ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ
ಬೆಂಗಳೂರು, ಆಗಸ್ಟ್ 16 : ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದಾಖಲಾಗಿರುವ ರಾಜದ್ರೋಹದ ಪ್ರಕರಣದಲ್ಲಿ ಆರೋಪದಲ್ಲಿ ವಿಡಿಯೋಗಳು ಪ್ರಮುಖ ದಾಖಲೆಗಳಾಗಿವೆ. ಜೆ.ಸಿ.ನಗರ ಪೊಲೀಸರು ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್ ಫ್ಯಾಮಿಲೀಸ್' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಎಬಿವಿಪಿ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಈ ಕುರಿತು ಸಲ್ಲಿಸಿದ್ದ ದೂರಿನ ಅನ್ವಯ ಜೆ.ಸಿ.ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.[ದೇಶ ವಿರೋಧಿ ಘೋಷಣೆ, ಬೆಂಗಳೂರು ಪೊಲೀಸರಿಂದ FIR]
ಪೊಲೀಸರ ಬಳಿ ಸಿಡಿ ಇದೆ : ಆಗಸ್ಟ್ 13ರಂದು ನಡೆದ 'ಬ್ರೋಕನ್ ಫ್ಯಾಮಿಲೀಸ್' ಕಾರ್ಯಕ್ರಮದ ವಿಡಿಯೋ ಈ ಪ್ರಕರಣದ ತನಿಖೆಗೆ ಪ್ರಮುಖವಾದ ದಾಖಲೆಗಯಾಗಿದೆ. ಪೊಲೀಸರ ಬಳಿ ಕಾರ್ಯಕ್ರಮದ ಸಿಡಿ ಇದ್ದು, ಅದನ್ನು ವಿಧಿವಿಜ್ಞಾನ ಪ್ರಾಯೋಗಾಲಯಕ್ಕೆ ಕಳುಹಿಸಲಾಗಿದೆ.
ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಐಪಿಸಿ ಸೆಕ್ಷನ್ 142 (ಕಾನೂನು ಬಾಹಿರ ಸಭೆ ಆಯೋಜನೆ), 147 (ಗಲಭೆಗೆ ಪ್ರಚೋದನೆ), 124 (ಎ) ರಾಜದ್ರೋಹ, 153 (ಎ) ಎರಡು ಗುಂಪುಗಳ ನಡುವೆ ಜಾತಿ, ಜನಾಂಗದ ಹೆಸರಿನಲ್ಲಿ ದ್ವೇಷ ಬಿತ್ತುವುದು ಮುಂತಾದ ಆರೋಪಗಳಡಿ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮಕ್ಕೆ ಪೊಲೀಸರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮ ನಡೆಯುವಾಗ ಪೊಲೀಸರು ಅಲ್ಲಿದ್ದರು. ಆದರೆ, ಈಗ ನಮ್ಮ ವಿರುದ್ಧ ರಾಜದ್ರೋಹದ ಆರೋಪದಡಿ ಎಫ್ಐಆರ್ ದಾಖಲು ಮಾಡುವುದು ಕಾನೂನು ಪ್ರಕಾರ ಸರಿಯೇ? ಎಂದು ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶ್ನಿಸಿದೆ. ಕಾರ್ಯಕ್ರಮದ ಬಗ್ಗೆ ತನ್ನ ವೆಬ್ಸೈಟ್ನಲ್ಲಿ ಸ್ಪಷ್ಟನೆ ಕೊಟ್ಟಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications