ಕನ್ನಡ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೊರೊನಾದಿಂದ ಸಾವು
ಬೆಂಗಳೂರು, ಜುಲೈ 18: ಕನ್ನಡ ಚಿತ್ರರಂಗದ ಹಿರಿಯ ನಟ ಹುಲಿವಾನ್ ಗಂಗಾಧರಯ್(70) ಕೊರೊನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
Recommended Video
Corona ಹೋರಾಟದಲ್ಲಿ ಭಾರತ ಮುಖ್ಯ ಪಾತ್ರ | Oneindia Kannada
ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ.ಉಸಿರಾಟದ ಸಮಸ್ಯೆ ಇದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಪ್ರಸ್ತುತ ಜನಪ್ರಿಯ ಟಿವಿ ಧಾರಾವಾಹಿ "ಪ್ರೇಮಲೋಕ ದಲ್ಲಿ ಅಭಿನಯಿಸುತ್ತಿದ್ದ ಗಂಗಾಧರಯ್ಯನವರಿಗೆ ಶೂಟಿಂಗ್ ನಲ್ಲಿದ್ದಾಗಲೇ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಗಂಗಾಧರಯ್ಯ ಸುಮಾರು 118 ಸಿನಿಮಾ ಮತ್ತು , 1500 ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಶಬ್ದವೇಧಿ ಸೇರಿ ಅನೇಕ ಸಿನಿಮಾಗಳಲ್ಲಿ ಗಂಗಾಧರಯ್ಯ ಪೋಷಕ ಪಾತ್ರ ನಿರ್ವಹಿಸಿದ್ದರು.












Click it and Unblock the Notifications