 ಕ್ಷಿಪ್ರ ಕಾರ್ಯಾಚರಣೆ ಪಡೆ, 327 ಎಎಸ್ಐ, 850 ಹೆಡ್ಕಾನ್ಸ್ಟೆಬಲ್, 1882 ಪೊಲೀಸ್ ಕಾನ್ಸ್ಟೆಬಲ್, 128 ಮಹಿಳಾ ಕಾನ್ಸ್ಟೆಬಲ್, 150 ಮಂದಿ ಮಫ್ತಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗುರುತಿನ ಚೀಟಿ ಕಡ್ಡಾಯ : ಕಾರ್ಯಕ್ರಮಕ್ಕೆ ಆಗಮಿಸುವವರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಅನುಚಿತ ವರ್ತನೆ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು. ಡಿಸೆಂಬರ್ 28ರಂದು ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಂಡಿರುವುದರಿಂದ ಹೊಟೇಲ್, ಲಾಡ್ಜ್ಗಳ ಮೇಲೆ ನಿಗಾ ವಹಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳ ಮೇಲೂ ನಿಗಾ ಇರಿಸಲಾಗಿದೆ ಎಂದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications