ಬೆಂಗಳೂರಿನ ಗಣೇಶ ವಿಸರ್ಜನೆ: ಅಭೂತಪೂರ್ವ ಮೆರವಣಿಗೆಗೆ ಸಿದ್ಧತೆ
ಉತ್ತರ ಮತ್ತು ಪೂರ್ವ ಡಿಸಿಪಿ ವಿಭಾಗದಲ್ಲಿ ಸುಮಾರು 80 ಕ್ಕೂ ಹೆಚ್ಚು ಸಂಘಟನೆಗಳು ವಿಘ್ನೇಶ್ವರ ಉತ್ಸವ ಸಮಿತಿ ಆಶ್ರಯದಲ್ಲಿ ಸಾಮೂಹಿಕವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಮೆರವಣಿಗೆಯಲ್ಲಿ ಸುಮಾರು 5 ಸಾವಿರ ಮಂದಿ ಭಾಗವಹಿಸುವ ಸಾಧ್ಯತೆ ಇದೆ ಹೀಗಾಗಿ ದುಷ್ಕರ್ಮಿಗಳು ಈ ಸಂದರ್ಭವನ್ನು ದುರುಪಯೋಗ ಪಡಿಸಿಕೊಳ್ಳದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮೆರವಣಿಗೆ ಸಾಗುವ ಮಾರ್ಗ
ವಿಘ್ನೇಶ್ವರ ಉತ್ಸವ ಸಮಿತಿಯು ಎಂಜಿ ರಸ್ತೆಯಿಂದ ಮೆರವಣಿಗೆ ಆರಂಭಿಸಿ, ಮುನಿಸ್ವಾಮಪ್ಪ ರಸ್ತೆ, ಶಿವಣ್ಣ ಸರ್ಕಲ್, ಜೆಸಿ ನಗರ ಮುಖ್ಯರಸ್ತೆ ಮಾರ್ಗವಾಗಿ ಟಿಆರ್ ಟಿಸಿ ಜಂಕ್ಷನ್ ವರೆಗೆ ಮೆರವಣಿಗೆ ಹೊರಟು ಅಂತಿಮವಾಗಿ ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಮದ್ಯ ನಿಷೇಧಿತ ಪ್ರದೇಶ
ಜೆಸಿನಗರ, ಆರ್ ಟಿ ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳು, ಬಾರ್ ಮತ್ತು ವೈನ್ ಶಾಪ್ ಬಂದ್ ಮಾಡಲು ಸೂಚಿಸಲಾಗಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ, ಪುಲಕೇಶಿನಗರ, ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡ ಎಣ್ಣೆ ಬಂದ್ ಆಗಲಿದೆ.

ಪೊಲೀಸರ ಬಳಿ ಇರುತ್ತೆ ಗುಪ್ತ ಕ್ಯಾಮರಾಗಳು
ಗಣೇಶ ವಿಸರ್ಜನೆಯ ಸಂಭ್ರಮವನ್ನು ಹಾಳು ಮಾಡಲು ಸಾಕಷ್ಟು ಮಂದಿ ಕಾಯುತ್ತಿರುತ್ತಾರೆ, ಅಂತವರ ಮೇಲೆ ನಿಗಾ ಇರಿಸಲು ಪೊಲೀಸರು ಗುಪ್ತ ಕ್ಯಾಮರಾವನ್ನು ಇರಿಸಿದ್ದಾರೆ, ಅಷ್ಟೇ ಅಲ್ಲದೆ ಪೊಲೀಸರು ಮಫ್ತಿಯಲ್ಲಿ ಗಸ್ತು ತಿರುತ್ತಿರುತ್ತಾರೆ.

ಒಂದೇ ದಿನದಲ್ಲಿ 1.69ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ
ಒಂದೇ ದಿನದಲ್ಲಿ ಬೆಂಗಳೂರಲ್ಲಿ 1.69 ಲಕ್ಷ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಕೆರೆ, ಪುಷ್ಕರಣಿ, ಮೊಬೈಲ್ ಟ್ಯಾಂಕ್ ಗಳು ಮತ್ತು ತಾತ್ಕಾಲಿಕ ಟ್ಯಾಂಕ್ ಗಳಲ್ಲಿ ಗುರುವಾರ ಒಂದೇ ದಿನಕ್ಕೆ ಒಂದೂವರೆ ಲಕ್ಷ ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಗೆ 22 ಕೆರೆಗಳು, 174 ಮೊಬೈಲ್ ಟ್ಯಾಂಕ್ ಗಳು ಮತ್ತು 63 ತಾತ್ಕಾಲಿಕ ಟ್ಯಾಕ್ ಗಳ ವ್ಯವಸ್ಥೆ ಮಾಡಲಾಗಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications