ಹಿರಿಯ ಆರೆಸ್ಸೆಸ್ ಪ್ರಚಾರಕ ಮೈಚ ಜಯದೇವ್ ನಿಧನ
ಹಿರಿಯ ಆರೆಸ್ಸೆಸ್ ಪ್ರಚಾರಕ್ ಮೈಚ ಜಯದೇವ್ (1934-2017) ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಮಧಾಹ್ನ 12.30ರ ನಂತರ ಚಾಮರಾಜಪೇಟೆಯ ಕೇಶವ ಕೃಪಾದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ
ಬೆಂಗಳೂರು, ಫೆಬ್ರವರಿ 20: ಹಿರಿಯ ಆರೆಸ್ಸೆಸ್ ಪ್ರಚಾರಕ್ ಎಂಸಿ ಜಯದೇವ್ (83) ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಸೋಮವಾರ ಬೆಳಗ್ಗೆ 9ಕ್ಕೆ ಸಾಗರ್ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.
ಜಯದೇವ್ ಅವರ ಪಾರ್ಥಿವ ಶರೀರವನ್ನು ಸೋಮವಾರ (ಫೆಬ್ರವರಿ 20) ರಾತ್ರಿ 7.30ರವರೆಗೆ ಅಂತಿಮ ದರ್ಶನಕ್ಕಾಗಿ ಕೇಶವಕೃಪಾದಲ್ಲಿ ಇಡಲಾಗುವುದು. ಫೆ.21ರಂದು ಮಧ್ಯಾಹ್ನ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಜಯದೇವ್ ಅವರು ಮೈಸೂರಿನಲ್ಲಿ ಫೆಬ್ರವರಿ 9, 1934ರಲ್ಲಿ ಜನಿಸಿದ್ದರು. ಅವರ ತಂದೆ ಹೆಸರು ಚನ್ನಬಸಪ್ಪ.[ಕಮ್ಯೂನಿಸ್ಟರ ರಕ್ತದಾಹ: ಕೇರಳದಲ್ಲಿ ಸಂಘ ಪರಿವಾರದ 'ತಲೆ' ಗಳಿಗೆ ಬೆಲೆಯಿಲ್ಲ ಕಾಂತಾ!]

ವಾಣಿಜ್ಯ ಪದವೀಧರರಾಗಿದ್ದ ಅವರು, ನಂತರ ಕಾನೂನು ವ್ಯಾಸಂಗ ಮಾಡಿದ್ದರು. ಕಾಲೇಜು ದಿನಗಳಲ್ಲಿ ಅವರು ಆರ್ ಎಸ್ ಎಸ್ ನ ಸ್ವಯಂಸೇವಕರಾದರು. ಆ ನಂತರ ಸಂಘಟನೆಯ ಸಕ್ರಿಯ ಸದಸ್ಯರಾದರು. ಬೆಂಗಳೂರಿನ ಹಿಂದೂಸ್ತಾನ್ ಗ್ಯಾರೇಜ್ ಮೋಟಾರ್ಸ್ ನಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದರು.
1960ರಲ್ಲಿ ಜಯದೇವ್ ಅವರು ಆರ್ ಎಸ್ ಎಸ್ ನ ಬೆಂಗಳೂರು ಮಹಾನಗರ್ ಕಾರ್ಯನಿರ್ವಾಹ್ ಆದರು. 1975ರವರೆಗೆ ಈ ಜವಾಬ್ದಾರು ನಿರ್ವಹಿಸಿದರು. ತುರ್ತು ಪರಿಸ್ಥಿತಿ ವೇಳೆಯಲ್ಲಿ ಅವರು ಎರಡು ವರ್ಷಗಳ ಕಾಲ ಜೈಲುವಾಸ ಅನುಭವಿಸಿದರು. ರಾಷ್ಟ್ರೋತ್ಥಾನ ಪರಿಷತ್ ನ ಸ್ಥಾಪಕರ ಪೈಕಿ ಅವರೂ ಒಬ್ಬರಾಗಿದ್ದರು.[ತುಮಕೂರಿನಲ್ಲಿ ಆರ್ ಎಸ್ ಎಸ್ ಪಥ ಸಂಚಲನ ತಡೆದ ಪೊಲೀಸರು ]
1961ರಿಂದ 1995ರವರೆಗೆ ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ನಿರ್ವಾಹಕರಾಗಿ ಕಾರ್ಯ ನಿರ್ವಹಿಸಿದರು. 2002ರಲ್ಲಿ ಸಹ್ ಕ್ಷೇತ್ರಿಯ್ ಪ್ರಚಾರಕ್, 2004ರಲ್ಲಿ ಕ್ಷೇತ್ರಿಯ್ ಪ್ರಚಾರಕ್, 2012ರಲ್ಲಿ ಅಖಿಲ್ ಭಾರತೀಯ ಕಾರ್ಯಕಾರಿಣಿ ಸದಸ್ಯ, 2015ರ ಮಾರ್ಚ್ ನಿಂದ ಹಿರಿಯ ಪ್ರಚಾರಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆರ್ ಎಸ್ ಎಸ್ ಸರಸಂಘಚಾಲಕ್ ಮೋಹನ್ ಭಾಗ್ವತ್, ದತ್ತಾತ್ರೇಯ ಹೊಸಬಾಳೆ, ಮಂಗೇಶ್ ಭಿಂಡೆ, ಸಿಆರ್ ಮುಕುಂದ ಸೇರಿದಂತೆ ಸಂಘಟನೆಯ ಹಲವು ಮುಖಂಡರು ಜಯದೇವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications