ಡಿ.ಕೆ. ಸುರೇಶ್ಗೆ ಹಿನ್ನಡೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭಾರಿ ಬಿಗಿ ಪೊಲೀಸ್ ಬಂದೋಬಸ್ತ್!
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ತಮ್ಮ ಡಿ.ಕೆ. ಸುರೇಶ್ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಡಾ. ಮಂಜುನಾಥ್ ಸುಮಾರು 50,000 ಮತಗಳ ಅಂತರ ಪಡೆದು ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆ ಅಖಾಡಕ್ಕೆ ಇಳಿದ ಡಾ. ಮಂಜುನಾಥ್ಗೆ ಸಾಕಷ್ಟು ಸವಾಲು ಇದ್ದವು. ಇಷ್ಟೆಲ್ಲಾ ಸವಾಲುಗಳ ನಡುವೆ ಕೂಡ ಬಿಜೆಪಿ & ಜೆಡಿಎಸ್ನ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿ ಡಾ. ಮಂಜುನಾಥ್ ಅವರ ಗೆಲುವಿಗೆ ಶ್ರಮವಹಿಸಿ ಪ್ರಚಾರ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಆರಂಭದಲ್ಲೇ ಡಾ. ಮಂಜುನಾಥ್ ಅವರು ಭಾರಿ ಮುನ್ನಡೆ ಸಾಧಿಸಿದ್ದರು. NDA ಅಭ್ಯರ್ಥಿ ಡಾ.ಮಂಜುನಾಥ್ 86 ಸಾವಿರ ಮತಗಳ ಮುನ್ನಡೆಯ ಸಾಧಿಸಿದ್ದರು. ಆ ನಂತರ ಈ ಅಂತರ 45 ಸಾವಿರ ಮತಗಳಿಗೆ ಕುಸಿತ ಕಂಡರು ಕೂಡ ಈಗಲೂ ಡಾ. ಮಂಜುನಾಥ್ ಗೆಲ್ಲುವ ಕುದುರೆ ಆಗಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಡಾ. ಮಂಜುನಾಥ್ ಗೆಲುವು ಗ್ಯಾರಂಟಿ?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಭಾರತದ ಮೂಲೆ ಮೂಲೆಯಲ್ಲಿ ಸದ್ದು ಮಾಡಿ, ಸುದ್ದಿಯಾಗಿತ್ತು. ಯಾಕಂದ್ರೆ ಈ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನ ಕಟ್ಟಿಹಾಕಲು ನೇರ ಬಿಜೆಪಿ ಕೇಂದ್ರ ನಾಯಕರೆ ಸಿದ್ಧತೆ ಮಾಡಿದ್ದರು.
ಅಲ್ಲದೆ ಜೆಡಿಎಸ್ ವರಿಷ್ಠ & ಎಚ್.ಡಿ. ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಅವರನ್ನೇ ಡಿ.ಕೆ. ಸುರೇಶ್ ಅವರ ವಿರುದ್ಧ ಕಣಕ್ಕೆ ಇಳಿಸಿದ್ದರು. ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಡಿ.ಕೆ. ಸುರೇಶ್ ಗೆಲುವಿಗೆ ಬ್ರೇಕ್?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ VS ಬಿಜೆಪಿ ನೇರವಾಗಿ ಹಣಾಹಣಿ ನಡೆಸಿವೆ. ಅತ್ತ ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಸತತ 4ನೇ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದ್ದರೆ, ಮತ್ತೊಂದ್ಕಡೆ ಬಿಜೆಪಿ & ಜೆಡಿಎಸ್ ನಾಯಕರು ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸಿದ್ದರು. ಹೀಗಿದ್ದಾಗ ಗೆಲುವಿಗೆ ಹತ್ತಿರ ಇರುವುದು ಡಿ.ಕೆ. ಸುರೇಶ್ ಅವರು ಎಂಬ ಮಾತುಗಳು ಕೇಳಿಬಂದಿದ್ದವು, ಆದರೆ ಈಗ ನೋಡಿದ್ರೆ ಡಾ. ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications