ಡಿವಿಜಿ ರಾಜಕೀಯ ವಿಚಾರಧಾರೆ ಕುರಿತು ಚಿಂತನ-ಮಂಥನ
ಬೆಂಗಳೂರು, ಮಾ. 15 : ಸಮಾಜ ಸೇವಕರ ಸಮಿತಿ ಬೆಂಗಳೂರು ಡಿವಿಜಿ ಯವರ ರಾಜಕೀಯ ವಿಚಾರಧಾರೆಯ ಕುರಿತ ವಿಶೇಷ ಚಿಂತನ ಮಂಥನ ದೊಂದಿಗೆ ಅವರ 127ನೆ ಹುಟ್ಟುಹಬ್ಬವನ್ನು ಆಚರಿಸುತ್ತಿದೆ. ಮಾ.17ರಂದು ಈ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ.
ಡಿವಿ ಗುಂಡಪ್ಪ (ಡಿವಿಜಿ) ಡಿವಿಜಿ ಯವರು ಕೇವಲ ಕವಿ, ದಾರ್ಶನಿಕ, ಸಾಹಿತಿ ಮಾತ್ರ ಆಗಿರಲಿಲ್ಲ. ಆ ಕಾಲದ ಪ್ರಖರ ರಾಜಕೀಯ ಚಿಂತಕರೂ ಆಗಿದ್ದರು ಎಂಬ ವಿಚಾರ ಬಹುತೇಕರಿಗೆ ಗೊತ್ತಿಲ್ಲ. 1920ರ ಹೊತ್ತಿನಲ್ಲೇ ಡಿವಿಜಿ ಪ್ರಜಾ ಸರ್ಕಾರ ಹೇಗಿರಬೇಕು, ರಾಜಕೀಯ ವ್ಯವಸ್ಥೆಯ ಸುಧಾರಣೆಗಳು ಮುಂತಾದ ವಿಷಯಗಳ ಕುರಿತು ಲೇಖನ ಬರೆದಿದ್ದರು.

ಹಾ.ಮಾ. ನಾಯಕರ ಸಂಪಾದಕತ್ವದಲ್ಲಿ ಮೂಡಿಬಂದ 'ಡಿವಿಜಿ ಕೃತಿಶ್ರೇಣಿ'ಯ ಐದನೇ ಸಂಪುಟ 'ರಾಜ್ಯಶಾಸ್ತ್ರ - ರಾಜ್ಯಾಂಗ' ಡಿವಿಜಿ ಯವರ ರಾಜಕೀಯ ವಿಚಾರಧಾರೆಯನ್ನು ಸಮಗ್ರವಾಗಿ ಪರಿಚಯಿಸುವ ಪುಸ್ತಕವಾಗಿದೆ. ಇಡೀ ರಾಜಕೀಯ ವ್ಯವಸ್ಥೆಯೇ ಭ್ರಷ್ಟ ಎನ್ನಿಸುತ್ತಿರುವ ಈ ಹೊತ್ತಿನಲ್ಲಿ ಡಿವಿಜಿ ಯವರ ವಿಚಾರಗಳು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತ.
ಈ ಹಿನ್ನೆಲೆಯಲ್ಲಿ ಸಮಾಜ ಸೇವಕರ ಸಮಿತಿ ಮಾರ್ಚ್ 17ರ ಸೋಮವಾರ ಸಂಜೆ 5.30ಕ್ಕೆ ಬಸವನಗುಡಿಯ ಬಿ.ಪಿ. ವಾಡಿಯ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಡಿವಿಜಿ ಯವರ 'ರಾಜ್ಯಾಂಗ ತತ್ವಗಳು' ಕುರಿತ ವಿಶೇಷ ಉಪನ್ಯಾಸ, ಅವರ ಕೃತಿಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ. ಖ್ಯಾತ ಪತ್ರಕರ್ತ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ಖ್ಯಾತ ನಟ, ನಿರ್ದೇಶಕ ಎಸ್.ಎನ್.ಸೇತುರಾಮ್ ಭಾಗವಹಿಸಲಿದ್ದಾರೆ.
ಡಿವಿಜಿ ಉಪನ್ಯಾಸ ಸರಣಿ : ತುಮಕೂರಿನ ಸರಸ್ ಮಾಧ್ಯಮ ಸಂಪರ್ಕ ಸಂಸ್ಥೆಯು ನಡೆಸುತ್ತಿರುವ ಡಿವಿಜಿ ನೆನಪು'' ಶೀರ್ಷಿಕೆಯ ಮಾಸಿಕ ಚಿಂತನಶೀಲ, ಜನಪ್ರಿಯ ಉಪನ್ಯಾಸ ಕಾರ್ಯಕ್ರಮವು 25 ನೇ ತಿಂಗಳಿಗೆ ಪಾದಾರ್ಪಣೆ ಮಾಡುತ್ತಿದೆ. ಮಾರ್ಚ್ 17 ರಂದು ಸೋಮವಾರ ಸಂಜೆ 6.30 ಕ್ಕೆ ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯ ರಸ್ತೆಯಲ್ಲಿರುವ ಗಾಯತ್ರಿ ಸಮುದಾಯ ಭವನದಲ್ಲಿ 25 ನೇ ತಿಂಗಳಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಹಾಗೂ ಈ ಮಾಲಿಕೆಯ ಪ್ರಧಾನ ಉಪನ್ಯಾಸಕರಾದ ಶ್ರೀ ಸ್ವಾಮಿ ಜಪಾನಂದಜಿಯವರು ಕಾರ್ಯಕ್ರಮದ ಸಾನಿಧ್ಯ ವಹಿಸಿ "ಮತ್ತೆ ತೋರ್ಪುದು ನಾಳೆ- ಮಂಕುತಿಮ್ಮ" ಎಂಬ ಬಗ್ಗೆ ಉಪನ್ಯಾಸ ನೀಡುವರು. ಮುಖ್ಯಅತಿಥಿಗಳಾಗಿ ಗುಬ್ಬಿಯ ಚನ್ನಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ (ಸಿಐಟಿ) ನಿರ್ದೇಶಕರಾದ ಡಾ. ಡಿ.ಎಸ್.ಸುರೇಶ್ ಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications