ಡಿವಿಜಿ ರಾಜಕೀಯ ವಿಚಾರಧಾರೆ ಕುರಿತು ಚಿಂತನ-ಮಂಥನ
ಬೆಂಗಳೂರು, ಮಾ. 15 : ಸಮಾಜ ಸೇವಕರ ಸಮಿತಿ ಬೆಂಗಳೂರು ಡಿವಿಜಿ ಯವರ ರಾಜಕೀಯ ವಿಚಾರಧಾರೆಯ ಕುರಿತ ವಿಶೇಷ ಚಿಂತನ ಮಂಥನ ದೊಂದಿಗೆ ಅವರ 127ನೆ ಹುಟ್ಟುಹಬ್ಬವನ್ನು ಆಚರಿಸುತ್ತಿದೆ. ಮಾ.17ರಂದು ಈ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ.
ಡಿವಿ ಗುಂಡಪ್ಪ (ಡಿವಿಜಿ) ಡಿವಿಜಿ ಯವರು ಕೇವಲ ಕವಿ, ದಾರ್ಶನಿಕ, ಸಾಹಿತಿ ಮಾತ್ರ ಆಗಿರಲಿಲ್ಲ. ಆ ಕಾಲದ ಪ್ರಖರ ರಾಜಕೀಯ ಚಿಂತಕರೂ ಆಗಿದ್ದರು ಎಂಬ ವಿಚಾರ ಬಹುತೇಕರಿಗೆ ಗೊತ್ತಿಲ್ಲ. 1920ರ ಹೊತ್ತಿನಲ್ಲೇ ಡಿವಿಜಿ ಪ್ರಜಾ ಸರ್ಕಾರ ಹೇಗಿರಬೇಕು, ರಾಜಕೀಯ ವ್ಯವಸ್ಥೆಯ ಸುಧಾರಣೆಗಳು ಮುಂತಾದ ವಿಷಯಗಳ ಕುರಿತು ಲೇಖನ ಬರೆದಿದ್ದರು.

ಹಾ.ಮಾ. ನಾಯಕರ ಸಂಪಾದಕತ್ವದಲ್ಲಿ ಮೂಡಿಬಂದ 'ಡಿವಿಜಿ ಕೃತಿಶ್ರೇಣಿ'ಯ ಐದನೇ ಸಂಪುಟ 'ರಾಜ್ಯಶಾಸ್ತ್ರ - ರಾಜ್ಯಾಂಗ' ಡಿವಿಜಿ ಯವರ ರಾಜಕೀಯ ವಿಚಾರಧಾರೆಯನ್ನು ಸಮಗ್ರವಾಗಿ ಪರಿಚಯಿಸುವ ಪುಸ್ತಕವಾಗಿದೆ. ಇಡೀ ರಾಜಕೀಯ ವ್ಯವಸ್ಥೆಯೇ ಭ್ರಷ್ಟ ಎನ್ನಿಸುತ್ತಿರುವ ಈ ಹೊತ್ತಿನಲ್ಲಿ ಡಿವಿಜಿ ಯವರ ವಿಚಾರಗಳು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತ.
ಈ ಹಿನ್ನೆಲೆಯಲ್ಲಿ ಸಮಾಜ ಸೇವಕರ ಸಮಿತಿ ಮಾರ್ಚ್ 17ರ ಸೋಮವಾರ ಸಂಜೆ 5.30ಕ್ಕೆ ಬಸವನಗುಡಿಯ ಬಿ.ಪಿ. ವಾಡಿಯ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಡಿವಿಜಿ ಯವರ 'ರಾಜ್ಯಾಂಗ ತತ್ವಗಳು' ಕುರಿತ ವಿಶೇಷ ಉಪನ್ಯಾಸ, ಅವರ ಕೃತಿಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ. ಖ್ಯಾತ ಪತ್ರಕರ್ತ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ಖ್ಯಾತ ನಟ, ನಿರ್ದೇಶಕ ಎಸ್.ಎನ್.ಸೇತುರಾಮ್ ಭಾಗವಹಿಸಲಿದ್ದಾರೆ.
ಡಿವಿಜಿ ಉಪನ್ಯಾಸ ಸರಣಿ : ತುಮಕೂರಿನ ಸರಸ್ ಮಾಧ್ಯಮ ಸಂಪರ್ಕ ಸಂಸ್ಥೆಯು ನಡೆಸುತ್ತಿರುವ ಡಿವಿಜಿ ನೆನಪು'' ಶೀರ್ಷಿಕೆಯ ಮಾಸಿಕ ಚಿಂತನಶೀಲ, ಜನಪ್ರಿಯ ಉಪನ್ಯಾಸ ಕಾರ್ಯಕ್ರಮವು 25 ನೇ ತಿಂಗಳಿಗೆ ಪಾದಾರ್ಪಣೆ ಮಾಡುತ್ತಿದೆ. ಮಾರ್ಚ್ 17 ರಂದು ಸೋಮವಾರ ಸಂಜೆ 6.30 ಕ್ಕೆ ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯ ರಸ್ತೆಯಲ್ಲಿರುವ ಗಾಯತ್ರಿ ಸಮುದಾಯ ಭವನದಲ್ಲಿ 25 ನೇ ತಿಂಗಳಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಹಾಗೂ ಈ ಮಾಲಿಕೆಯ ಪ್ರಧಾನ ಉಪನ್ಯಾಸಕರಾದ ಶ್ರೀ ಸ್ವಾಮಿ ಜಪಾನಂದಜಿಯವರು ಕಾರ್ಯಕ್ರಮದ ಸಾನಿಧ್ಯ ವಹಿಸಿ "ಮತ್ತೆ ತೋರ್ಪುದು ನಾಳೆ- ಮಂಕುತಿಮ್ಮ" ಎಂಬ ಬಗ್ಗೆ ಉಪನ್ಯಾಸ ನೀಡುವರು. ಮುಖ್ಯಅತಿಥಿಗಳಾಗಿ ಗುಬ್ಬಿಯ ಚನ್ನಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ (ಸಿಐಟಿ) ನಿರ್ದೇಶಕರಾದ ಡಾ. ಡಿ.ಎಸ್.ಸುರೇಶ್ ಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications