ಬನ್ನೇರುಘಟ್ಟಕ್ಕೆ ಅಕ್ರಮ ಪ್ರವೇಶ, ಸೆಲ್ಫಿ ತೆಗೆಯುವಾಗ ಆನೆಯಿಂದ ಸಾವು
ಬೆಂಗಳೂರು, ಜುಲೈ 27: ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಅಕ್ರಮವಾಗಿ ಪ್ರವೇಶ ಪಡೆದ ವ್ಯಕ್ತಿಯೊಬ್ಬ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ದುರಂತ ಸಾವಿಗೀಡಾಗಿದ್ದಾನೆ.
27 ವರ್ಷದ ಅಭಿಲಾಷ್ ಮೃತ ಯುವಕ. ಉದ್ಯಾನವನ್ನು ಅಕ್ರಮವಾಗಿ ಪ್ರವೇಶಿಸಿದ ಆತ ಆನೆ 'ಸುಂದರ್' ಜತೆಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾನೆ. ಬೆಂಗಳೂರಿನ ಹನುಮಂತನಗರದ ನಿವಾಸಿಯಾದ ಆತ ಮಾರಾಟ ಪ್ರತಿನಿಧಿಯಾಗಿ ಉದ್ಯೋಗ ಮಾಡುತ್ತಿದ್ದ.

ಮಂಗಳವಾರ ಸಂಜೆ ಅಭಿಲಾಷ್ ಮತ್ತು ಸ್ನೇಹಿತರು ಉದ್ಯಾನದೊಳಕ್ಕೆ ತೆರಳಿದ್ದಾರೆ. ಮಂಗಳವಾರ ಉದ್ಯಾನ ಬಂದ್ ಆಗಿರುತ್ತದೆ. ಇವರೆಲ್ಲ ಹಕ್ಕಿಪಿಕ್ಕಿ ಕಾಲೋನಿ ಕಡೆಯಿಂದ ಒಳ ಪ್ರವೇಶಿಸಿದ್ದಾರೆ.
ಅಭಿಲಾಷ್ ಮತ್ತು ಆತನ ಮೂವರು ಸ್ನೇಹಿತರು ಮದ್ಯಪಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಪ್ಪತ್ತು ಆನೆಗಳನ್ನು ಒಂದೇ ಕಡೆ ಇರಿಸಿದ್ದ ಸ್ಥಳಕ್ಕೆ ತೆರಳಿದ್ದಾರೆ.
ಯಾವಾಗ ಆನೆಗಳು ಅಭಿಲಾಷ್ ಮೇಲೆ ದಾಳಿಗೆ ಮುಂದಾದವೋ ಇತರ ಮೂವರು ಅಲ್ಲಿಂದ ಓಡಿ ಹೋಗಿದ್ದಾರೆ. ಸುಮ್ಮನಾಗಿದ್ದಾರೆ. ಆದರೆ ಮಂಗಳವಾರ ಸಂಜೆ ಅಭಿಲಾಷ್ ಜತೆಗೆ ಇದ್ದುದಾಗಿ ಒಪ್ಪಿಕೊಂಡಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ ಅಭಿಲಾಷ್ ಗೆ ಆನೆಗಳೆಂದರೆ ಬಲು ಇಷ್ಟವಿತ್ತು. ತೀರಾ ತಂಟೆಕೋರ ಆನೆಗಳೆಂದು ಅವುಗಳನ್ನು ಒಂದೆಡೆ ಇಟ್ಟು, ತರಬೇತಿ ನೀಡಲಾಗುತ್ತಿತ್ತು. ತೀರಾ ಆಕ್ರಮಣಕಾರಿ ಧೋರಣೆಯ ಸುಂದರ್ ಎಂಬ ಆನೆಯಿಂದ ಅಭಿಲಾಷ್ ಮೃತಪಟ್ಟಿದ್ದಾನೆ. ಆ ಬಗ್ಗೆ ಉದ್ಯಾನದ ನೌಕರರೊಬ್ಬರು ನಿರ್ದೇಶಕ ಸಂತೋಷ್ ಗೆ ಮಾಹಿತಿ ಕೊಟ್ಟಿದ್ದಾರೆ.
ಆ ನಂತರ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಪ್ರಗತಿಯಲ್ಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications