ಜಾಫರ್ ಷರೀಫ್ ಗೆ ಅಂತಿಮ ನಮನ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ನವೆಂಬರ್ 26: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ಅವರ ಅಂತಿಮ ದರ್ಶನ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ 50 ವರ್ಷದಿಂದ ನಾನು ಅವರನ್ನ ಸಾಕಷ್ಟು ಬಲ್ಲೆ. ಕಾಂಗ್ರೆಸ್ ನ ಹಿರಿಯ ನಾಯಕರು ಅವರು. ಸೋನಿಯಾ ಗಾಂಧಿಯವರಿಗೆ, ಇಂದಿರಾ ಗಾಂಧಿ, ನಿಜಲಿಂಗಪ್ಪ ಅವರಿಗೆ ಬಹಳ ಆತ್ಮೀಯರಾಗಿದ್ದರು.ಅವರ ಸಾವಿನಿಂದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದರು.
ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ನನ್ನನ್ನು ಅವರು ಆಹ್ವಾನಿಸಿದ್ದರು. ಆದರೆ ಅದಕ್ಕಿಂದ ಮುಂಚೆ ಅವರನ್ನು ಈ ರೀತಿ ನೋಡುತ್ತೇನೆ ಅಂತ ಅಂದುಕೊಂಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನ: ಜಾಫರ್ ಶರೀಫ್ ಅಂತಿಮ ದರ್ಶನಕ್ಕೆ ಕೆಪಿಸಿಸಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.ಮಧ್ಯಾಹ್ನ ಕೆಪಿಸಿಸಿಯಲ್ಲಿ ಜಾಫರ್ ಶರೀಫ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 12.15 ಕ್ಕೆ ಕೆಪಿಸಿಸಿ ಕಚೇರಿಗೆ ಜಾಫರ್ ಶರೀಫ್ ಪಾರ್ಥಿವ ಶರೀರ ರವಾನೆಯಾಗಿದೆ.
ಕೆಪಿಸಿಸಿಯಲ್ಲಿ ಸುಮಾರು ಅರ್ಧ ತಾಸು ಅಂತಿಮ ದರ್ಶನ ನಡೆಯಲಿದೆ. ನಂತರ ಮಿಲ್ಲರ್ಸ್ ರಸ್ತೆಯಲ್ಲಿನ ಜುಮ್ಮಾ ಮಸ್ಜಿದ್ ಗೆ ಜಾಫರ್ ಶರೀಫ್ ಪಾರ್ಥಿವ ಶರೀರ ರವಾನೆಯಾಗಲಿದ್ದು, ಅಂತ್ಯ ಸಂಸ್ಕಾರ ನೆರವೇರಲಿದೆ.












Click it and Unblock the Notifications