ಬೆಂಗಳೂರಿನ ಗಣೇಶ ವಿಸರ್ಜನೆ: ಅಭೂತಪೂರ್ವ ಮೆರವಣಿಗೆಗೆ ಸಿದ್ಧತೆ
ಉತ್ತರ ಮತ್ತು ಪೂರ್ವ ಡಿಸಿಪಿ ವಿಭಾಗದಲ್ಲಿ ಸುಮಾರು 80 ಕ್ಕೂ ಹೆಚ್ಚು ಸಂಘಟನೆಗಳು ವಿಘ್ನೇಶ್ವರ ಉತ್ಸವ ಸಮಿತಿ ಆಶ್ರಯದಲ್ಲಿ ಸಾಮೂಹಿಕವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಮೆರವಣಿಗೆಯಲ್ಲಿ ಸುಮಾರು 5 ಸಾವಿರ ಮಂದಿ ಭಾಗವಹಿಸುವ ಸಾಧ್ಯತೆ ಇದೆ ಹೀಗಾಗಿ ದುಷ್ಕರ್ಮಿಗಳು ಈ ಸಂದರ್ಭವನ್ನು ದುರುಪಯೋಗ ಪಡಿಸಿಕೊಳ್ಳದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮೆರವಣಿಗೆ ಸಾಗುವ ಮಾರ್ಗ
ವಿಘ್ನೇಶ್ವರ ಉತ್ಸವ ಸಮಿತಿಯು ಎಂಜಿ ರಸ್ತೆಯಿಂದ ಮೆರವಣಿಗೆ ಆರಂಭಿಸಿ, ಮುನಿಸ್ವಾಮಪ್ಪ ರಸ್ತೆ, ಶಿವಣ್ಣ ಸರ್ಕಲ್, ಜೆಸಿ ನಗರ ಮುಖ್ಯರಸ್ತೆ ಮಾರ್ಗವಾಗಿ ಟಿಆರ್ ಟಿಸಿ ಜಂಕ್ಷನ್ ವರೆಗೆ ಮೆರವಣಿಗೆ ಹೊರಟು ಅಂತಿಮವಾಗಿ ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಮದ್ಯ ನಿಷೇಧಿತ ಪ್ರದೇಶ
ಜೆಸಿನಗರ, ಆರ್ ಟಿ ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳು, ಬಾರ್ ಮತ್ತು ವೈನ್ ಶಾಪ್ ಬಂದ್ ಮಾಡಲು ಸೂಚಿಸಲಾಗಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ, ಪುಲಕೇಶಿನಗರ, ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡ ಎಣ್ಣೆ ಬಂದ್ ಆಗಲಿದೆ.

ಪೊಲೀಸರ ಬಳಿ ಇರುತ್ತೆ ಗುಪ್ತ ಕ್ಯಾಮರಾಗಳು
ಗಣೇಶ ವಿಸರ್ಜನೆಯ ಸಂಭ್ರಮವನ್ನು ಹಾಳು ಮಾಡಲು ಸಾಕಷ್ಟು ಮಂದಿ ಕಾಯುತ್ತಿರುತ್ತಾರೆ, ಅಂತವರ ಮೇಲೆ ನಿಗಾ ಇರಿಸಲು ಪೊಲೀಸರು ಗುಪ್ತ ಕ್ಯಾಮರಾವನ್ನು ಇರಿಸಿದ್ದಾರೆ, ಅಷ್ಟೇ ಅಲ್ಲದೆ ಪೊಲೀಸರು ಮಫ್ತಿಯಲ್ಲಿ ಗಸ್ತು ತಿರುತ್ತಿರುತ್ತಾರೆ.

ಒಂದೇ ದಿನದಲ್ಲಿ 1.69ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ
ಒಂದೇ ದಿನದಲ್ಲಿ ಬೆಂಗಳೂರಲ್ಲಿ 1.69 ಲಕ್ಷ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಕೆರೆ, ಪುಷ್ಕರಣಿ, ಮೊಬೈಲ್ ಟ್ಯಾಂಕ್ ಗಳು ಮತ್ತು ತಾತ್ಕಾಲಿಕ ಟ್ಯಾಂಕ್ ಗಳಲ್ಲಿ ಗುರುವಾರ ಒಂದೇ ದಿನಕ್ಕೆ ಒಂದೂವರೆ ಲಕ್ಷ ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಗೆ 22 ಕೆರೆಗಳು, 174 ಮೊಬೈಲ್ ಟ್ಯಾಂಕ್ ಗಳು ಮತ್ತು 63 ತಾತ್ಕಾಲಿಕ ಟ್ಯಾಕ್ ಗಳ ವ್ಯವಸ್ಥೆ ಮಾಡಲಾಗಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications